ಡಾ.ರಾಜ್‌ ಸ್ಮಾರಕಕ್ಕೆ ಸರ್ಕಾರ ಹಣ ಕೊಡ್ತಿಲ್ಲ!


Team Udayavani, Nov 24, 2017, 12:27 PM IST

dr-raj.jpg

ಬೆಂಗಳೂರು: ವರನಟ ಡಾ.ರಾಜ್‌ಕುಮಾರ್‌ ನಿಧನರಾದಾಗ ಕಂಠೀರವ ಸ್ಟುಡಿಯೊ ಆಡಳಿತ ಮಂಡಳಿ, ಕನ್ನಡ ಚಲನಚಿತ್ರರಂಗದ ಧ್ರುವತಾರೆಯ ಸ್ಮಾರಕ ನಿರ್ಮಿಸಲು ತನ್ನ ಒಡೆತನದಲ್ಲಿದ್ದ 2.5 ಎಕರೆ ಭೂಮಿ ನೀಡಿದೆ. ಆದರೆ ಸರ್ಕಾರ ಅನುದಾನ ಬಿಡುಗಡೆ ಮಾಡದ ಕಾರಣ ಸ್ಮಾರಕ ನಿರ್ಮಾಣ ನೆನೆಗುದಿಗೆ ಬಿದ್ದಿದೆ.

ಸ್ಟುಡಿಯೋ ಆಡಳಿತ ಮಂಡಳಿ ತನ್ನ 17.5 ಎಕರೆ ಜಾಗದ ಪೈಕಿ ರಾಜ್‌ ಸ್ಮಾರಕ ನಿರ್ಮಾಣಕ್ಕಾಗಿ 2.5 ಎಕರೆ ಜಾಗವನ್ನು ನೀಡಿತ್ತು. ಈ ಹಿನ್ನೆಲೆಯಲ್ಲಿ ಆಗಿನ ಸರ್ಕಾರ ಆ ಭೂಮಿಗೆ ತಗಲುವ ಹಣವನ್ನು ಸ್ಟುಡಿಯೋ ಆಡಳಿತಕ್ಕೆ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ ಸರ್ಕಾರ ಕಂಠೀರವ ಸ್ಟುಡಿಯೋಗೆ 17.5 ಕೋಟಿ ರೂ. ನೀಡಬೇಕಿದ್ದು, ಸ್ಟುಡಿಯೋ ಆಡಳಿತ ಮಂಡಳಿ ಚಾತಕ ಪಕ್ಷಿಯಂತೆ ಕಾಯುತ್ತಿದೆ.

ಹಣ ನೀಡುವಂತೆ ಸ್ಟುಡಿಯೋ ಆಡಳಿತ ಮಂಡಳಿ ಸರ್ಕಾರದ ಹಿರಿಯ ಅಧಿಕಾರಿಗಳಿಗೆ ಹಲವು ವರ್ಷಗಳಿಂದ ಪತ್ರದ ಮೇಲೆ ಪತ್ರ ಬರೆಯುತ್ತಲೇ ಇದೆ. ಆದರೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ. ಈ ಹಣ ಬಾಕಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಚಿವ ಸಂಪುಟದಲ್ಲಿ ಚರ್ಚೆಸಿದ್ದಾರೆ. ಸ್ಟುಡಿಯೋಕ್ಕೆ ನೀಡಬೇಕಾಗಿರುವ ಹಣವನ್ನು ನೀಡುವ ವಾಗ್ಧಾನ ಮಾಡಿದ್ದಾರೆ. ಈಗಾಗಲೇ ಇಎಂ ಆದೇಶ ಆರ್ಥಿಕ ಇಲಾಖೆಗೆ ತಲುಪಿದ್ದು, ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ.

ಕಂಠೀವ ಸ್ಟುಡಿಯೋಗೆ ಆಧುನಿಕ ಸ್ಪರ್ಶ ನೀಡಬೇಕಿದ್ದು, ಇದಕ್ಕೆ ಸಾಕಷ್ಟು ಹಣ ಬೇಕು. ಸ್ಟುಡಿಯೋದಿಂದ ಬರುತ್ತಿರುವ ಆದಾಯ ಆಧುನೀಕರಣಕ್ಕೆ ಸಲುತ್ತಿಲ್ಲ. ಇದರೊಂದಿಗೆ ಕೆಲವು ಕೋಣೆಗಳ ಕೊರತೆ ಕೂಡ ಇದೆ. ಹೀಗಾಗಿ ಸರ್ಕಾರ ಹಣ ನೀಡಿದರೆ ಸ್ಟುಡಿಯೋಗೆ ಮತ್ತಷ್ಟು ಮೆರುಗು ನೀಡಬಹುದಾಗಿದೆ ಎಂದು ಕಂಠೀರವ ಸ್ಟುಡಿಯೋಸ್‌ ಅಧ್ಯಕ್ಷೆ, ಮೀನಾಕ್ಷಿ ಸಂಗ್ರಾಮ್‌ ಹೇಳಿದ್ದಾರೆ.

ಸ್ಟುಡಿಯೋದೊಳಗೆ ಕಳ್ಳತನದಂತ ಪ್ರಕರಣಗಳು ಹೆಚ್ಚಾಗಿವೆ. ಕಳೆದ ಕೆಲವು ದಿನಗಳ ಹಿಂದಷ್ಟೇ ಆವರಣದೊಳಗಿದ್ದ ಗಂಧದ ಗಿಡದ ಕಳ್ಳತನವಾಗಿದೆ. ಸ್ಟುಡಿಯೋದಳಗಿನ ರಕ್ಷಣಾ ಗೋಡೆ ಪಾಳು ಬಿದ್ದಿರುವುದೇ ಇದಕ್ಕೆಲ್ಲ ಕಾರಣ. ಹೀಗಾಗಿ ಸರ್ಕಾರ ನೆರವಿನ ಹಸ್ತ ಆಗತ್ಯ ಎಂದು ಮನವಿ ಮಾಡಿದ್ದಾರೆ.

ವರನಟ ಡಾ.ರಾಜ್‌ ಕುಮಾರ್‌ ಅವರ ಸಮಾಧಿ ಸ್ಥಳಕ್ಕೆ ನಿತ್ಯ ಸಾವಿರಾರು ಜನ ಭೇಟಿ ನೀಡುತ್ತಾರೆ. ಹೀಗಾಗಿ ಈ ಸ್ಮಾರಕವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವ ಅಗತ್ಯವಿದೆ. ಜತೆಗೆ ಐತಿಹಾಸಿಕ ಹಿನ್ನೆಲೆಯ ಕಂಠೀರವ ಸ್ಟುಡಿಯೋವನ್ನು ಸರ್ಕಾರ ಆಧುನಿಕರಣಗೊಳಿಸಲು ಮುಂದಾಗಬೇಕು.
-ಮೀನಾಕ್ಷಿ ಸಂಗ್ರಾಮ್‌, ಕಂಠೀರವ ಸ್ಟುಡಿಯೋಸ್‌ ಅಧ್ಯಕ್ಷೆ

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.