ಸಮಿತಿ ಶಿಫಾರಸಿನಂತೆ ಕ್ರಮ ಕೈಗೊಳ್ಳಿ


Team Udayavani, Nov 23, 2017, 10:41 AM IST

speaker.jpg

ಸುವರ್ಣಸೌಧ, ಬೆಳಗಾವಿ: ರಾಜಧಾನಿ ಬೆಂಗಳೂರು ಸುತ್ತಮುತ್ತ ಕೆರೆ ಹಾಗೂ ರಾಜಕಾಲುವೆ ಒತ್ತುವರಿ ಬಗ್ಗೆ ಸದನ ಸಮಿತಿಯು ಸಮಗ್ರ ವರದಿ ನೀಡಿದ್ದು, ಸಮಿತಿಯ ಶಿಫಾರಸು ಪ್ರಕಾರ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಬೇಕು ಎಂದು ಸದನ ಸಮಿತಿ ಅಧ್ಯಕ್ಷರೂ ಆಗಿರುವ ಸ್ಪೀಕರ್‌ ಕೆ.ಬಿ.ಕೋಳಿವಾಡ ಹೇಳಿದ್ದಾರೆ.

ಸುವರ್ಣಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕೆಲಸವನ್ನು ನಾವು ಮಾಡಿದ್ದೇವೆ. ಮುಂದಿನದು ಸರ್ಕಾರಕ್ಕೆ ಬಿಟ್ಟದ್ದು. ಆದರೆ, ಕಾಲಮಿತಿಯಲ್ಲಿ ಈ ಬಗ್ಗೆ ಕ್ರಮ ಕೈಗೊಂಡಾಗ ಮಾತ್ರ ಜಲಮೂಲಗಳ ಸಂರಕ್ಷಣೆ ಸಾಧ್ಯ ಎಂದು ಹೇಳಿದರು.

ಸದನ ಸಮಿತಿಯು ನಿಷ್ಪಕ್ಷಪಾತ ಹಾಗೂ ಪಾರದರ್ಶಕತೆಯಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿ ಮಹತ್ವದ ವರದಿ ನೀಡಿದೆ. ಸಮಿತಿಯ ಶಿಫಾರಸು ಪ್ರಕಾರ ಕ್ರಮ ಕೈಗೊಂಡಾದ ಮಾತ್ರ ನಮ್ಮ ಶ್ರಮ ಸಾರ್ಥಕವಾಗುತ್ತದೆ. ಸರ್ಕಾರಿ ಸಂಸ್ಥೆಗಳು ಬೆಂಗಳೂರು ನಗರ ಜಿಲ್ಲೆಯಲ್ಲಿ 2194.11 ಎಕರೆ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ 1062.36 ಎಕರೆ ಒತ್ತುವರಿ ಮಾಡಿವೆ. ಅದೇ ರೀತಿ ಖಾಸಗಿ ವ್ಯಕ್ತಿಗಳು ನಗರ ಜಿಲ್ಲೆಯಲ್ಲಿ 2340.36 ಎಕರೆ, ಗ್ರಾಮೀಣ ಭಾಗದಲ್ಲಿ 5189.24 ಎಕರೆ ಜಮೀನು ಒತ್ತುವರಿ ಮಾಡಿದ್ದಾರೆ. 66289.38 ಎಕರೆಯಷ್ಟು ಕೆರೆ ಜಾಗ, 158 ಕೆರೆಗಳು ಸಂಪೂರ್ಣವಾಗಿ ಒತ್ತುವರಿಯಿಂದ ಮುಕ್ತವಾಗಿವೆ ಎಂದು ವಿವರಿಸಿದರು.

ಬಿಡಿಎ 23 ಕೆರೆಗಳನ್ನು ಸಂಪೂರ್ಣವಾಗಿ ಒತ್ತುವರಿ ಮಾಡಿ ಬಡಾವಣೆ ನಿರ್ಮಿಸಿದೆ. ನಿವೇಶನಗಳನ್ನೂ ಹಂಚಿಕೆ ಮಾಡಿ ಅಲ್ಲಿ ಮನೆ ಕಟ್ಟಲಾಗಿದೆ. ಈಗ ಅವರನ್ನು ಒಕ್ಕಲೆಬ್ಬಿಸಲು ಸಾಧ್ಯವಿಲ್ಲ. ಹೀಗಾಗಿ, ಸೂಕ್ತ ಕಾನೂನು ತಿದ್ದುಪಡಿ ಮಾಡಲು ಶಿಫಾರಸು ಮಾಡಲಾಗಿದೆ. ಖಾಸಗಿ ವ್ಯಕ್ತಿಗಳು ಮಾಡಿರುವ ಒತ್ತುವರಿ ವಿಚಾರದಲ್ಲಿ ಕಠಿಣ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ. ಮಾನವೀಯತೆ ನೆಲೆಯಿಂದ ನಿರ್ಜೀವ ಕೆರೆ ಜಾಗದಲ್ಲಿ ಇರುವವರಿಗೆ ದಂಡ ವಿಧಿಸಿ ಸಕ್ರಮಗೊಳಿಸಲು ಸಾಧ್ಯವಿದ್ದರೆ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ ಎಂದರು.

ನಗರದಲ್ಲಿ ಹಲವು ಖಾಸಗಿ ಸಂಸ್ಥೆಗಳು ಕೆರೆ, ಕಾಲುವೆ ಒತ್ತುವರಿ ಮಾಡಿ ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸಿಕೊಂಡಿವೆ. ಸರ್ಕಾರದ ವಶಕ್ಕೆ ಪಡೆಯಲು ಸ್ಪಷ್ಟವಾಗಿ ತಿಳಿಸಲಾಗಿದೆ. ದೇವಾಲಯಗಳಿದ್ದರೆ ಅದನ್ನು ಮುಜರಾಯಿ ಇಲಾಖೆಗೆ ವಹಿಸಲು ತಿಳಿಸಲಾಗಿದೆ. ಒಂದೊಮ್ಮೆ ಕೆರೆ ಪುನಶ್ಚೇತನ ಗೊಳಿಸಬಹುದು ಎಂದು ಗುರುತಿಸಲಾದ ಜಾಗದಲ್ಲಿ ದೇವಾಲಯ ಇದ್ದರೆ ಬೇರೆಡೆ ಸ್ಥಳಾಂತರಕ್ಕೂ ಸೂಚಿಸಲಾಗಿದೆ ಎಂದು ಹೇಳಿದರು. 

ಸರ್ಕಾರದ ಸಂಸ್ಥೆಗಳು ಮೂಲ ಸೌಕರ್ಯ ಒದಗಿಸಲು ಕೆಲವು ಕಡೆ ಒತ್ತುವರಿ ಮಾಡಿದ್ದರೆ, ಸ್ಮಶಾನ ಇದ್ದು, ಸಾರ್ವಜನಿಕರು ಬಳಕೆ ಮಾಡುತ್ತಿದ್ದರೆ ಅಂತಹ ಕಡೆ ಜನರ ಹಿತಾಸಕ್ತಿ ಗಮನಿಸಿ ಕ್ರಮ ಕೈಗೊಳ್ಳಲು ವರದಿಯಲ್ಲಿ ಹೇಳಲಾಗಿದೆ. ಇದು ಯಾರನ್ನೂ ಬಚಾವ್‌ ಮಾಡುವ ಉದ್ದೇಶವಲ್ಲ ಎಂದು ತಿಳಿಸಿದರು.

300 ಜನ ಭೂ ಮಾಪಕರನ್ನು ನೇಮಿಸಿ ನೋಡಲ್‌ ಅಧಿಕಾರಿ ಸಹಕಾರದೊಂದಿಗೆ ಕೆರೆ ಹಾಗೂ ರಾಜಾಕಾಲುವೆ ಬಗ್ಗೆ ಅತ್ಯುತ್ತಮ ವರದಿ ಸಿದ್ಧಪಡಿಸಲಾಗಿದೆ. ಇದು ಒಂದು ರೀತಿಯಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಜಲಮೂಲಗಳ ಇತಿಹಾಸ ಸಂಪುಟವೂ ಹೌದು ಎಂದು ಹೇಳಿದರು. 

ಯಾರೇ ಒತ್ತುವರಿ ಮಾಡಿದರೂ ಬಿಡುವಂತಿಲ್ಲ: ನಟ ದರ್ಶನ್‌ ಸೇರಿದಂತೆ ಯಾರೇ ರಾಜಕಾಲುವೆ ಜಾಗದಲ್ಲಿ ಮನೆ ನಿರ್ಮಿಸಿದ್ದರೂ ಅಥವಾ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಿದ್ದರೂ ಅದನ್ನು ತೆರವುಗೊಳಿಸಬೇಕಾಗುತ್ತದೆ. ನಮ್ಮ ವರದಿಯಲ್ಲೂ ಅದನ್ನೇ ಹೇಳಲಾಗಿದೆ. ನಾವು ಯಾರೊಬ್ಬರ ಬಗ್ಗೆಯೂ ವೈಯಕ್ತಿವಾಗಿ ಉಲ್ಲೇಖೀಸಿಲ್ಲ. ಹಾಗೆಂದ ಮಾತ್ರಕ್ಕೆ ಯಾರಧ್ದೋ ಪ್ರಭಾವಕ್ಕೆ ಮಣಿದಿದ್ದೇವೆ ಎಂದಲ್ಲ. ಕೆರೆ ಅಂಗಳ ಒತ್ತುವರಿ ಪುನಶ್ಚೇತನಗೊಳಿಸಲು ಸಾಧ್ಯವಿದ್ದರೆ ಅಲ್ಲೂ ತೆರವುಗೊಳಿಸಿ ಎಂದು ಹೇಳಿದ್ದೇವೆ. ರಾಜಕಾಲುವೆ ವಿಚಾರದಲ್ಲಿ ಯಾವುದೇ ವಿನಾಯಿತಿ ಕೊಟ್ಟಿಲ್ಲ ಎಂದುಕೋಳಿವಾಡ ಪ್ರಶ್ನೆಯೊಂದಕ್ಕೆ ಉತ್ತರಿಸಿದರು

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.