ಡಿಜಿಟಲ್‌ ದಾಳಿಗೆ ದಿನದರ್ಶಿಕೆಗೆ ಹೊಡೆತ


Team Udayavani, Dec 21, 2017, 11:54 AM IST

18mar5wcegzyajpg.jpg

ಬೆಂಗಳೂರು: ಕೆಲವೇ ವರ್ಷಗಳ ಹಿಂದಿನ ಮಾತು ಡಿಸೆಂಬರ್‌ ಕಳೆದು ಜನವರಿ ಬಂತೆಂದರೆ, ಮನೆಗೊಂದು ಹೊಸ ಕ್ಯಾಲೆಂಡರ್‌, ನಿತ್ಯದ ಚಟುವಟಿಕೆ ಬರೆದಿಡಲು ಡೈರಿ ಬರುವ ಸಂಭ್ರಮ. ಮಾರುಕಟ್ಟೆಯಲ್ಲೂ ಅಷ್ಟೇ, ಹೊಸ ವರ್ಷಕ್ಕೆ ತಿಂಗಳಿರುವಾಗಲೇ ಬಗೆಬಗೆಯ ಕ್ಯಾಲೆಂಡರ್‌ಗಳು ಅಂಗಡಿಗಳ ಮುಂದೆ ರಾರಾಜಿಸುತ್ತಿದ್ದವು. ಆದರೆ, ಈ ಬಾರಿ ಹೊಸ ವರ್ಷದ ಕ್ಯಾಲೆಂಡರ್‌ ಮತ್ತು ಡೈರಿಗಳನ್ನು ಕೇಳುವವರಿಲ್ಲ.

ಹೊಸ ವರ್ಷದ ಹೊಸ್ತಿಲಲ್ಲಿ ಇರುವುದರಿಂದ ಬೆಂಗಳೂರು ಮಾತ್ರವಲ್ಲ, ಮುಂಬೈ, ದೆಹಲಿ, ಚೆನ್ನೈ ಸೇರಿದಂತೆ ದೇಶದ ನಾನಾ ಭಾಗಗಳಿಂದ ಬಣ್ಣ-ಬಣ್ಣದ ಕ್ಯಾಲೆಂಡರ್‌ಗಳು, ಡೈರಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಆದರೆ, ಖರೀದಿಸುವವರೇ ಇಲ್ಲ. ಇದರಿಂದ ಕ್ಯಾಲೆಂಡರ್‌ಗಳು ಮುದ್ರಕರು, ವಿತರಕರ ಕೈಸುಡುತ್ತಿವೆ. 

ಇದಕ್ಕೆ ಕಾರಣ ಮೊಬೈಲ್‌, ಸಾಮಾಜಿಕ ಜಾಲತಾಣಗಳ ಅಬ್ಬರ ಮತ್ತು ಆನ್‌ಲೈನ್‌ ಮಾರುಕಟ್ಟೆ ಹಾವಳಿ! ಇದು ಹೊಸ ವರ್ಷ ಮಾತ್ರವಲ್ಲ, ಚುನಾವಣಾ ವರ್ಷವೂ ಆಗಿರುವ ಕಾರಣ ಸಹಜವಾಗೇ ಈ ಬಾರಿ ಕ್ಯಾಲೆಂಡರ್‌ಗಳಿಗೆ ಹೆಚ್ಚು ಬೇಡಿಕೆ ಇರಬೇಕಿತ್ತು. ಆದರೆ, ಹಾಗಾಗಿಲ್ಲ. ಈ ವರ್ಷ ಮುಗ್ರಣಕೆಕ ಎಂದಿಗಿಂತ ಕಡಿಮೆ ಆರ್ಡರ್‌ಗಳು ಬಂದಿವೆ ಎಂದು ಕಾಮಾಕ್ಷಿಪಾಳ್ಯದ ಮುದ್ರಕ ಮಂಜು ಬೇಸರ ವ್ಯಕ್ತಪಡಿಸುತ್ತಾರೆ.

“ಚುನಾವಣೆ ಸಮೀಪಿಸುತ್ತಿರುವುದರಿಂದ ಹೊಸ ವರ್ಷದ ನೆಪದಲ್ಲಿ ಕಾರ್ಯಕರ್ತರು ತಮ್ಮ ಮತ್ತು ತಮ್ಮ ನಾಯಕರ ಭಾವಚಿತ್ರಗಳಿರುವ ಕ್ಯಾಲೆಂಡರ್‌ಗಳನ್ನು ಮುದ್ರಿಸಿ ಹಂಚುತ್ತಾರೆ. ನಮ್ಮಲ್ಲಿ ಈ ಮಾದರಿಯ ಆರ್ಡರ್‌ಗಳೇ ಹೆಚ್ಚು. ಲಕ್ಷಗಟ್ಟಲೆ ಕ್ಯಾಲೆಂಡರ್‌ಗಳ ಮುದ್ರಣಕ್ಕೆ ಆರ್ಡರ್‌ ಬರುತ್ತಿತ್ತು. ಆದರೆ, ಈ ಬಾರಿಯ ಬೇಡಿಕೆ ಬರೀ 30 ಸಾವಿರ. ಜತೆಗೆ ಹಿಂದೆಲ್ಲಾ ಕ್ಯಾಲೆಂಡರ್‌ ಮುದ್ರಣಕ್ಕೆ ಮುಗಿಬೀಳುತ್ತಿದ್ದ ಎಲ್‌ಐಸಿ ಏಜೆಂಟರ್‌ಗಳು ಈ ಬಾರಿ ಪತ್ತೆಯಿಲ್ಲ,’ ಎನ್ನುತ್ತಾರೆ ಮಂಜು.

ಬದಲಾದ ಪ್ರಚಾರ ಮಾಧ್ಯಮ: ಇಂದು ಪ್ರಚಾರದ ಮಾಧ್ಯಮಗಳು ಬದಲಾಗಿವೆ. ಮೊಬೈಲ್‌, ಸಾಮಾಜಿಕ ಜಾಲತಾಣಗಳು ಕ್ಯಾಲೆಂಡರ್‌ಗಳ ಸ್ಥಳ ಆಕ್ರಮಿಸಿವೆ. ರಾಜಕೀಯ ನಾಯಕರು, ಕಾರ್ಯಕರ್ತರು ಮೊಬೈಲ್‌ ಮೂಲಕವೇ ಸಂದೇಶ ಕಳುಹಿಸುತ್ತಿದ್ದಾರೆ. ಕ್ಯಾಲೆಂಡರ್‌ ಮುದ್ರಣ ವೆಚ್ಚ, ಅವುಗಳನ್ನು ವಿತರಿಸುವವರಿಗೆ ನೀಡಬೇಕಾದ ಹಣ ಎಲ್ಲವನ್ನೂ ನೋಡಿಕೊಂಡರೆ ಡಿಜಿಟಲ್‌
ಪ್ರಚಾರವೇ ಚೀಪ್‌ ಎಂಬ ಲೆಕ್ಕಾಚಾರ ಹಾಕುತ್ತಿದ್ದಾರೆ. ಅಲ್ಲದೆ ಈಗ ಕ್ಯಾಲೆಂಡರ್‌ ನೋಡೋರ್ಯಾರು? ಎಲ್ಲ ಮೊಬೈಲ್‌ನಲ್ಲೇ ಸಿಗುತ್ತಲ್ಲ ಎಂಬುದು ರಾಜಕಾರಣಗಳ ಅಭಿಪ್ರಾಯ.

ಬೆಲೆ ಹೆಚ್ಚಿಸಿದ ಜಿಎಸ್‌ಟಿ: “ಕ್ಯಾಲೆಂಡರ್‌ ಮತ್ತು ಡೈರಿ ಮುದ್ರಣ ಬೇಡಿಕೆ ಕುಸಿಯಲು ಮತ್ತೂಂದು ಕಾರಣ ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್‌ಟಿ). ಈ ಹಿಂದೆ ತೆರಿಗೆ ಶೇ.5 ಇತ್ತು. ಈಗ ಶೇ.18ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದ್ದು, ಕ್ಯಾಲೆಂಡರ್‌, ಡೈರಿಗಳು ದುಬಾರಿ ಯಾಗಿವೆ. ಮೊದಲೇ ಇವುಗಳ ಬಗ್ಗೆ ಆಸಕ್ತಿ ಕಳೆದುಕೊಂಡಿರುವ ಜನ, ರೇಟ್‌ ಕೇಳಿ ವಾಪಸ್‌ ಹೋಗುತ್ತಾರೆ,’ ಎಂದು
ಪೀಣ್ಯ ಪ್ರಿಂಟರ್ನ ಕುಮಾರ್‌ ಅಭಿಪ್ರಾಯಪಡುತ್ತಾರೆ.

ಕ್ಯಾಲೆಂಡರ್‌ ವ್ಯಾಪಾರ ಅರ್ಧಕ್ಕರ್ಧ ಕುಸಿತ “ಹಿಂದಿನ ಹಲವು ವರ್ಷಗಳಿಗೆ ಹೋಲಿಸಿದರೆ, ಕ್ಯಾಲೆಂಡರ್‌, ಡೈರಿಗಳ ಖರೀದಿ ಅರ್ಧದಷ್ಟು ಕುಸಿದಿದೆ. ಕಳೆದ ವರ್ಷ ನಾನು 15 ಲಕ್ಷ ಮೊತ್ತದ ಕ್ಯಾಲೆಂಡರ್‌ ಮತ್ತು ಡೈರಿಗಳನ್ನು ಮಾರಿದ್ದೆ. ಈ ಬಾರಿಯ ವ್ಯಾಪಾರ ಬರೀ 5 ಲಕ್ಷ ರೂ. ಮುಂಬೈನಿಂದ ಲಕ್ಷಾಂತರ ಮೌಲ್ಯದ, ವಿವಿಧ ವಿನ್ಯಾಸದ ಕ್ಯಾಲೆಂಡರ್‌ಗಳನ್ನು ತರಿಸಿದ್ದರೂ ಕೇಳುವವರಿಲ್ಲ,’ ಎಂದು ಕಬ್ಬನ್‌ಪೇಟೆಯ ಮಹಿಪಾಲ್‌ ಸ್ಟೇಷನರೀಸ್‌ನ ಭವಾನಿಸಿಂಗ್‌ ಅಲವತ್ತುಕೊಂಡರು. “ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ಅವಧಿಯಲ್ಲಿ ರಾತ್ರಿ 12ರವರೆಗೂ ವ್ಯಾಪಾರ ನಡೆಯುತ್ತಿತ್ತು. ಊಟಕ್ಕೂ ಸಮಯ ಇರುತ್ತಿರಲಿಲ್ಲ. ಕಳೆದ ವರ್ಷ ಈ ಹೊತ್ತಿಗೆ 10 ಸಾವಿರ ಡೈರಿ, 5 ಸಾವಿರ ಕ್ಯಾಲೆಂಡರ್‌ ಬಿಕರಿಯಾಗಿದ್ದವು. ಆದರೆ, ಈ ಬಾರಿ ತಲಾ ಒಂದು ಸಾವಿರ ಮಾರಾಟ ಆಗಿವೆ. ಎಲ್ಲೆಡೆ ಇದೇ ಸ್ಥಿತಿ ಇದೆ,’
ಎನ್ನುತ್ತಾರೆ ಕಬ್ಬನ್‌ಪೇಟೆ ಮುಖ್ಯರಸ್ತೆಯ ವ್ಯಾಪಾರಿ ಚೈಲ್‌ಸಿಂಗ್‌.

ಟಾಪ್ ನ್ಯೂಸ್

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.