ನಟರಾಜ್ ಹತ್ಯೆ ಹಿಂದೆಪೆಟ್ಟಿಕೋಟ್ ಕೈವಾಡ
Team Udayavani, Jan 18, 2018, 12:38 PM IST
ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯ ನಟರಾಜ್ ಹತ್ಯೆ ಹಿಂದೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಅಕ್ರಮ ಪಾಲುದಾರ ಪೆಟ್ಟಿಕೋಟ್ ಚಂದ್ರಪ್ಪ ಅವರ ಕುಮ್ಮಕ್ಕಿದೆ ಎಂದು ಬಿಜೆಪಿ ನಗರ ವಕ್ತಾರ ಎನ್.ಆರ್. ರಮೇಶ್ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿರುವ ಕೆಜಿ ರಸ್ತೆಯಲ್ಲಿರುವ ಗುಪ್ತಾ ಮಾರ್ಕೆಟ್ನ ಪೆಟ್ಟಿಕೋಟ್ ಚಂದ್ರಪ್ಪನ ಜತೆ ದಿನೇಶ್ ಗುಂಡೂರಾವ್ ಅಕ್ರಮವಾಗಿ ವಾಣಿಜ್ಯ ಕಟ್ಟಡ ನಿರ್ಮಿಸುತ್ತಿರುವುದನ್ನು ಎಸ್. ನಟರಾಜ್ ಪಾಲಿಕೆ ಸಭೆಯಲ್ಲಿ ಪ್ರಸ್ತಾಪಿಸಿದ್ದರು.
ಈ ಹಿನ್ನೆಲೆಯಲ್ಲಿ ಪೆಟ್ಟಿಕೋಟ್ ಚಂದ್ರಪ್ಪ, ನಟರಾಜ್ ಮೇಲೆ ದ್ವೇಷ ಸಾಧಿಸುತ್ತಿದ್ದರು. ಹೀಗಾಗಿ 2011ರ ಅ.1ರಂದು ಮಲ್ಲೇಶ್ವರದ ಸಂಪಿಗೆ ರಸ್ತೆಯಲ್ಲಿ ನಟರಾಜ್ ಕೊಲೆ ಮಾಡಲಾಗಿತ್ತು ಎಂದು ರಮೇಶ್ ಆರೋಪಿಸಿದ್ದಾರೆ. ನಟರಾಜ್ ಹತ್ಯೆ ಆರೋಪದಲ್ಲಿ 11 ಜನರನ್ನು ಬಂಧಿಸಲಾಗಿತ್ತು. ಈ ಕೊಲೆಯ ಸತ್ಯ ಹೊರ ಬರಲು ಪಾಲ್, ಮುರುಗನ್, ಮಣಿ, ಅಶೋಕ್ ಬಿ. ದಾನಿ, ಪೆಟ್ಟಿಕೋಟ್ ಚಂದ್ರಪ್ಪ ಮತ್ತು ವೈಯಾಲಿ ಕಾವಲ್ ಶಾಂತಿ ಎನ್ನುವವರನ್ನು ಮಂಪರು ಪರೀಕ್ಷೆಗೆ ಒಳ ಪಡಿಸಬೇಕೆಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್