ಬೆಂವಿವಿ ದೂರ ಶಿಕ್ಷಣಕ್ಕೆ ಹೆಚ್ಚಿದ ಬೇಡಿಕೆ


Team Udayavani, Nov 22, 2017, 11:57 AM IST

bvvclr.jpg

ಬೆಂಗಳೂರು: ಮೈಸೂರಿನ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಯುಜಿಸಿ ಮಾನ್ಯತೆ ಪಡೆಯಲು ವಿಫ‌ಲವಾಗಿದ್ದರಿಂದ ಬೆಂಗಳೂರು ವಿಶ್ವವಿದ್ಯಾಲಯ ಅಂಚೆ ತೆರಪು ಹಾಗೂ ದೂರ ಶಿಕ್ಷಣ ನಿರ್ದೇಶನಾಲಯದ ವಿವಿಧ ಕೋರ್ಸ್‌ಗಳಿಗೆ ಈಗ ಬೇಡಿಕೆ ಹೆಚ್ಚಾಗಿದೆ.

ಉದ್ಯೋಗ ಅಥವಾ ಇನ್ನಿತರೇ ಒತ್ತಡದಿಂದ ಪಿಯುಸಿ ನಂತರದ ಶಿಕ್ಷಣ ಪಡೆಯಲು ಸಾಧ್ಯವಾಗದ ಅನೇಕರು ಉನ್ನತ ಶಿಕ್ಷಣ ಮುಂದುವರಿಸಲು ಸಹಜವಾಗಿಯೇ ಅಂಚೆ ತೆರಪಿನ ಕೋರ್ಸ್‌ಗಳ ಮೊರೆ ಹೋಗುತ್ತಾರೆ. ಕಲಾ ಮತ್ತು ವಾಣಿಜ್ಯ ವಿಭಾಗದ ಪದವಿ ಸ್ನಾತಕೋತ್ತರ ಪದವಿಯನ್ನು ಎಲ್ಲಾ ವಿಶ್ವವಿದ್ಯಾಲಯದ ಅಂಚೆತೆರಪಿನ ಹಾಗೂ ದೂರಶಿಕ್ಷಣ ನಿರ್ದೇಶನಾಲಯದಿಂದ ನೀಡಲಾಗುತ್ತದೆ.

ಇದರ ಜತೆಗೆ ರಾಜ್ಯ ಸರ್ಕಾರ ದೂರ ಶಿಕ್ಷಣದ ಮೂಲಕವೇ ಪದವಿ, ಸ್ನಾತಕೋತ್ತರ ಪದವಿ ಪಡೆಯುವವರ ಅನುಕೂಲಕ್ಕಾಗಿ ಮೈಸೂರಿನಲ್ಲಿ ರಾಜ್ಯ ಮುಕ್ತ ವಿಶ್ವವಿದ್ಯಾಲಯ ತೆರೆದಿದೆ. 2013ರ ನಂತರ ಮೈಸೂರಿನ ಕೆಎಸ್‌ಒಯು ಕೆಲವೊಂದು ಕೋರ್ಸ್‌ಗಳಿಗೆ ಯುಜಿಸಿ ಮಾನ್ಯತೆ ಪಡೆಯಲು ಸಂಪೂರ್ಣ ವಿಫ‌ಲವಾಗಿದೆ.

ಇದೇ ಕಾರಣದಿಂದ ಬೆಂಗಳೂರು ವಿವಿಯ ಅಂಚೆ ತೆರಪು ಹಾಗೂ ದೂರ ಶಿಕ್ಷಣ ನಿರ್ದೇಶನಾಲಯದಿಂದ ನೀಡುವ ಬಿ.ಎ, ಬಿ.ಕಾಂ, ಬಿಬಿಎ ಹಾಗೂ ಅರ್ಥಶಾಸ್ತ್ರ, ಇತಿಹಾಸ, ಇಂಗ್ಲಿಷ್‌ ಮೊದಲಾದ ವಿಷಯದ ಎಂ.ಎ, ಎಂ.ಕಾಂ ಜತೆಗೆ ಕೆಲವೊಂದು ಡಿಪ್ಲೊಮಾ ಕೋರ್ಸ್‌ಗೆ ಬೇಡಿಕೆ ಹೆಚ್ಚಿದೆ. 

ಇಲ್ಲೂ ವಿಳಂಬವಾಗಿತ್ತು: 2017-18 ನೇ ಸಾಲಿಗೆ ಮಾನ್ಯತೆ ಪಡೆಯಬೇಕಿರುವ ಬೆಂವಿವಿ ದೂರ ಶಿಕ್ಷಣ ಸಂಸ್ಥೆಯ ಸೆ.23ರೊಳಗೆ ಯುಜಿಸಿಗೆ ಅಗತ್ಯ ದಾಖಲೆ ಸಲ್ಲಿಸಬೇಕಿತ್ತು. 2016-17ನೇ ಸಾಲಿನ ಪ್ರವೇಶಾತಿಯ ದತ್ತಾಂಶ, ಅಧ್ಯಯನ ಕೇಂದ್ರಗಳ ಮಾಹಿತಿ, ಸಿಬ್ಬಂದಿ ಮಾಹಿತಿ, ಮುಂದಿನ ಕಾರ್ಯಯೋಜನೆಗಳು ಹಾಗೂ ಹೊಸ ಕೋರ್ಸ್‌ಗಳ ಅವಶ್ಯಕತೆಯ ಬಗ್ಗೆ ಮಾಹಿತಿ ನಿಗದಿತ ಸಮಯದಲ್ಲಿ ನೀಡಬೇಕಿತ್ತು.

ಹಿಂದಿನ ನಿರ್ದೇಶಕರ ನಿವೃತ್ತಿಯಿಂದಾಗಿ ಸ್ವಲ್ಪ ವಿಳಂಬವಾಗಿತ್ತು. ಆನಂತರ ಎಲ್ಲಾ ಮಾಹಿತಿಗಳನ್ನು ಯುಜಿಸಿಗೆ ಒಪ್ಪಿಸಿ, 2017-18ನೇ ಸಾಲಿಗೆ ಅನುಮತಿ ಪಡೆಯಲಾಗಿದೆ. ಪ್ರತಿ ವರ್ಷ ಜುಲೈನಲ್ಲಿ ಪ್ರವೇಶ ಪ್ರಕ್ರಿಯೆ ನಡೆಯುತ್ತದೆ. ಯುಜಿಸಿ ಮಾನ್ಯತೆ ಹಿಂಪಡೆದಿದ್ದರಿಂದ 2016-17ನೇ ಸಾಲಿನ ಪ್ರವೇಶ ಪ್ರಕ್ರಿಯೆ ವಿಳಂಬವಾಗಿತ್ತು.

ಫೆಬ್ರವರಿ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸಿದ್ದು, 2600 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರು. 2017-18ನೇ ಸಾಲಿಗೆ ಈಗ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ಬಿ.ಎ, ಬಿ.ಕಾಂ ಹಾಗೂ ಎಂ.ಎ, ಎಂ.ಕಾಂ ಕೋರ್ಸ್‌ಗಳಿಗೆ ಹೆಚ್ಚಿನ ಬೇಡಿಕೆ ಇದೆ. 2004 ರಿಂದ 2008ರ ಅವಧಿಯಲ್ಲಿ 45,000 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರು ಎಂಬ ಮಾಹಿತಿ ಬೆಂವಿವಿ ಮೂಲದಿಂದ ತಿಳಿದುಬಂದಿದೆ.

ನಿರ್ದೇಶಕರಾಗಿ ಪ್ರೊ.ಮೈಲಾರಪ್ಪ: ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದ ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥರೂ ಆದ ಪ್ರೊ.ಬಿ.ಸಿ.ಮೈಲಾರಪ್ಪರನ್ನು ಬೆಂವಿವಿ ಅಂಚೆ ತೆರಪು ಹಾಗೂ ದೂರ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಾಗಿ ನೇಮಿಸಲಾಗಿದೆ. ಈ ಹಿಂದೆಯೂ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿರುವ ಅನುಭವನ್ನು ಹೊಂದಿದ್ದಾರೆ.  ಬೆಂವಿವಿ ದೂರ ಶಿಕ್ಷಣ ಕೇಂದ್ರವನ್ನು ಇನ್ನಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಮೈಲಾರಪ್ಪರನ್ನು ನಿರ್ದೇಶಕರಾಗಿ ನೇಮಿಸಲಾಗಿದೆ ಎಂದು ವಿವಿಯ ಆಡಳಿತ ಮಂಡಳಿ ತಿಳಿಸಿದೆ.

ಪ್ರಸಕ್ತ ಸಾಲಿನಲ್ಲಿ ದೂರ ಶಿಕ್ಷಣಕ್ಕೆ ಸಾಕಷ್ಟು ಅರ್ಜಿಗಳು ಬರುತ್ತಿದೆ. ಕಲಾ ಮತ್ತು ವಾಣಿಜ್ಯ ವಿಭಾಗದ ಕೆಲವು ಕೋರ್ಸ್‌ಗಳಿಗೆ ಬೇಡಿಕೆ ಹೆಚ್ಚಿದೆ. ಅರ್ಜಿ ಪ್ರಕ್ರಿಯೆ ಮುಗಿದ ನಂತರ ಅಂಕಿಸಂಖ್ಯೆಯ ಸ್ಪಷ್ಟ ಮಾಹಿತಿ ನೀಡಲಾಗುವುದು.
-ಪ್ರೊ.ಬಿ.ಸಿ.ಮೈಲಾರಪ್ಪ, ನಿರ್ದೇಶಕ, ಅಂಚೆ ಮತ್ತು ದೂರ ಶಿಕ್ಷಣ ನಿರ್ದೇಶನಾಲಯ

ಟಾಪ್ ನ್ಯೂಸ್

Liquor Policy Case: ದೆಹಲಿಯ ಮತ್ತೊಬ್ಬ ಸಚಿವನಿಗೆ ಜಾರಿ ನಿರ್ದೇಶನಾಲಯ ಸಮನ್ಸ್

Liquor Policy Case: ದೆಹಲಿಯ ಮತ್ತೊಬ್ಬ ಸಚಿವನಿಗೆ ಜಾರಿ ನಿರ್ದೇಶನಾಲಯ ಸಮನ್ಸ್

The reservoirs of South India including Karnataka are empty

Water Crisis; ಕರ್ನಾಟಕ ಸೇರಿ ದಕ್ಷಿಣ ಭಾರತದ ಜಲಾಶಯಗಳು ಖಾಲಿ.. ಖಾಲಿ!

yuva movie review

Yuva Review: ಮಾಸ್‌ ಅಡ್ಡದಲ್ಲಿ ಯುವ ರೈಡ್‌

ಭಾರತ ಈ ದೇಶಗಳಿಂದ ಪಾಠ ಕಲಿಯಬೇಕಿಲ್ಲ…: ಜಗದೀಪ್ ಧನ್ಕರ್ ತಿರುಗೇಟು

Kejriwal Arrest Case; ಭಾರತ ಈ ದೇಶಗಳಿಂದ ಪಾಠ ಕಲಿಯಬೇಕಿಲ್ಲ…: ಜಗದೀಪ್ ಧನ್ಕರ್ ತಿರುಗೇಟು

Indian Navy rescues 23 Pakistani nationals attacked by pirates

Indian Navy; ಕಡಲ್ಗಳ್ಳರಿಂದ ದಾಳಿಗೊಳಗಾದ 23 ಪಾಕ್ ಪ್ರಜೆಗಳನ್ನು ರಕ್ಷಿಸಿದ ನೌಕಾಪಡೆ

IPL 2024: ಹೀಗೆ ಆದರೆ ಆರ್ ಸಿಬಿ ಐಪಿಎಲ್ ಗೆಲ್ಲಲು ಸಾಧ್ಯವಿಲ್ಲ…: ಮೈಕಲ್ ವಾನ್

IPL 2024: ಹೀಗೆ ಆದರೆ ಆರ್ ಸಿಬಿ ಐಪಿಎಲ್ ಗೆಲ್ಲಲು ಸಾಧ್ಯವಿಲ್ಲ…: ಮೈಕಲ್ ವಾನ್

Actor daniel balaji passes away

Daniel Balaji; ಕಿರಾತಕ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದ ಡ್ಯಾನಿಯಲ್ ಬಾಲಾಜಿ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PUC Result: ಇಂದು ಪ್ರಥಮ ಪಿಯು ಫ‌ಲಿತಾಂಶ

PUC Result: ಇಂದು ಪ್ರಥಮ ಪಿಯು ಫ‌ಲಿತಾಂಶ

ರಾಮೇಶ್ವರಂ ಕೆಫೆ ಪ್ರಕರಣ: ಬೆಂಗಳೂರು ಬಳಿಯೇ ಬಾಂಬ್‌ ತಯಾರು!

ರಾಮೇಶ್ವರಂ ಕೆಫೆ ಪ್ರಕರಣ: ಬೆಂಗಳೂರು ಬಳಿಯೇ ಬಾಂಬ್‌ ತಯಾರು!

CET: ಅರ್ಜಿ ಸಲ್ಲಿಕೆಗೆ ಎ.1ರ ವರೆಗೆ ಅವಕಾಶ

CET: ಅರ್ಜಿ ಸಲ್ಲಿಕೆಗೆ ಎ.1ರ ವರೆಗೆ ಅವಕಾಶ

ಚಿಕ್ಕಬಳ್ಳಾಪುರ ಸೇರಿ ಕರ್ನಾಟಕದ ಮೂರೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್

ಚಿಕ್ಕಬಳ್ಳಾಪುರ ಸೇರಿ ಕರ್ನಾಟಕದ ಮೂರೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Liquor Policy Case: ದೆಹಲಿಯ ಮತ್ತೊಬ್ಬ ಸಚಿವನಿಗೆ ಜಾರಿ ನಿರ್ದೇಶನಾಲಯ ಸಮನ್ಸ್

Liquor Policy Case: ದೆಹಲಿಯ ಮತ್ತೊಬ್ಬ ಸಚಿವನಿಗೆ ಜಾರಿ ನಿರ್ದೇಶನಾಲಯ ಸಮನ್ಸ್

5-good-friday

Good Friday: ದ.ಕ., ಉಡುಪಿ ಜಿಲ್ಲೆಯಲ್ಲಿ ಶುಭ ಶುಕ್ರವಾರ ಆಚರಣೆ

How to Locate an Excellent Essay Service

4-checkpost

SulyaPadavu: ಚೆಕ್‌ಪೋಸ್ಟ್‌ ತಪ್ಪಿಸಿ ವಾಹನ ಸಂಚಾರ

3-kundapura

Kundapura: ಚುನಾವಣ ಅಕ್ರಮ ತಡೆಗೆ ಕಡಲಿನಲ್ಲೂ ಕಣ್ಗಾವಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.