ತಿರುಪತಿ ದೇಗುಲದ ಆದಾಯದಲ್ಲೂ ಖೋತಾ!


Team Udayavani, Jan 7, 2018, 3:37 PM IST

blore.jpg

ತಿರುಪತಿ: ಕೇಂದ್ರ ಸರ್ಕಾರದ ನೋಟು ಅಮಾನ್ಯದ ಬಿಸಿ ತಿರುಪತಿ ತಿಮ್ಮಪ್ಪ ದೇಗುಲದ ಆದಾಯಕ್ಕೂ
ತಟ್ಟಿದೆ. 2016ರಲ್ಲಿ ಭಕ್ತರ ಕಡೆಯಿಂದ ದೇಣಿಗೆಯಾಗಿ 1046.28 ಕೋಟಿ ರೂ. ಬಂದಿದ್ದರೆ, 2017ರಲ್ಲಿ ಈ ಮೊತ್ತ 995.89 ಕೋಟಿ ರೂ.ಗಳಿಗೆ ಇಳಿಕೆಯಾಗಿದೆ. ಈ ಬಗ್ಗೆ ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಯೇ ಅಧಿಕೃತವಾಗಿ ಹೇಳಿಕೆ ನೀಡಿದೆ. 50 ಕೋಟಿ ರೂ.ಗಳಷ್ಟು ಹಣ ಖೋತಾ ಆಗಲು ನೋಟು ಅಮಾನ್ಯವೇ ಕಾರಣ ಎಂದು ಟಿಟಿಯ ಕಾರ್ಯಕಾರಿ ಅಧಿಕಾರಿ ಅನಿಲ್‌ ಕುಮಾರ್‌ ಸಿಂಘಾಲ್‌ ಹೇಳಿದ್ದಾರೆ. 

ಜಗತ್ತಿನ ಅತೀ ಶ್ರೀಮಂತ ದೇಗುಲವಾಗಿರುವ ತಿರುಪತಿ ದೇಗುಲಕ್ಕೆ ಏನಿಲ್ಲವೆಂದರೂ ವರ್ಷಕ್ಕೆ ಒಂದು ಸಾವಿರ ಕೋಟಿಗೂ ಹೆಚ್ಚು ಆದಾಯ ಬರುತ್ತದೆ. ಅಲ್ಲದೆ ಕಳೆದ ವರ್ಷ 2.73 ಕೋಟಿ ಭಕ್ತರು ತಿರುಪತಿಗೆ ಭೇಟಿ ನೀಡಿದ್ದು, ಇವರು ಹರಕೆ ರೂಪದಲ್ಲಿ ಕೊಟ್ಟ ಕೂದಲಿನ ಪ್ರಮಾಣವೇ 1,87,000 ಕೆಜಿ. ಈ ಕೂದಲಿನ ಮಾರಾಟದಿಂದಲೇ ದೇಗುಲಕ್ಕೆ 6 ಕೋಟಿ ರೂ.ಗಳಿಗೂ ಹೆಚ್ಚು ಹಣ ಬಂದಿದೆ. ಆದರೆ ದೇಗುಲದ ಆದಾಯದಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿರುವುದಕ್ಕೆ ಟಿಟಿಡಿ ಕೇಂದ್ರ ಸರ್ಕಾರದ ನೋಟು ಅಮಾನ್ಯ ನಿರ್ಧಾರವನ್ನೇ ಹೊಣೆ ಮಾಡಿದೆ.

2016ರ ಅಂತ್ಯದಲ್ಲಿ ಕೇಂದ್ರ ಸರ್ಕಾರ ನೋಟು ಅಮಾನ್ಯ ಮಾಡಿದ ಮೇಲೆ ದೇಗುಲಕ್ಕೆ ಭಾರಿ ಪ್ರಮಾಣದ ಕಾಣಿಕೆ ಹರಿದು ಬಂತು. ಜತೆಗೆ ಹಳೇ ನೋಟುಗಳನ್ನು ಬ್ಯಾಂಕಿಗೆ ವಾಪಸ್‌ ನೀಡುವ ದಿನಾಂಕ ಮುಗಿದ ಮೇಲೂ ಭಾರಿ ಪ್ರಮಾಣದ ಹಣ ದೇಗುಲಕ್ಕೆ ಬಂದಿದೆ. ಇದನ್ನು ತೆಗೆದುಕೊಳ್ಳಲು ಆರ್‌ಬಿಐ ನಿರಾಕರಿಸಿದ್ದರಿಂದ ದೇಗುಲಕ್ಕೆ 50 ಕೋಟಿ ರೂ. ನಷ್ಟವಾಗಿದೆ ಎಂದು ಅನಿಲ್‌ ಕುಮಾರ್‌ ಹೇಳಿದ್ದಾರೆ.

ಆನ್‌ಲೈನ್‌ ಹುಂಡಿಯಲ್ಲಿ ಹೆಚ್ಚಳ: ಈ ಮಧ್ಯೆ, 2016ಕ್ಕೆ ಹೋಲಿಕೆ ಮಾಡಿದಲ್ಲಿ 2017ರಲ್ಲಿ ದೇಗುಲದ ಆನ್‌ಲೈನ್‌ ಹುಂಡಿಗೆ ಬಂದ ಕಾಣಿಕೆಯಲ್ಲಿ ಹೆಚ್ಚಾಗಿದೆ. ಈ ವರ್ಷ 15.36 ಕೋಟಿ ಬಂದಿದ್ದರೆ, ಕಳೆದ ಬಾರಿ 10.53 ಕೋಟಿ ರೂ.
ಗಳಷ್ಟೇ ಸಂಗ್ರಹವಾಗಿತ್ತು. ಇದಷ್ಟೇ ಅಲ್ಲ ಕಳೆದ ವರ್ಷ ತಿರುಪತಿಯಲ್ಲಿ 10.66 ಕೋಟಿ ಮೌಲ್ಯದ ಲಡ್ಡುಗಳನ್ನು ಪ್ರಸಾದದ ರೂಪವಾಗಿ ವಿತರಿಸಲಾಗಿದೆ ಎಂದು ಅನಿಲ್‌ ಕುಮಾರ್‌ ಹೇಳಿದ್ದಾರೆ. 

ಹಿಂದೂಯೇತರರ ವರ್ಗಾವಣೆ? ಜಗದ್ವಿಖ್ಯಾತ ವೆಂಕಟೇಶ್ವರ ಸ್ವಾಮಿ ಸನ್ನಿಧಾನ ಸೇರಿದಂತೆ, ತಿರುಮಲ- ತಿರುಪತಿ ದೇವಸ್ಥಾನಂ (ಟಿಟಿಡಿ) ಅಡಿಯಲ್ಲಿ ಬರುವ ಎಲ್ಲಾ ದೇಗುಲಗಳಲ್ಲಿ ಸೇವೆ ಸಲ್ಲಿಸುತ್ತಿರುವ 44 ಹಿಂದೂಯೇತರ ಸಿಬ್ಬಂದಿ ಬೇರೆ ಇಲಾಖೆಗಳಿಗೆ ತೆರಳುವಂತೆ ಮಾಡಲು ಟಿಟಿಡಿ ಆಡಳಿತ ಮಂಡಳಿ ಆಲೋಚಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಟಿಟಿಡಿಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್‌ ಕುಮಾರ್‌ ಸಿಂಘಲ್‌, “”ಟಿಟಿಡಿ ದೇಗುಲ ಗಳಲ್ಲಿ ಸೇವೆ
ಸಲ್ಲಿಸುತ್ತಿರುವ ವಿವಿಧ ಸಿಬ್ಬಂದಿಯನ್ನು ಬೇರೆ ಬೇರೆ ಇಲಾಖೆಗಳಿಗೆ ತೆರಳುವಂತೆ ಸೂಚಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಆಂಧ್ರಪ್ರದೇಶ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗಿದ್ದು, ಸರ್ಕಾರವೂ ಇವರನ್ನು ಬೇರೆ ಇಲಾಖೆಗಳಿಗೆ ವರ್ಗಾಯಿಸಲು ಒಪ್ಪಿದೆ” ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.