ಅನಧಿಕೃತ ಬಸ್‌ ತಡೆದರೆ ಅಧಿಕೃತ ಆದಾಯ ಏರಿಕೆ


Team Udayavani, Dec 24, 2017, 10:48 AM IST

blore-1.jpg

ಬೆಂಗಳೂರು: ನಷ್ಟದ ನಡುವೆಯೂ ಯಾವುದೇ ಆರ್ಥಿಕ ಹೊರೆ ಇಲ್ಲದೆ, ಬಿಎಂಟಿಸಿ ಟಿಕೆಟ್‌ ದರವನ್ನು ಕನಿಷ್ಠ ಶೇ.30ರಿಂದ 40ರಷ್ಟು ಇಳಿಸಲು ಸಾಧ್ಯವಿದೆ! ಆದರೆ, ಅದಕ್ಕೆ ಸಾರಿಗೆ ಇಲಾಖೆ ಮತ್ತು ಬಿಎಂಟಿಸಿ ಮನಸ್ಸು ಮಾಡಬೇಕು. ಇತ್ತೀಚೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಬಿಎಂಟಿಸಿ ಬಸ್‌ಗಳ ಪ್ರಯಾಣ ದರವನ್ನು ಶೇ.50ರಷ್ಟು ಕಡಿಮೆ ಮಾಡಬೇಕು ಎಂದಿದ್ದರು. ಇದಕ್ಕೆ ಸಾರಿಗೆ ಸಚಿವರು ಕೂಡ “ಈ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು’ ಎಂದೂ ಹೇಳಿದ್ದರು. ಅದಕ್ಕೆ ಪೂರಕವಾಗಿ, ನಗರದಲ್ಲಿ ನಿಯಮ ಬಾಹಿರವಾಗಿ ಸಂಚರಿಸುತ್ತಿರುವ ವಾಹನಗಳ ಹಾವಳಿಗೆ ಕಡಿವಾಣ ಹಾಕಿದರೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ದಿನದ ಆದಯಾ ಕನಿಷ್ಠ 75 ಲಕ್ಷ ರೂ.ನಿಂದ ಒಂದು ಕೋಟಿ ರೂ.ಗೆ ಏರಿಕೆಯಾಗಲಿದೆ. ಆಗ ಟಿಕೆಟ್‌ ದರದಲ್ಲಿ ಶೇ.30ರಿಂದ 40ರಷ್ಟನ್ನು ಅನಾಯಾಸವಾಗಿ ತಗ್ಗಿಸಬಹುದು ಎಂದು ಬಿಎಂಟಿಸಿ ಅಂದಾಜಿಸಿದೆ.

ನಿಯಮ ಬಾಹಿರ ವಾಹನಗಳ ವಿರುದ್ಧ ಡಿ.11 ರಿಂದ 16ರವರೆಗೆ ಕೇವಲ ಮೂರ್‍ನಾಲ್ಕು ಕಡೆಗಳಲ್ಲಿ ಸಾರಿಗೆ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಬಿಎಂಟಿಸಿಗೆ ಪ್ರತಿ ದಿನ 20ರಿಂದ 25 ಲಕ್ಷ ರೂ. ಆದಾಯ ಏರಿಕೆಯಾಗಿದೆ. ಹಾಗೊಂದು ವೇಳೆ ನಗರಾದ್ಯಂತ ಅನಧಿಕೃತ ಖಾಸಗಿ ಬಸ್‌ಗಳಿಗೆ ಸಂಪೂರ್ಣ ಬ್ರೇಕ್‌ ಬಿದ್ದರೆ, ಸಂಸ್ಥೆಯ ದಿನದ ಆದಾಯ 75 ಲಕ್ಷ ರೂ.ಗೆ ಏರಿಕೆಯಾಗುತ್ತದೆ ಎಂದು ಬಿಎಂಟಿಸಿಯ ಅಧಿಕಾರಿಗಳು ತಿಳಿಸಿದ್ದಾರೆ.

1005 ಬಸ್‌ ನಿಯಮ ಬಾಹಿರ?: ಬಿಎಂಟಿಸಿ ಅಧಿಕಾರಿಗಳು ಈಚೆಗೆ ನಡೆಸಿದ ಸಮೀಕ್ಷೆ ಪ್ರಕಾರ ನಗರದಲ್ಲಿ 1,005 ಬಸ್‌ಗಳು ನಿಯಮಬಾಹಿರವಾಗಿ ಸಂಚರಿಸುತ್ತಿವೆ. ಈ ಪೈಕಿ 474 ಬಸ್‌ ಹಾಗೂ ಮಿನಿ ಬಸ್‌, 408 ಟೆಂಪೋ ಟ್ರ್ಯಾಕ್ಸ್‌, 33 ಮ್ಯಾಕ್ಸಿಕ್ಯಾಬ್‌, 90 ಇತರೆ ವಾಹನಗಳಿವೆ ಎಂದು ಗುರುತಿಸಲಾಗಿದೆ. ಇದಲ್ಲದೆ, ಆ್ಯಪ್‌ ಆಧಾರಿತ ವಾಹನಗಳು ಸೇರಿದಂತೆ ಸಾರಿಗೆ ನಿಯಮ ಬಾಹಿರವಾಗಿ ಸಂಚರಿಸುತ್ತಿವೆ ಎಂದು ಬಿಎಂಟಿಸಿ ಮಾಹಿತಿ ನೀಡಿದೆ.

ಎಲ್ಲೆಲ್ಲಿ ಕಾರ್ಯಾಚರಣೆ?: ನಗರದ ಮೇಕ್ರಿ ವೃತ್ತ, ಬಿಇಎಲ್‌ ವೃತ್ತ, ಹೈಗ್ರೌಂಡ್ಸ್‌, ಹೆಬ್ಟಾಳ, ಕಾವೇರಿ ಜಂಕ್ಷನ್‌, ಗೋವರ್ಧನ್‌ ಚಿತ್ರಮಂದಿರ, ಸಿಲ್ಕ್ಬೋರ್ಡ್‌ ಜಂಕ್ಷನ್‌, ಎಲೆಕ್ಟ್ರಾನಿಕ್‌ ಸಿಟಿ, ಉಡುಪಿ ಗಾರ್ಡನ್‌, ಮೈಕೋ ಲೇಔಟ್‌, ಹುಳಿಮಾವು, ಮಾರತ್‌ಹಳ್ಳಿ, ಗುಟ್ಟಹಳ್ಳಿ, ಐಟಿಪಿಎಲ್‌, ಅಗರ, ಕುಂದಲಹಳ್ಳಿ, ಸರ್ಜಾಪುರ, ದಾಸರಹಳ್ಳಿ, ಬಿಟಿಎಂ ಲೇಔಟ್‌, ಬನಶಂಕರಿ, ಮೈಸೂರು ಬ್ಯಾಂಕ್‌ ವೃತ್ತ ಸೇರಿದಂತೆ ವಿವಿಧ ಮಾರ್ಗಗಳಲ್ಲಿ ಅನಧಿಕೃತ ಖಾಸಗಿ ವಾಹನಗಳು ಸಂಚರಿಸುತ್ತವೆ ಎಂದು ಗುರುತಿಸಲಾಗಿದೆ. ಖಾಸಗಿ ವಾಹನಗಳು ಗಾರ್ಮೆಂಟ್‌, ಕಾರ್ಖಾನೆ ಕಾರ್ಮಿಕರನ್ನು ಡ್ರಾಪ್‌ ಮಾಡಿದ ನಂತರ ಅನಧಿಕೃತ ಕಾರ್ಯಾಚರಣೆಗೆ ಇಳಿಯುತ್ತಿವೆ.

“ನಿಯಮಬಾಹಿರವಾಗಿ ಸಂಚರಿಸುವ ಖಾಸಗಿ ವಾಹನಗಳ ವಿರುದ್ಧ ನಿರಂತರವಾಗಿ ಒಂದೂವರೆ ತಿಂಗಳು ಕಾರ್ಯಾಚರಣೆ ನಡೆಸಿದರೆ, ಸುಲಭವಾಗಿ ಅವುಗಳಿಗೆ ಕಡಿವಾಣ ಬೀಳುತ್ತದೆ. ಇದರಿಂದ ಹೆಚ್ಚುವ ಆದಾಯವನ್ನು ಪ್ರಯಾಣಿಕರ ಅನುಕೂಲಕ್ಕೆ ಬಳಸಿಕೊಳ್ಳಬಹುದು ಇದಕ್ಕೆ ಮನಸ್ಸು ಬೇಕಷ್ಟೇ,’ ಎನ್ನುತ್ತಾರೆ ಬಿಎಂಟಿಸಿ ಬಸ್‌ ಪ್ರಯಾಣಿಕರ ವೇದಿಕೆ ಸದಸ್ಯ ವಿನಯ್‌ ಶ್ರೀನಿವಾಸ್‌. 

“ನಿಯಮಬಾಹಿರ ವಾಹನಗಳ ವಿರುದ್ಧದ ಕಾರ್ಯಾಚರಣೆ ಒಂದು ನಿರಂತರ ಪ್ರಕ್ರಿಯೆ. ಇದು ಈಗಾಗಲೇ ನಗರದ ವಿವಿಧೆಡೆ ನಡೆಯುತ್ತಿದ್ದು, ಹೀಗೇ ಮುಂದುವರಿಯಲಿದೆ. ಸಂಪೂರ್ಣವಾಗಿ ಕಡಿವಾಣ ಹಾಕಲು ಇಲಾಖೆ ಸರ್ವ ಪ್ರಯತ್ನ ನಡೆಸುತ್ತಿದೆ,’ ಎಂದು ಸಾರಿಗೆ ಇಲಾಖೆ ಆಯುಕ್ತ ಬಿ. ದಯಾನಂದ ಪ್ರತಿಕ್ರಿಯಿಸಿದ್ದಾರೆ

ನಗರದಲ್ಲಿ ನಿಯಮಬಾಹಿರವಾಗಿ ಸಂಚರಿಸುತ್ತಿರುವ ಖಾಸಗಿ ವಾಹನಗಳ ಬಗ್ಗೆ ಸಾರಿಗೆ ಇಲಾಖೆಗೆ ವೀಡಿಯೊ ಸಹಿತ ಮಾಹಿತಿ ನೀಡಿದ್ದರ ಪರಿಣಾಮ ಈಚೆಗೆ ಕಾರ್ಯಾಚರಣೆ ನಡೆಯಿತು. ಇದು ನಿರಂತರವಾಗಿ ನಡೆದು, ಸಂಪೂರ್ಣ ಕಡಿವಾಣ ಹಾಕಿದರೆ, ಸಂಸ್ಥೆಗೆ 75 ಲಕ್ಷರೂ.ಗಿಂತ ಹೆಚ್ಚು ಉಳಿತಾಯವಾಗಲಿದ್ದು, ಇದರ ಅನುಕೂಲ ಪ್ರಯಾಣಿಕರಿಗೆ ಸಿಗುವುದರಲ್ಲಿ ಅನುಮಾನವೇ ಇಲ್ಲ.
 ● ವಿ.ಪೊನ್ನುರಾಜ್‌, ವ್ಯವಸ್ಥಾಪಕ ನಿರ್ದೇಶಕರು, ಬಿಎಂಟಿಸಿ

ಬಸ್‌ ಹಿಂದೆ-ಮುಂದೆ ಸಿಸಿಟಿವಿ ಅಳವಡಿಸಲಿ ಬಿಎಂಟಿಸಿ ಬಸ್‌ಗಳ ಮುಂದೆ ಮತ್ತು ಹಿಂಭಾಗದಲ್ಲಿ ಸಿಸಿಟಿವಿಗಳನ್ನು ಅಳವಡಿಸಬೇಕು. ಇದರಿಂದ ನಿಯಮ ಬಾಹಿರವಾಗಿ ಸಂಚರಿಸುವ ವಾಹನಗಳ ಎಲ್ಲ ಮಾಹಿತಿ ಲಭ್ಯವಾಗುತ್ತದೆ. ಸಿಸಿ ಕ್ಯಾಮೆರಾದಿಂದ ಕೇವಲ ಖಾಸಗಿ ವಾಹನಗಳ ಮಾಹಿತಿ ಅಲ್ಲ, ಬಸ್‌ ಸಂಚರಿಸುವ ಮಾರ್ಗದಲ್ಲಿ ಯಾವುದೇ ಘಟನೆಗಳು ನಡೆದರೂ ಗೊತ್ತಾಗುತ್ತದೆ. ಇದಕ್ಕೆ ಸರ್ಕಾರ ಅನುದಾನ ನೀಡಬೇಕು. ಆಗ ಹೊರೆ ಆಗುವುದಿಲ್ಲ ಎಂದು ಸಾರಿಗೆ ತಜ್ಞರೊಬ್ಬರು ತಿಳಿಸುತ್ತಾರೆ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.