ಕುಳಿತಲ್ಲೇ ವಿದ್ಯುತ್‌ ಬಿಲ್‌ ಕಟ್ಟಿ


Team Udayavani, Dec 21, 2017, 11:07 AM IST

blore3.jpg

ಬೆಂಗಳೂರು: ಬೆಸ್ಕಾಂ ತನ್ನ ಗ್ರಾಹಕರ ಅನುಕೂಲಕ್ಕಾಗಿ ವಿಶೇಷ ಮೊಬೈಲ್‌ ಆ್ಯಪ್‌ ಅಭಿವೃದ್ಧಿಪಡಿಸಿದೆ. ಇದರಿಂದ ವಿದ್ಯುತ್‌ ಬಳಕೆ ವಿವರ, ಇತರೆ ಮಾಹಿತಿ ಪಡೆಯುವ ಜತೆಗೆ ಕುಳಿತಲ್ಲೇ ಆನ್‌ಲೈನ್‌ ಬಿಲ್‌ ಪಾವತಿ, ದೂರು ಸಲ್ಲಿಕೆ ಸೌಲಭ್ಯವುಳ್ಳ ಸೇವೆಗೆ ಚಾಲನೆ ದೊರಕಿದೆ.

ಆ್ಯಂಡ್ರಾಯ್ಡ ಮೊಬೈಲ್‌ ಬಳಕೆದಾರರು ಪ್ಲೇ ಸ್ಟೋರ್‌ನಲ್ಲಿ ಹಾಗೂ ಐಒಎಸ್‌ ಮೊಬೈಲ್‌ ಬಳಕೆದಾರರು ಆ್ಯಪ್‌ ಸ್ಟೋರ್‌ನಲ್ಲಿ “ಬೆಸ್ಕಾಂ ಮಿತ್ರ’ ಆ್ಯಪ್‌ ಡೌನ್‌ಲೋಡ್‌ ಮಾಡಿ ಕೊಳ್ಳಬೇಕು. ನಂತರ ಮೊಬೈಲ್‌ ಸಂಖ್ಯೆ ನಮೂದಿಸಿದಾಗ ಪಡೆಯುವ ಒಟಿಪಿ ನಮೂದಿಸಿ ನೋಂದಣಿಯಾಗಬೇಕು. ಬಳಿಕ ವಿದ್ಯುತ್‌ ಬಿಲ್‌ನಲ್ಲಿ ನಮೂದಾದ ಅಕೌಂಟ್‌ ಐಡಿ ನಮೂದಿಸಿದರೆ ಪ್ರಕ್ರಿಯೆ ಪೂರ್ಣ ಗೊಳ್ಳಲಿದೆ. ನಂತರ ಆ್ಯಪ್‌ ಸೇವೆ ಬಳಸಬಹುದು. 

ಸಂದೇಶ ರವಾನೆ:“ಬೆಸ್ಕಾಂ ಮಿತ್ರ’ ಮೊಬೈಲ್‌ ಆ್ಯಪ್‌ನಲ್ಲಿ ಗ್ರಾಹಕರಿಗೆ ಅಗತ್ಯವಾದ ಸೇವೆಗಳನ್ನು ಕಲ್ಪಿಸಲಾಗಿದೆ. ಮುಖ್ಯವಾಗಿ ವಿದ್ಯುತ್‌ ಬಳಕೆ ಬಿಲ್‌ ವಿವರ ಸಿಗಲಿದೆ. ಬಿಲ್‌ ಪಾವತಿ ಗಡುವು ದಿನ ಸಮೀಪಿಸುತ್ತಿದ್ದಂತೆ ಅಲರ್ಟ್‌ ಸಂದೇಶ ಕೂಡ ರವಾನೆ ಯಾಗಲಿದೆ. ಆನ್‌ಲೈನ್‌ನಲ್ಲೇ ಬಿಲ್‌ ಪಾವತಿ ಅವಕಾಶ ವಿರಲಿದೆ ಎಂದು ಬೆಸ್ಕಾಂ ಡಿಜಿಎಂ (ಟೆಕ್ನಿಕಲ್‌ ಇನ್ನೋವೇಷನ್‌ ಸೆಂಟರ್‌) ಅನಿಲ್‌ ಡಿಸೋಜಾ ತಿಳಿಸಿದರು.

ವಿದ್ಯುತ್‌ ಬಳಕೆ ವಿವರ: ಮೊಬೈಲ್‌ ಆ್ಯಪ್‌ ನಲ್ಲಿ 12 ತಿಂಗಳ ವಿದ್ಯುತ್‌ ಬಳಕೆ ವಿವರ, ಬಿಲ್‌ ವಿವರ ಲಭ್ಯವಿರಲಿದೆ. ತುರ್ತು
ನಿರ್ವಹಣೆಗಾಗಿ ವಿದ್ಯುತ್‌ ವ್ಯತ್ಯಯ ಮಾಹಿತಿಯೂ ಸಿಗಲಿದೆ. ಪವರ್‌ ಕ್ಯಾಲ್ಕುಲೇಟರ್‌ ನಲ್ಲಿ ಆಯ್ದ ಉಪಕರಣದ ವಿದ್ಯುತ್‌ ಬಳಕೆ ವಿವರವೂ ಗೊತ್ತಾಗಲಿದೆ. ದೂರು ಸಲ್ಲಿಕೆಗೂ ಅವಕಾಶವಿದೆ. ಜಿಪಿಎಸ್‌ ಲೋಕೇಷನ್‌ ವ್ಯವಸೆ ಇದ್ದು, ಇದರಿಂದ ಸಮಸ್ಯೆ ತಲೆದೋರಿದ ಸ್ಥಳವನ್ನು ನಿಖರವಾಗಿ ಪತ್ತೆ ಹಚ್ಚಲು ಅನುಕೂಲವಾಗಲಿದೆ. ಬೆಸ್ಕಾಂ ನಿಂದ ನಿಯಮಿತ ಸಂದೇಶ, ಮಾಹಿತಿಯೂ ರವಾನೆಯಾಗಲಿದೆ. ಒಟ್ಟಾರೆ ಗ್ರಾಹಕರ ಅಗತ್ಯಗಳನ್ನು ಗಮನ ದಲ್ಲಿಟ್ಟು ಕೊಂಡು ಆ್ಯಪ್‌ ರೂಪುಗೊಂಡಿದೆ ಎಂದು ಹೇಳಿದರು.

ನಗರದಲ್ಲಿ ಬುಧವಾರ ನಡೆದ “ಬೆಸ್ಕಾಂ ಮಿತ್ರ’ ಮೊಬೈಲ್‌ ಆ್ಯಪ್‌ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಇಂಧನ
ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌, ನಾನಾ ಸೇವೆಗಳಿಗೆ ಸಂಬಂಧ ಪಟ್ಟಂತೆ ಮೊಬೈಲ್‌ ಆ್ಯಪ್‌ಗ್ಳಿದ್ದು, ಅವುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸುತ್ತಿಲ್ಲ. ವಿದ್ಯುತ್‌ ಗ್ರಾಹಕರ ಅನುಕೂಲಕ್ಕಾಗಿ ರೂಪಿಸಿರುವ ಮೊಬೈಲ್‌ ಆ್ಯಪ್‌ಅನ್ನು ಗ್ರಾಹಕರು ಡೌನ್‌ಲೋಡ್‌ ಮಾಡಿಕೊಂಡು ಬಳಸಬೇಕು. ಆ್ಯಪ್‌ ಸೇವೆಯಿಂದ ಗ್ರಾಹಕರು ಕಚೇರಿ ಗಳಿಗೆ ಅಲೆದಾಡುವುದು ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದರು.

ಎಫ್ಕೆಸಿಸಿಐ ಅಧ್ಯಕ್ಷ ಕೆ.ರವಿ, “ದೇಶದಲ್ಲಿಂದು ಆನ್‌ಲೈನ್‌ ಸೇವೆಗಳನ್ನು ಪರಿಣಾಮಕಾರಿಯಾಗಿ ಬಳಸುವವರ ಸಂಖ್ಯೆ ಹೆಚ್ಚಾಗಿದ್ದು, ಗ್ರಾಹಕರ ಅನುಕೂಲಕ್ಕಾಗಿ ಬೆಸ್ಕಾಂ ಆ್ಯಪ್‌ ಅಭಿವೃದ್ಧಿಪಡಿಸಿರುವುದು ಉತ್ತಮವಾಗಿದೆ ಎಂದು ತಿಳಿಸಿದರು. 

ಕಾಸಿಯಾ ಅಧ್ಯಕ್ಷ ಹನುಮಂತೇಗೌಡ, ಅಧಿಕಾರಿಗಳು ವಿದ್ಯುತ್‌ ಗ್ರಾಹಕರ ಸಮಸ್ಯೆಗಳಿಗೆ ಸ್ಪಂದಿಸಿ ಉತ್ತಮ ಸೌಲಭ್ಯ ಕಲ್ಪಿಸಲು ಸಹಕಾರ ನೀಡಬೇಕು. ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲ ಸಮಸ್ಯೆಗಳಿದ್ದು, ಪರಿಹರಿಸಲು ಗಮನ ಹರಿಸಬೇಕು. ಸೌರ ವಿದ್ಯುತ್‌ ಉತ್ಪಾದನೆ ಹೆಚ್ಚಾದರೆ ಕೈಗಾರಿಕೆಗಳಿಗೆ ವಿದ್ಯುತ್‌ ದರ ಇಳಿಕೆ ಬಗ್ಗೆಯೂ ಚಿಂತಿಸಬೇಕು ಎಂದು ಮನವಿ ಮಾಡಿದರು. 
ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.