ಬಡವರಿಗೆ ಕೃಷಿ ಜಮೀನು ಕೊಡಿಸಲು ಚಳವಳಿ


Team Udayavani, Dec 11, 2017, 12:15 PM IST

dorai-swamy-badava.jpg

ಬೆಂಗಳೂರು: ಭೂರಹಿತ ದಲಿತ ಹಾಗೂ ಬಡ ಕುಟುಂಬಗಳಿಗೆ ಸರ್ಕಾರದಿಂದ ಕೃಷಿ ಜಮೀನು ಮಂಜೂರು ಮಾಡುವಂತೆ ಆಗ್ರಹಿಸಿ ಅನಿರ್ದಿಷ್ಠಾವಧಿ ಚಳವಳಿ ಆರಂಭಿಸುತ್ತೇನೆ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌. ದೊರೆಸ್ವಾಮಿ ಎಚ್ಚರಿಕೆ ನೀಡಿದ್ದಾರೆ. 

ನಿಡುಮಾಮಿಡಿ ಮಹಸಂಸ್ಥಾನ ಮಠದ ಮಾನವ ಧರ್ಮ ಪೀಠದಿಂದ ಭಾನುವಾರ ಆಯೋಜಿಸಿದ್ದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಈ ವರ್ಷದ “ಮಾನವತಾ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದ ಅವರು, ಸರ್ಕಾರ ಭರವಸೆ ಕೊಟ್ಟು ವರ್ಷ ಆಯಿತು. ಆದರೆ, ಈವರೆಗೆ ಏನೂ ಆಗಿಲ್ಲ. ಹಾಗಾಗಿ ಆದಷ್ಟು ಬೇಗ ಬೇಡಿಕೆ ಈಡೇರಿಸಿದಿದ್ದರೆ, ಕೆಲವೇ ದಿನಗಳಲ್ಲಿ ಅನಿರ್ದಿಷ್ಠಾವಧಿ ಚಳವಳಿಗೆ ಚಾಲನೆ ನೀಡುತ್ತೇನೆ ಎಂದರು. 

ಬಡವರು ಮತ್ತು ದಲಿತರಿಗೆ ಗೌರವಧನ ಮತ್ತು ಹಕ್ಕಿನ ಬದುಕು ಕೊಡಬೇಕು ಅನ್ನುವುದು ನಮ್ಮ ಹಕ್ಕೋತ್ತಾಯ. ಇದಕ್ಕಾಗಿ ಸರ್ಕಾರದ ಬಳಿ ಇರುವ ಅನುಪಯುಕ್ತ ಮತ್ತು ಸಾಗುವಳಿ ಯೋಗ್ಯ ಜಮೀನಿನಲ್ಲಿ ಭೂರಹಿತ ದಲಿತ ಹಾಗೂ ಬಡ ಕುಟುಂಬಗಳಿಗೆ ಕೃಷಿ ಜಮೀನು ಮಂಜೂರು ಮಾಡುವಂತೆ ಸರ್ಕಾರದ ಮುಂದೆ ಬೇಡಿಕೆ ಇಡಲಾಗಿತ್ತು. ಹಿಂದಿನ ವರ್ಷ ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿಯವರು ಈ ಬಗ್ಗೆ ಘೋಷಣೆ ಸಹ ಮಾಡಿದ್ದರು.

ಆದರೆ. ವರ್ಷವಾದರೂ ಏನೂ ಆಗಿಲ್ಲ. ಈ ಸಂಬಂಧ ನಾನು ಮುಖ್ಯಮಂತ್ರಿಯವರಿಗೆ ನಾಲ್ಕು ಪತ್ರ ಬರೆದಿದ್ದೇನೆ. ಆ ಪತ್ರಗಳು ಕಂದಾಯ ಇಲಾಖೆ ಕಾರ್ಯದರ್ಶಿ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಹೋಗಿದೆ ಎಂಬ ಉತ್ತರ ಮುಖ್ಯಮಂತ್ರಿಯವರಿಂದ ಬರುತ್ತದೆ. ಪತ್ರಗಳು ಅತ್ತಿಂದಿತ್ತ ಅಲೆದಾಡುತ್ತಲೇ ಇವೆ. ಕ್ರಮ ಏನಾಯಿತು ಎಂದು ಕೇಳುವ ಯೋಗ್ಯತೆ ಅವರಿಗಿಲ್ವ. ಇದೊಂದು ಜಡ ಸರ್ಕಾರ, ಅಧಿಕಾರಿಗಳಿಗೆ ಮಾನವೀಯತೆ ಇಲ್ಲ ಎಂದು ದೊರೆಸ್ವಾಮಿ ತಮ್ಮ ಸಿಟ್ಟು ಹೊರ ಹಾಕಿದರು.

ಕಾರ್ಯಕ್ರಮದ ಆರಂಭದಲ್ಲಿ ಮಾತನಾಡಿದ ನಿಡಿಮಾಮಿಡಿ ಮಠದ ವೀರಭದ್ರಚನ್ನಮಲ್ಲ ಸ್ವಾಮೀಜಿ, ಭಾರತ ಒಂದು ಪ್ರಜಾಪ್ರಭುತ್ವ ದೇಶ. ಇಲ್ಲಿ ಒಂದು ಪಕ್ಷ, ಒಂದು ಸಿದ್ಧಾಂತ ಅಥವಾ ಒಂದು ಸಂಘಟನೆಯ ಸರ್ವಾಧಿಕಾರ ಸ್ಥಾಪನೆ ಆಗಬಾರದು. ಅದು ಪ್ರಜಾಸತ್ತೆಗೆ ಅಪಾಯಕಾರಿ. ಮಾನವ ಹಕ್ಕುಗಳ ರಕ್ಷಣೆ, ಮನುಕುಲದ ರಕ್ಷಣೆ ಆಗಿದೆ.

ಕೋಮುವಾದ ಮತ್ತು ಉಗ್ರವಾದದಿಂದ ದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗುತ್ತಿದೆ. ಉಗ್ರವಾದ ಭಾರತವನ್ನು ಪಾಕ ಶಾಲೆಯನ್ನಾಗಿ ಮಾಡಿಕೊಂಡಿದೆ. ಕೋಮುವಾದಿಂದ ಉಗ್ರವಾದ ಬೆಳೆಯುತ್ತದೆ. ಅದೇ ರೀತಿ ಉಗ್ರವಾದ ಕೋಮುವಾದ ಬೆಳೆಯಲು ಕಾರಣವಾಗುತ್ತದೆ. ದೇಶವನ್ನು ಸಮಗ್ರವಾಗಿ ಕಟ್ಟುವ ನಾಯಕತ್ವದ ಕೊರತೆ ನಮ್ಮನ್ನು ಕಾಡುತ್ತಿದೆ ಎಂದರು.

ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನದಾಸ್‌, ಸಿಪಿಎಂ ಮುಖಂಡ ಸಿದ್ದನಗೌಡ ಪಾಟೀಲ್‌, ಅಹಿಂದ ಮುಖಂಡ ಪ್ರೊ. ಎನ್‌.ವಿ. ನರಸಿಂಹಯ್ಯ, ಮಹಿಳಾ ಪರ ಹೋರಾಟಗಾರ್ತಿ ಡಾ. ಲೀಲಾ ಸಂಪಿಗೆ, ಚಿಂತಕ ಪ್ರೊ. ನಾಗರಾಜಪ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು. 

ದೇವೇಗೌಡರನ್ನು “ರಾಜಕೀಯ ಪಟು’ ಎನ್ನಬೇಕಾ?: “ಅಧಿಕಾರದ ಅವಕಾಶಕ್ಕಾಗಿ ಬಿಜೆಪಿ ಅಥವಾ ಕಾಂಗ್ರೆಸ್‌ ಜತೆ ಹೋಗುವ ಸಮಯ ಸಾಧಕ ದೇವೇಗೌಡರನ್ನು “ರಾಜಕೀಯ ಪಟು’ ಎನ್ನಬೇಕಾ?’ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌. ದೊರೆಸ್ವಾಮಿ ಪ್ರಶ್ನಿಸಿದ್ದಾರೆ.

“ಈಗಿನ ರಾಜಕೀಯ ಶುದ್ಧವಾಗಿಲ್ಲ. ಯಾವ ಪಕ್ಷಕ್ಕೂ ಜನಪರ ಸಿದ್ಧಾಂತವಿಲ್ಲ. ಅಧಿಕಾರದ ಹತ್ತರ ಬಂದಾಗ ಯಾವ ಬದ್ಧತೆಯೂ ಇರುವುದಿಲ್ಲ. ಅಧಿಕಾರಕ್ಕಾಗಿ ಬಿಜೆಪಿ ಮತ್ತು ಕಾಂಗ್ರೆಸ್‌ ಜತೆಗೆ ಹೋಗುವ ದೇವೇಗೌಡರ ಸಮಯ ಸಾಧಕತನಕ್ಕೆ ಏನೆಂದು ಹೇಳಬೇಕು? ಹೀಗೆ ಮಾಡುವ ದೇವೇಗೌಡರನ್ನು ರಾಜಕೀಯ ಪಟು ಎಂದು ಕರೆಯಬಹುದಾ? ಎಂದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.