4 ವರ್ಷದಲ್ಲಿ 15 ಲಕ್ಷ ಉದ್ಯೋಗ ಸೃಷ್ಟಿ


Team Udayavani, Nov 24, 2017, 12:27 PM IST

15lac-job.jpg

ಬೆಂಗಳೂರು: ರಾಜ್ಯ ಸರ್ಕಾರವು ನಾಲ್ಕು ವರ್ಷಗಳಲ್ಲಿ 13.19 ಲಕ್ಷ ಉದ್ಯೋಗ ಸೃಷ್ಟಿಸಿದೆ. 2019ರ ವೇಳೆಗೆ 15 ಲಕ್ಷ ಉದ್ಯೋಗ ಸೃಷ್ಟಿಸುವ ಯೋಜನೆ ಹಾಕಿಕೊಂಡಿರುವುದಾಗಿ ಬೃಹತ್‌ ಕೈಗಾರಿಕೆ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದರು.

ರಾಜ್ಯ ಸರ್ಕಾರ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸರಬರಾಜುದಾರರ ಅಭಿವೃದ್ಧಿ ಮತ್ತು ಹೂಡಿಕೆದಾರರ ಶೃಂಗಸಭೆ ಉದ್ಘಾಟಿಸಿ ಮಾತನಾಡಿ, “ಯುವ ಜನತೆ ಉದ್ಯೋಗ ಹುಡುಕುವುದಕ್ಕಿಂತ ಉದ್ಯೋಗ ಸೃಷ್ಟಿಕರ್ತರಾಗಬೇಕು.

ಭಾರತವು ವಿಶ್ವದ ಯುವ ರಾಷ್ಟ್ರವಾಗಿದ್ದು, ಉದ್ಯೋಗ ಸೃಷ್ಟಿಗೆ ಹಲವು ಮಾರ್ಗವನ್ನು ಸಂಶೋಧಿಸುತ್ತಿದ್ದೇವೆ’ ಎಂದು ಹೇಳಿದರು. 2013ರಿಂದ ಈವರೆಗೆ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಂದ 12.03 ಲಕ್ಷ, ಬೃಹತ್‌ ಕೈಗಾರಿಕೆಗಳಿಂದ 1.88 ಲಕ್ಷ ಉದ್ಯೋಗ ಸೃಷ್ಟಿಸಲಾಗಿದೆ. 2018ರೊಳಗೆ 5.79 ಉದ್ಯೋಗ ಸೃಷ್ಟಿಸುವ ಕಾರ್ಯ ಪ್ರಗತಿಯಲ್ಲಿದೆ ಎಂಬ ಮಾಹಿತಿ ನೀಡಿದರು.

ಶೇ.11ಜವಳಿ ರಫ್ತು: ಜವಳಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿ, ಜವಳಿ ಉದ್ಯಮದಲ್ಲಿ ಲಕ್ಷಾಂತರ ಜನರು ತೊಡಗಿಸಿಕೊಂಡಿದ್ದಾರೆ. ಕರ್ನಾಟಕದಿಂದ ಶೇ.11 ಜವಳಿ ಉತ್ಪನ್ನ ರಫ್ತು ಮಾಡುತ್ತಿದ್ದೇವೆ. 2013-18ರ ಜವಳಿ ನೀತಿ ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ವಿವರಿಸಿದರು.

ಫೆಸಿಲಿಟಿ ಕೇಂದ್ರಕ್ಕೆ ಶಂಕುಸ್ಥಾಪನೆ: ದೇವನಹಳ್ಳಿಯಲ್ಲಿ ವಿಮಾನದ ಬಿಡಿಭಾಗ ಉತ್ಪಾದಿಸುವ ಕಾಮನ್‌ ಫಿನಿಶಿಂಗ್‌ ಫೆಸಿಲಿಟಿ ಕೇಂದ್ರದ ಶಿಲಾನ್ಯಾಸ ನೆರವೇರಿಸಲಾಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 210 ಕೋಟಿ ರೂ. ವೆಚ್ಚದಲ್ಲಿ ಈ ಕೇಂದ್ರ ನಿರ್ಮಾಣವಾಗಲಿದೆ.

ಕೇಂದ್ರ ಸರ್ಕಾರ 42 ಕೋಟಿ ರೂ. ನೀಡಲಿದ್ದು, ಉಳಿಕೆ ಮೊತ್ತವನ್ನು ರಾಜ್ಯ ಸರ್ಕಾರ ಭರಿಸಲಿದೆ. ಕೆಐಎಡಿಬಿ ನೀಡಿದ 40 ಎಕರೆ ಜಾಗದಲ್ಲಿ ನಿರ್ಮಾಣವಾಗುವ ಈ ಕೇಂದ್ರದಲ್ಲಿ ವಿಮಾನದ ಬಿಡಿಭಾಗ ತಯಾರಿ, ಎಲೆಕ್ಟ್ರಿಕ್‌ ಭಾಗಗಳ ತಯಾರಿ, ವಿಮಾನಕ್ಕೆ ಬಣ್ಣ ಬಳಿಯುವುದು ಹಾಗೂ ಕೊನೆ ಹಂತದ ತಯಾರಿ ಪ್ರಕ್ರಿಯೆಗಳು ನಡೆಯಲಿವೆ.

ಏರೊನಾಟಿಕಲ್‌ ಎಂಜಿನಿಯರಿಂಗ್‌, ಉತ್ಪಾದನೆ, ಎಲೆಕ್ಟ್ರಿಕಲ್‌ ವಾಹನಗಳು, ಡ್ರೋಣ್‌ ತಂತ್ರಜ್ಞಾನ ಸೇರಿ ಹಲವಾರು ಕ್ಷೇತ್ರಗಳಲ್ಲಿ ಸಕ್ರಿಯವಾಗಿದ್ದೇವೆ. ಹೊಸ ಉದ್ಯೋಗ ಸೃಷ್ಟಿಸುವಲ್ಲಿ ಮುಂದಿದ್ದೇವೆ. ಭವಿಷ್ಯದಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಲಿವೆ.
ಕಿರಣ್‌ ಮಜುಂದರ್‌ ಷಾ, ಬಯೊಕಾನ್‌

ದೇಶಿ, ವಿದೇಶಿ ಸಂಸ್ಥೆಗಳ ಸಮಾಗಮ: ರಾಜ್ಯ ಸರ್ಕಾರ ತುಮಕೂರು ರಸ್ತೆಯ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಹಮ್ಮಿಕೊಂಡಿರುವ ಸರಬರಾಜುದಾರರ ಅಭಿವೃದ್ಧಿ ಮತ್ತು ಹೂಡಿಕೆದಾರರ ಶೃಂಗಸಭೆಯಲ್ಲಿ ದೇಶಿ ಹಾಗೂ ವಿದೇಶಿ ಸಂಸ್ಥೆಗಳ ಸಮಾಗಮದ ಜೊತೆಗೆ ಗುಡಿ ಕೈಗಾರಿಕೆಯಿಂದ ಬೃಹತ್‌ ಕೈಗಾರಿಕೆಗಳು ತಮ್ಮ ಉತ್ಪನ್ನದ ಪರಿಚಯ ಮಾಡಿಸಿದರು.

ಎಚ್‌ಎಎಚ್‌, ಟಾಟಾ, ಜೆ.ಕೆ.ಟಯರ್ ಮೊದಲಾದ ದೇಶಿ ಸಂಸ್ಥೆಗಳ ಜತೆಗೆ ವೋಲ್ವೊ, ಟೊಯೊಟಾ ಕಿರ್ಲೋಸ್ಕರ್‌ ಸಂಸ್ಥೆಗಳು ಭಾಗವಹಿಸಿವೆ. ಖಾದಿ ಉದ್ಯಮ, ತೆಂಗು ನಾರು ಅಭಿವೃದ್ಧಿ ಮಂಡಳಿಯ ಉತ್ಪನ್ನ, ಗುಡಿ ಕೈಗಾರಿಕೆಗಳಿಂದ ತಯಾರಾದ ಅಲಂಕಾರಿಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಇಲ್ಲಿದೆ.

ಮಷಿನ್‌ ಟೂಲ್‌ಗ‌ಳು, ಬಟ್ಟೆ, ವಾಹನಗಳ ಬಿಡಿಭಾಗ, ಪಂಪ್‌ಸೆಟ್‌, ಟಯರ್‌, ಫ್ಯಾಬ್ರಿಕ್‌ ಮೊದಲಾದ ಉತ್ಪನ್ನಗಳನ್ನು ತಯಾರಿಸುವ ಸುಮಾರು 700 ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ 300 ಬೃಹತ್‌ ಕೈಗಾರಿಕೆಗಳು ತಮ್ಮ ಉತ್ಪನ್ನದ ಪ್ರದರ್ಶನಕ್ಕೆ ಇಟ್ಟಿದ್ದರು.

ಮುಂದಿನ 10 ವರ್ಷಗಳಲ್ಲಿ ಒಂದು ಸಾವಿರ ವಿಮಾನಗಳ ನಿರ್ಮಾಣ ಗುರಿ ಹೊಂದಿದ್ದೇವೆ. ಭಾರತೀಯ ಮೈತ್ರಿಕೂಟದ ಸುಖೋಯ್‌-30ಎಂಕೆಐ ಮೂಲಕ ಬ್ರಹ್ಮೋಸ್‌ ಕ್ಷಿಪಣಿ ಯಶಸ್ವಿಯಾಗಿ ಉಡಾವಣೆಯಾಗಿದೆ. 2,500 ಕೇಜಿ ತೂಕದ ಕ್ಷಿಪಣಿಯಲ್ಲಿ ಬೆಂಗಳೂರಿನ ಹಲವಾರು ಬಿಡಿಭಾಗಗಳ ಸಂಸ್ಥೆಗಳ ಕೊಡುಗೆ ಇದೆ.
-ಟಿ.ಸುವರ್ಣ ರಾಜು, ಎಚ್‌ಎಎಲ್‌ ವ್ಯವಸ್ಥಾಪಕ ನಿರ್ದೇಶಕ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.