ರಂಗಭೂಮಿ ಹಲವುಗಳ ಸೃಷ್ಟಿಕರ್ತ: ಜೆ.ಲೋಕೇಶ್‌


Team Udayavani, Nov 22, 2017, 11:55 AM IST

rangabhoomi.jpg

ಬೆಂಗಳೂರು: ರಂಗಭೂಮಿ ಹಲವುಗಳ ಸೃಷ್ಟಿ ಕರ್ತ. ಎಲ್ಲವನ್ನೂ ಇದು ಕಲಿಸುತ್ತೇ. ಹೀಗಾಗಿ ಮಕ್ಕಳು ಮೊಬೈಲ್‌, ಟಿವಿ ಸಂಸ್ಕೃತಿಯನ್ನು ಬಿಟ್ಟು, ರಂಗಭೂಮಿ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷ ಜೆ.ಲೋಕೇಶ್‌ ಸಲಹೆ ನೀಡಿದರು. ನಗರದಲ್ಲಿ ಮಂಗಳವಾರ ಜೆಎಸ್‌ಎಸ್‌ ಮಹಾವಿದ್ಯಾಪೀಠ ಶಿವರಾತ್ರೀಶ್ವರ ಕೇಂದ್ರಲ್ಲಿ ಆಯೋಜಿಸಿದ್ದ, ಜೆಎಸ್‌ಎಸ್‌ ರಂಗೋತ್ಸವ ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮನುಷ್ಯ ಬೆಳಕಿಲ್ಲದ ದಾರಿಯಲ್ಲಿ ಸಾಗಬಹುದು. ಆದರೆ ಕನಸುಗಳೇ ಇಲ್ಲದ ದಾರಿಯಲ್ಲಿ ನಡೆಯುವುದು ಅಸಾಧ್ಯ. ಹೀಗಾಗಿ ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ಭವಿಷತ್ತಿನ ಕನಸು ಕಾಣಬೇಕು. ಆರೋಗ್ಯಕರವಾದ ಕನಸು ಕಂಡಾಗ ಮಾತ್ರ ನಮ್ಮನ್ನು ನಾವು ಸೃಷ್ಟಿಸಿಕೊಳ್ಳಬಹುದು. ಚಂದ್ರಲೋಕಕ್ಕೂ ತೆರಳಬಹುದು ಎಂದರು.

ಮಕ್ಕಳು ಇಂದು ಮೊಬೈಲ್‌ ಸಂಸ್ಕೃತಿಕೆಗೆ ಒಗ್ಗಿಕೊಂಡಿದ್ದಾರೆ. ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಇದರಿಂದ ದೊರವಿರಲು ಮಕ್ಕಳು ರಂಗಭೂಮಿಯತ್ತ ಚಿತ್ತಹರಿಸಬೇಕು. ಪ್ರತಿಯೊಬ್ಬರಲ್ಲಿ ಒಂದೊಂದು ಪ್ರತಿಭೆ ಹುದುಗಿದ್ದು ಅದನ್ನು ನಾವೇ ಹೊರತಗಿಯಬೇಕು. ಮುಂದಿನ ಪೀಳಿಗೆಯ ಮಾರ್ಗದಶಕರಾಗುವ ವಿದ್ಯಾರ್ಥಿಗಳು ಹೊಸತರತ್ತ ಚಿತ್ತ ಹರಿಸಿ ಎಂದು ತಿಳಿಸಿದರು.

ಅಖೀಲಭಾರತ ಶರಣ ಸಾಹಿತ್ಯ ಪರಿಷತ್‌ ಬೆಂಗಳೂರು ಘಟಕದ ಅಧ್ಯಕ್ಷ ಕೆ.ವಿ.ನಾಗರಾಜಮೂರ್ತಿ ಮಾತನಾಡಿ, ನಾಟಕ ರಂಗವು ಬಿ.ವಿ.ಕಾರಂತ, ಪ್ರೇಮಕಾರಂತ ಸೇರಿದಂತೆ ಹಲವು ದಿಗ್ಗಜರನ್ನು ಹುಟ್ಟುಹಾಕಿತು. ಈ ಮಹಾನ್‌ ಕಲಾವಿದರು ಮಕ್ಕಳ ರಂಗಭೂಮಿಯನ್ನು ಹುಟ್ಟುಹಾಕಿದರು.

ಆದರೆ ಇಂದು ಮಕ್ಕಳು ರಂಗಭೂಮಿಯತ್ತ ಆಸಕ್ತಿ ತೋರುತ್ತಿಲ್ಲ. ಅಪಾಯಕಾರಿ ವಸ್ತುಗಳನ್ನಿಟ್ಟುಕೊಂಡು ಜೀವನ ಕಳೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ನಾಟಕ ಅಕಾಡೆಮಿ, ಕಾಲೇಜು ರಂಗೋತ್ಸವದಂತೆ ಮಕ್ಕಳ ನಾಟಕೋತ್ಸವದ ಕಡೆಗೂ ಹೆಚ್ಚು ಗಮನ ನೀಡುವಂತೆ ಒತ್ತಾಯಿಸಿದರು.

ಕೆಲವು ನಿರ್ದೇಶಕರು ಬರೀ ಪೌರಾಣಿಕ ಕಥಾವಸ್ತುಗಳನ್ನು ರಂಗದ ಮೇಲೆ ಇಡುತ್ತಿದ್ದಾರೆ. ಇದರ ಜೊತೆ ರಂಗಭೂಮಿಯನ್ನು ಪ್ರಯೋಗ ಶಾಲೆಯನ್ನಾಗಿ ಮಾಡಿಕೊಳ್ಳಬೇಕು. ವಾಸ್ತವದ ವಿಷಯಗಳನ್ನಿಟ್ಟುಕೊಂಡೇ ನಾಟಕಗಳನ್ನು ಸೃಷ್ಟಿಸಿ ರಂಗ ಭೂಮಿಯ ಮೇಲೆ ಪ್ರಯೋಗ ಮಾಡಬೇಕು ಆಗ ಹೊಸತರ ಅವಿರ್ಭವ ಸಾಧ್ಯ ಎಂದರು. ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್‌ನ ಗೌರವ ಸಲಹೆಗಾರ, ಡಾ.ಗೊ.ರು.ಚನ್ನಬಸಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.