ಮಹಾನಗರಕ್ಕೆ ಇನ್ನೂ ಎರಡು ರಿಂಗ್‌ ರೋಡ್‌


Team Udayavani, Nov 27, 2017, 11:31 AM IST

blore1.jpg

ಬೆಂಗಳೂರು: ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ನಗರದಲ್ಲಿ ಮತ್ತೆರಡು ವರ್ತುಲ ರಸ್ತೆಗಳು ಹಾಗೂ ನಮ್ಮ ಮೆಟ್ರೋ ಸೇವೆಯ ಎರಡು ಹೊಸ ಮಾರ್ಗಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ತನ್ನ “ಪರಿಷ್ಕೃತ ಮಹಾಯೋಜನೆ 2031’ರಲ್ಲಿ ಪ್ರಸ್ತಾಪಿಸಿದೆ.

ಪರಿಷ್ಕೃತ ಮಹಾಯೋಜನೆ-2031ರ ಭಾಗವಾಗಿ ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪೆರಿಫೆರಲ್‌ ರಿಂಗ್‌ ರಸ್ತೆಗಳಿಗೆ ಸಮನಾಂತರವಾಗಿ ಮೆಟ್ರೋ ಮಾರ್ಗಗಳನ್ನು ನುಷ್ಠಾನಗೊಳಿಸಲು ಬಿಡಿಎ ತನ್ನ ಪರಿಸ್ಕೃತ ಪ್ರಸ್ತಾವನೆಯಲ್ಲಿ ಪ್ರಸ್ತಾಪಿಸಿದೆ. ನಗರದ ಎಲ್ಲ ವರ್ತುಲ ರಸ್ತೆಗಳನ್ನು ಸಂಪರ್ಕಿಸಲು ಸುಮಾರು 100 ಕಿ.ಮೀ. ಉದ್ದದ ಮೆಟ್ರೋ ಮಾರ್ಗ ನಿರ್ಮಿಸುವ ಕುರಿತು ಇಲ್ಲಿ ಗಮನ ಸೆಳೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಬಿಎಂಆರ್‌ಸಿಎಲ್‌ ವತಿಯಿಂದ ಮೆಟ್ರೋ 2ಎ ಫೇಸ್‌ನಲ್ಲಿ ಸಿಲ್ಕ್ ಬೋರ್ಡ್‌ನಿಂದ ಕೆ.ಆರ್‌.ಪುರದವರೆಗೆ ಮೆಟ್ರೋ ಮಾರ್ಗ ನಿರ್ಮಿಸಲಾಗುತ್ತಿದೆ. ಅದನ್ನು ವಿಸ್ತರಿಸಿ ಹೆಬ್ಟಾಳ-ಮಾಗಡಿ ರಸ್ತೆ-ಮೈಸೂರು ರಸ್ತೆ ಹೀಗೆ ಸಂಪೂರ್ಣ ವರ್ತುಲ ರಸ್ತೆಗೆ ಸಂಪರ್ಕಿಸುವ ರೀತಿಯಲ್ಲಿ ವಿಸ್ತರಿಸುವ ಕುರಿತು ಪ್ರಸ್ತಾವನೆಯಲ್ಲಿ ತಿಳಿಸಲಾಗಿದೆ.

ತಾತ್ಕಾಲಿಕ ಮಹಾಯೋಜನೆಯಲ್ಲಿ 2031ಕ್ಕೆ ನಗರದ ಜನಸಂಖ್ಯೆ 2 ಕೋಟಿ ಮೀರಲಿದೆ ಎಂದು ಅಂದಾಜಿಸಿದ್ದು, ಜನಸಾಂದ್ರತೆಗೆ ಅನುಗುಣವಾಗಿ 2015ನೇ ಮಹಾಯೋಜನೆಗಿಂತ ಕೇವಲ 80 ಚದರ ಕಿ.ಮೀ  ದೇಶವನ್ನು
ಮಾತ್ರ ಹೆಚ್ಚುವರಿ ನಗರೀಕರಣ ಪ್ರದೇಶವನ್ನಾಗಿ ಪ್ರಸ್ತಾಪಿಸಲಾಗಿದೆ. ನಗರೀಕರಣಕ್ಕೆ ಅವಶ್ಯಕ ವ್ಯವಸ್ಥೆಗಳಾಗಿರುವ ಸಾರಿಗೆ ಮತ್ತು ಸಂಚಾರ ವ್ಯವಸ್ಥೆ, ಸಂಪರ್ಕ ರಸ್ತೆಗಳು, ವಸತಿ ಸೌಲಭ್ಯದ ಬೇಡಿಕೆ, ನೀರು ಸರಬರಾಜು ಬೇಡಿಕೆ, ಘನ ತ್ಯಾಜ್ಯ ನಿರ್ವಹಣೆಗೆ ಬೇಕಾದ ಜಮೀನು, ಪರಸರ ಸಂರಕ್ಷಣೆಗೆ ಸಂಬಂಧಿಸಿದ ಬೇಡಿಕೆಗಳು, ಟ್ರೀ ಪಾರ್ಕ್‌ ಸೇರಿದಂತೆ ಮೂಲ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಸರ್ಕಾರ ಅನುಮೋದಿಸಿರುವ ವಲಯ ಬದಲಾವಣೆ ಮತ್ತು ಪ್ರಾಧಿಕಾರವು ಅನುಮೋದಿಸಿದ ವಿನ್ಯಾಸ, ಇತರೆ ಅಭಿವೃದ್ಧಿ ಅನುಮೋದನೆ ಯೋಜನೆಗಳಿಗೆ ನೀಡಲಾದ ಪ್ರಕರಣಗಳನ್ನು ತಪ್ಪದೆ ಅಳವಡಿಸಿಕೊಳ್ಳಬೇಕು. ಪರಿಸರ ಸೂಕ್ಷ್ಮ ಪ್ರದೇಶಗಳಾದ ಕಣಿವೆಗಳು, ನದಿ-ತೊರೆ ಪಾತ್ರಗಳು, ಕೆರೆಯ ಅಂಗಳಗಳು ಸೇರಿದಂತೆ ಜಲಮೂಲಗಳನ್ನು ಸೂಕ್ತವಾಗಿ ಕಾಪಾಡಿ ಕೊಂಡು ಭೂ ಉಪಯೋಗ ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.

ಪ್ರಸ್ತಾಪಿತ ಪ್ರಮುಖ ಅಂಶಗಳು 

  • „ ನಾಲ್ಕು ಕ್ರೀಡಾ ಸಂಕೀರ್ಣಗಳ ನಿರ್ಮಾಣ
  •  12 ಪಾರಂಪರಿಕ ವಲಯಗಳ ಪರಿಚಯ
  • „ ಕೈಗೆಟುಕುವ ದರದಲ್ಲಿ ಮನೆಗಾಗಿ ಭೂ ಬ್ಯಾಂಕ್‌
  • „ ತಂತ್ರಜ್ಞಾನಗಳ ಅಳವಡಿಕೆಗೆ ಆದ್ಯತೆ
  •  ಬೃಹತ್‌ ಅಭಿವೃದ್ಧಿ ಕೈಗೊಳ್ಳುವಾಗ ಸಂಚಾರದ ಮೇಲೆ ಬೀರುವ ಪರಿಣಾಮಗಳ ಮಾಪನ ಕಡ್ಡಾಯ
  •  ಹಸಿರು ವಲಯದಲ್ಲಿ ಭೂಮಿ ಖರೀದಿಗೆ ಟಿಡಿಆರ್‌ ಪ್ರಮಾಣಪತ್ರ ಪರಿಗಣಿಸುವುದು
  • „ ಉದ್ಯಾನಗಳ ವಿಸ್ತೀರ್ಣವನ್ನು 40 ಹೆಕ್ಟೇರ್‌ನಿಂದ 200 ಹೆಕ್ಟೇರ್‌ಗೆ ಹೆಚ್ಚಿಸುವುದು
  • „ 25 ಹೆಕ್ಟೇರ್‌ಗಿಂತ ಹೆಚ್ಚಿನ ಪ್ರದೇಶದಲ್ಲಿ 25 ಸಮಗ್ರ ಆರ್ಥಿಕ ಟೌನ್‌ಶಿಪ್‌ ನಿರ್ಮಾಣ
  • „ 15 ಸಾವಿರ ಬಿಎಂಟಿಸಿ ಬಸ್‌ಗಳ ಕಾರ್ಯಾಚರಣೆ
  • „ ಪಾಡ್‌, ಲೈಟ್‌ರೈಲ್‌ ಟ್ರಾನ್ಸಿಸ್ಟ್‌ ಹಾಗೂ ಮೋನೋ ರೈಲು

ಟಾಪ್ ನ್ಯೂಸ್

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

16-wtr

Water: ನೀರು ಭುವನದ ಭಾಗ್ಯ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.