ತಂತ್ರಾಂಶ ಬದಲಿಸಲು 3 ತಿಂಗಳು ಬೇಕೇ?


Team Udayavani, Jan 11, 2018, 12:56 PM IST

bng.jpg

ಯಲಹಂಕ: ಭೂಮಿಯ ದಾಖಲೆಗಳನ್ನು ತಿದ್ದು ಪಡಿ ಮಾಡುವುದೂ ಸೇರಿದಂತೆ ವಿವಿಧ ಕಾರಣ ಗಳಿಂದ ಸಲ್ಲಿಸಿದ ಅರ್ಜಿಗಳು ವಿಲೇವಾರಿ ಯಾಗದ ಕಾರಣ ಬೇಸತ್ತ ರೈತರು ಭೂದಾಖಲೆ ವಿಭಾಗದ ಕಚೇರಿ ಎದುರು ಬುಧವಾರ ದಿಢೀರ್‌ ಧರಣಿ ನಡೆಸಿದರು.

ಮಿನಿ ವಿಧಾನಸೌಧದಲ್ಲಿರುವ ಕಂದಾಯ ಇಲಾಖೆಯ ಭೂಮಿ ವಿಭಾಗದಲ್ಲಿ ಕಳೆದ ಮೂರು ತಿಂಗಳಿನಿಂದ ವಿವಿಧ ಉದ್ದೇಶಗಳಿಂದ ಸಲ್ಲಿಸಿದ್ದ ಅರ್ಜಿಗಳು ಈವರೆಗೂ ವಿಲೇವಾರಿಯಾಗಿಲ್ಲ. ಕಂಪ್ಯೂಟರ್‌ ತಂತ್ರಾಂಶ ಬದಲಾವಣೆ ಮಾಡ ಲಾಗುತ್ತಿದೆ ಎಂಬ ನೆಪ ಹೇಳಿ ಅಲೆಸುತ್ತಿದ್ದಾರೆ.

ತಂತ್ರಾಂಶ ಬದಲಿಸಲು ಮೂರು ತಿಂಗಳು ಬೇಕೇ? ಎಂದು ಪ್ರಶ್ನಿಸಿದ ಪ್ರತಿಭಟನಾನಿರತ ರೈತರು, ಅರ್ಜಿ ವಿಲೇವಾರಿಯಾಗದ ಕಾರಣ ಹಲವು ಕೆಲಸ ಕಾರ್ಯಗಳಿಗೆ ತೊಡಕಾಗಿದೆ. ಸಮಸ್ಯೆ ಪರಿಹರಿಸು ವವರೆಗೂ ಧರಣಿ ನಿಲ್ಲಿಸುವುದಿಲ್ಲ ಎಂದು ಕಚೇರಿ ಬಾಗಿಲಲ್ಲೇ ಕುಳಿತರು.

ಈ ವೇಳೆ ಮಾತನಾಡಿದ ರೈತ ವೀರಭದ್ರೇಗೌಡ, ತಾಲೂಕಿನಲ್ಲಿ ಜಮೀನು ಖರೀದಿ, ಮಾರಾಟ ಪಾಲು ವಿಭಾಗ, ಪವತಿ ವಿರಾಸತ್‌, ಪಹಣಿ ತಿದ್ದುಪಡಿ, ಸೇರಿ ವಿವಿಧ ಕಾರ್ಯಗಳಿಗಾಗಿ ಸಲ್ಲಿಸಿದ ಅರ್ಜಿಗಳ ವಿಲೇವಾರಿ ಕಾರ್ಯ ಕಳೆದ ಮೂರು ತಿಂಗಳಿನಿಂದ ವಿಳಂಬವಾಗುತ್ತಿದೆ. ಕೇಳಿದರೆ ಕಂಪ್ಯೂಟರ್‌ ತಂತ್ರಾಂಶ ಬದಲಾವಣೆ ಮಾಡುತ್ತಿದ್ದೇವೆ.
ನಾಳೆ ಬನ್ನಿ, ನಾಡಿದ್ದು ಬನ್ನಿ ಎಂದು ಅಲೆದಾಡಿಸುತ್ತಿದ್ದಾರೆ. ಹೀಗಾಗಿ ಕೋರ್ಟು, ಕಚೇರಿಗಳಿಗೆ ದಾಖಲೆ ನೀಡಲಾಗುತ್ತಿಲ್ಲ ಎಂದು ದೂರಿದರು.

“ಕಚೇರಿಗೆ ಬರುವ ಸಾರ್ವಜನಿಕರಿಗೆ ಇಲ್ಲಿನ ಸಿಬ್ಬಂದಿ, ಅಧಿಕಾರಿಗಳು ಸರಿಯಾಗಿ ಮಾಹಿತಿ ನೀಡುವುದಿಲ್ಲ. ನಮ್ಮ ಸಮಸ್ಯೆಗಳ ಬಗ್ಗೆ ಯಾರ ಬಳಿ ಹೇಳಿಕೊಳ್ಳಬೇಕು ಎಂದೇ ತಿಳಿಯುವುದಿಲ್ಲ. ತಹಶೀಲ್ದಾರ್‌ಗೆ ಹೇಳ್ಳೋಣವೆಂದು ಹೋದರೆ ಅವರು ಕಚೇರಿಯಲ್ಲಿಲ್ಲ ಎಂದು ಹೇಳುತ್ತಾರೆ.

ರೆಕಾರ್ಡ್‌ ವಿಭಾಗಕ್ಕೆ ಅರ್ಜಿ ಸಲ್ಲಿಸಿ ತಿಂಗಳುಗಳು ಕಳೆದರೂ ದಾಖಲೆ ನೀಡುವುದಿಲ್ಲ. ಈ ಬಗ್ಗೆ ಅಧಿಕಾರಿಗಳು ಕೂಡಲೇ ಕ್ರಮ ತೆಗೆದುಕೊಳ್ಳ ಬೇಕು,’ ಎಂದು ಅರ್ಜಿದಾರ ನಾಗೇಂದ್ರಪ್ಪ ಎಂಬುವವರು ದೂರಿದರು.

ಸ್ಥಳಕ್ಕೆ ಬಂದ ವಿಶೇಷ ತಹಸೀಲ್ದಾರ್‌ ಅನಿಲ್‌, “17 ವರ್ಷಗಳ ನಂತರ ಕಂದಾಯ ಇಲಾಖೆಯಲ್ಲಿ ತಂತ್ರಾಂಶ ಬದಲಾವಣೆ ನಡೆಯುತ್ತಿದ್ದು, ಇದರಿಂದ ತೊಂದರೆಯಾಗಿದೆ. ಬಹುತೇಕ ಕಾರ್ಯಮುಗಿದಿದ್ದು, ಎರಡು ದಿನ ಕಾಲಾವಕಾಶ ನೀಡಿ,’ ಎಂದರು. ರೈತರು ಪ್ರತಿಭಟನೆ ಹಿಂಪಡೆದು ಕಚೇರಿ ಕೆಲಸಗಳಿಗೆ ಅನುವು ಮಾಡಿಕೊಟ್ಟರು. 

ಟಾಪ್ ನ್ಯೂಸ್

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.