ಎಸ್‌ಟಿಪಿ ಕಡ್ಡಾಯದಿಂದ ಹಿಂದೆ ಸರಿದ ಜಲಮಂಡಳಿ


Team Udayavani, Dec 15, 2017, 12:19 PM IST

george.jpg

ಬೆಂಗಳೂರು: ನಗರದಲ್ಲಿ 50ಕ್ಕಿಂತ ಹೆಚ್ಚು ಮನೆಗಳಿರುವ ಹಳೆ ಅಪಾರ್ಟ್‌ಗಳಿಗೂ ತ್ಯಾಜ್ಯನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ಅಳವಡಿಕೆ ಕಡ್ಡಾಯ ನಿಯಮದಿಂದ ಜಲಮಂಡಳಿ ವಿನಾಯಿತಿ ನೀಡಿದೆ. ಆದರೆ, ಒಳಚರಂಡಿ ಸಂಪರ್ಕವಿಲ್ಲದ ಪ್ರದೇಶಗಳಲ್ಲಿ ಎಲ್ಲ ಬಗೆಯ ಅಪಾರ್ಟ್‌ಮೆಂಟ್‌ಗಳಿಗೆ ಎಸ್‌ಟಿಪಿ ಕಡ್ಡಾಯಗೊಳಿಸಲು ತೀರ್ಮಾನಿಸಿದೆ. 

ಗುರುವಾರ ಬಿಎಂಆರ್‌ಡಿಎನಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌, ಜಲಮಂಡಳಿ ಅಧಿಕಾರಿಗಳು, ಅಪಾರ್ಟ್‌ಮೆಂಟ್‌ ಒಕ್ಕೂಟ ಹಾಗೂ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಒಳಚರಂಡಿ ವ್ಯವಸ್ಥೆಯಿಲ್ಲದ ಕಡೆಗಳಲ್ಲಿ ಮಾತ್ರ ಎಸ್‌ಟಿಪಿ ಕಡ್ಡಾಯಗೊಳಿಸಲು ತೀರ್ಮಾನಿಸಲಾಯಿತು. 

ಹಳೆಯ ಅಪಾರ್ಟ್‌ಮೆಂಟ್‌ಗಳಿಗೆ ಎಸ್‌ಟಿಪಿ ಕಡ್ಡಾಯಗೊಳಿಸಿ ಜಲಮಂಡಳಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಹಲವಾರು ಅಪಾರ್ಟ್‌ಮೆಂಟ್‌ಗಳು ಹಾಗೂ ಬಿಬಿಎಂಪಿ ಕೌನ್ಸಿಲ್‌ ಸಭೆಯಲ್ಲಿ ಜಲಮಂಡಳಿಯ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಆ ಹಿನ್ನೆಲೆಯಲ್ಲಿ ಗುರುವಾರ ಸಭೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. 

110 ಹಳ್ಳಿ ಪ್ರದೇಶಗಳಿಗೆ ಹೊರೆ: ಜಲಮಂಡಳಿಯ ಅಧಿಕಾರಿಗಳು, ಗುರುವಾರ ನಡೆಸ ಸಭೆಯಲ್ಲಿ ಒಳಚರಂಡಿ ಸೇವೆ ಹೊಂದದ ಅಪಾರ್ಟ್‌ಮೆಂಟ್‌ಗಳಿಗೆ ಎಸ್‌ಟಿಪಿ ಕಡ್ಡಾಯಗೊಳಿಸಲು ತೀರ್ಮಾನಿಸಲಾಗಿದೆ. 110 ಹಳ್ಳಿಗಳಿಗೆ ಈವರೆಗೆ ಸಮರ್ಪಕವಾಗಿ ಒಳಚರಂಡಿ ಸಂಪರ್ಕ ನೀಡಲು ಜಲಮಂಡಳಿಯಿಂದ ಆಗಿಲ್ಲ. ಜತೆಗೆ ಈ ಪ್ರದೇಶದಲ್ಲಿಯೇ ಅತಿಹೆಚ್ಚು ಅಪಾರ್ಟ್‌ಮೆಂಟ್‌ಗಳು ನಿರ್ಮಾಣವಾಗಿವೆ. ಹಾಗಾಗಿ 110 ಹಳ್ಳಿಗಳ ಸಮೀಪದ ಎಲ್ಲ ಅಪಾರ್ಟ್‌ಮೆಂಟ್‌ಗಳಿಗೆ ಈ ನಿಯಮ ಅನ್ವಯವಾಗಲಿದೆ ಎನ್ನಲಾಗಿದೆ. 

ನಗರದಲ್ಲಿ ಜಲಮಂಡಳಿ ಸೇವೆ ಒಳಗೊಳ್ಳುವ ಪ್ರದೇಶದಲ್ಲಿನ 1,060 ಅಪಾರ್ಟ್‌ಮೆಂಟ್‌ಗಳಿಗೆ ನೋಟಿಸ್‌ ನೀಡಲಾಗಿದ್ದು, ಇದರಲ್ಲಿ 2007ರ ಕ್ಕೂ ಮೊದಲು ನಿರ್ಮಾಣವಾದ 344 ಅಪಾರ್ಟ್‌ಮೆಂಟ್‌ಗಳಿವೆ. ಹಳೆಯದಾಗಿರುವ ಅಪಾರ್ಟ್‌ಮೆಂಟ್‌ಗಳಲ್ಲಿ ಎಸ್‌ಟಿಪಿ ಅಳವಡಿಸುವುದು ಅಸಾಧ್ಯ ಎಂಬ ಕಾರಣಕ್ಕಾಗಿ ಅಪಾರ್ಟ್‌ಮೆಂಟ್‌ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದರು. ಆ ಹಿನ್ನೆಲೆಯಲ್ಲಿ ಒಳಚರಂಡಿ ವ್ಯವಸ್ಥೆಯಿಲ್ಲದ ಪ್ರದೇಶಗಳಲ್ಲಿ ನಿಯಮ ಕಡ್ಡಾಯಗೊಳಿಸಲು ಅಧಿಕಾರಿಗಳು ಮುಂದಾಗಿದ್ದಾರೆ. 

ಸಭೆಯಲ್ಲಿ ಭಾಗಿಯಾಗಿದ್ದ ಅಪಾರ್ಟ್‌ಮೆಂಟ್‌ಗಳ ಒಕ್ಕೂಟದ ಪದಾಧಿಕಾರಿಗಳೂ ಸಹ ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಅದರಂತೆ 110 ಹಳ್ಳಿಗಳ ಸುತ್ತಮುತ್ತಲಿನ ಭಾಗಗಳಲ್ಲಿ 3 ಸಾವಿರಕ್ಕೂ ಅಧಿಕ ಅಪಾರ್ಟ್‌ಮೆಂಟ್‌ಗಳಿವೆ ಎಂದು ಅಂದಾಜಿಸಲಾಗಿದೆ. ಈ ಪ್ರದೇಶಗಳಲ್ಲಿ ಈವರೆಗೆ ಒಳಚರಂಡಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಮೊದಲೇ ದಂಡ ವಿಧಿಸುವ ಜಲಮಂಡಳಿಯ ನಿರ್ಧಾರಕ್ಕೆ 110 ಹಳ್ಳಿಗಳ ಸಮೀಪದ ಅಪಾರ್ಟ್‌ಮೆಂಟ್‌ ಮಾಲೀಕರು ಹಾಗೂ ನಿವಾಸಿಗಳು ಹೇಗೆ ಪ್ರತಿಕ್ರಿಯಿಸುತ್ತಾರೆ ಕಾದುನೋಡಬೇಕಿದೆ. 

ಅಧಿಕಾರಿಗಳಿಗೆ ಸ್ಪಷ್ಟತೆಯಿಲ್ಲ: ಗುರುವಾರ ಸಚಿವರ ನೇತೃತ್ವದಲ್ಲಿ ನಡೆಸಲಾದ ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಕುರಿತು ಜಲಮಂಡಳಿಯ ಅಧಿಕಾರಿಗಳಿಗೆ ಸ್ಪಷ್ಟತೆಯಿಲ್ಲ. ಹೀಗಾಗಿ  ಸರ್ಕಾರದಿಂದ ಅಧಿಕೃತ ಆದೇಶ ಬಂದ ನಂತರವೇ ನಿಯಮ ಯಾರಿಗೆ, ಹೇಗೆ ಅನ್ವಯವಾಗಲಿದೆ ಎಂಬುದನ್ನು ತಿಳಿಸಲಾಗುವುದು ಎಂದು ಜಲಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ. 

ಒಳಚರಂಡಿ ವ್ಯವಸ್ಥೆಯಿಲ್ಲದ ಪ್ರದೇಶಗಳಲ್ಲಿ ಎಸ್‌ಟಿಪಿ ಕಡ್ಡಾಯಗೊಳಿಸಲಾಗಿದ್ದು, ಪ್ರಸ್ತುತ ಉಂಟಾಗಿರುವ ಗೊಂದಲಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಆದರೆ, ಹೊಸದಾಗಿ ನಿರ್ಮಾಣಗೊಳ್ಳುವ 20ಕ್ಕಿಂತ ಹೆಚ್ಚು ಮನೆಗಳಿರುವ ಅಪಾರ್ಟ್‌ಮೆಂಟ್‌ಗಳಿಗೆ ಎಸ್‌ಟಿಪಿ ಕಡ್ಡಾಯ ನಿಮಯ ಮುಂದುವರಿಯಲಿದೆ. 
-ಕೆ.ಜೆ.ಜಾರ್ಜ್‌, ಬೆಂಗಳೂರು ನಗರಾಭಿವೃದ್ಧಿ ಸಚಿವ 

50 ಮನೆಗಳಿರುವ ಹಳೆಯ ಅಪಾರ್ಟ್‌ಮೆಂಟ್‌ಗಳಿಗೆ ಎಸ್‌ಟಿಪಿ ಕಡ್ಡಾಯದ ಆದೇಶವನ್ನು ಮಾರ್ಪಾಡುಗೊಳಿಸಲು ತೀರ್ಮಾನಿಸಲಾಗಿದ್ದು, ಒಳಚರಂಡಿ ಸಂಪರ್ಕವಿಲ್ಲದ ಪ್ರದೇಶಗಳಲ್ಲಿ ಎಲ್ಲ ಬಗೆಯ ಅಪಾರ್ಟ್‌ಮೆಂಟ್‌ಗಳಿಗೂ ಎಸ್‌ಟಿಪಿ ಕಡ್ಡಾಯವಾಗಲಿದೆ. 
-ತುಷಾರ್‌ ಗಿರಿನಾಥ್‌, ಜಲಮಂಡಳಿ ಅಧ್ಯಕ್ಷ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.