ಭಾನುವಾರ ಜನಸಾಗರ
Team Udayavani, Jan 22, 2018, 11:54 AM IST
ಬೆಂಗಳೂರು: ಸಸ್ಯಕಾಶಿ ಲಾಲ್ಬಾಗ್ನಲ್ಲಿ ನಡೆಯುತ್ತಿರುವ 207ನೇ ಫಲಪುಷ್ಟ ಪ್ರದರ್ಶನಕ್ಕೆ ಭಾನುವಾರ ಜನಸಾಗರ ಹರಿದು ಬಂದಿದ್ದು, ಒಂದೇ ದಿನ 50 ಸಾವಿರಕ್ಕೂ ಹೆಚ್ಚು ಜನರು ಭೇಟಿ ನೀಡಿ ಫಲಪುಷ್ಪ ಪ್ರದರ್ಶವನ್ನು ಕಣ್ತುಂಬಿಕೊಂಡಿದ್ದಾರೆ.
ಶುಕ್ರವಾರ ಆರಂಭವಾದ ಫಲಪುಷ್ಪ ಪ್ರದರ್ಶನಕ್ಕೆ ವಾರಾಂತ್ಯದಲ್ಲಿ ಉತ್ತಮ ಸ್ಪಂದನೆ ಸಿಕ್ಕಿದ್ದು, ಲಾಲ್ಬಾಗ್ ಜನರಿಂದ ಕಿಕ್ಕಿರಿದಿತ್ತು. ಪ್ರದರ್ಶನಕ್ಕೆ ಮಹಿಳೆಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿದ್ದ ವಿಶೇಷವಾಗಿತ್ತು.
ಗಾಜಿನಮನೆಗೆ ಹೋಗುವ ಎರಡೂ ಇಕ್ಕೆಲಗಳಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕೆತ್ತನೆ ಶಿಬಿರ ಆಕರ್ಷಣೀಯ ತಾಣವಾಗಿ ಮಾರ್ಪಟ್ಟಿದ್ದು, ಪ್ರದರ್ಶನಕ್ಕೆ ಬಂದವರು ಹತ್ತಾರು ನಿಮಿಷ ಮರಕ್ಕೆ ಕಲಾಕೃತಿಯ ರೂಪ ನೀಡುತ್ತಿರುವ ಕಾರ್ಯವನ್ನು ನೋಡುತ್ತಾ ನಿಂತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಕೆತ್ತನೆ ಶಿಬಿರದಲ್ಲಿ ಮುಂಬೈ, ಬರೋಡ, ಶಾಂತಿಕೇತನ, ಹೈದರಾಬಾದ್ ಸೇರಿ ಸುಮಾರು 60ಕ್ಕೂ ಹೆಚ್ಚು ಕಲಾವಿದರು ಭಾಗವಹಿಸಿದ್ದು, ಹಲವಾರು ಅಪರೂಪ ಕಲಾಕೃತಿಗಳ ಕೆತ್ತನೆಯಲ್ಲಿ ತೊಡಗಿದ್ದರು. ಲಾಲ್ಬಾಗ್ನಲ್ಲಿ ಮಳೆ-ಗಾಳಿಗೆ ಧರೆಗುರುಳಿರುವ ಸುಮಾರ 250 ವರ್ಷಗಳ ಹಳೆಯ ಮರಗಳನ್ನು ಸುಂದರ ಕಲಾಕೃತಿಗಳನ್ನಾಗಿಸುವ ಕಾರ್ಯದಲ್ಲಿ ಕಲಾವಿದರು ತೊಡಗಿದ್ದಾರೆ.
ಅದರಂತೆ ಮರಗಳಲ್ಲಿ ಗರುಡ, ಮೊಸಳೆ, ಪರಿವಾಳ, ಶ್ವಾನ, ಆನೆ ಹಾಗೂ ಧ್ಯಾನಮಗ್ನವಾಗಿರುವ ಗೌತಮ ಬುದ್ಧನ ಕಲಾಕೃತಿಗಳು ಮೂಡಿಸುತ್ತಿದ್ದ ದೃಶ್ಯ ನೋಡಲು ಪ್ರವಾಸಿಗರು ಮುಗಿಬಿದ್ದರು.
ಮಲ್ಲಿಕಾರ್ಜುನ ಖರ್ಗೆ ಭೇಟಿ: ಸಸ್ಯಕಾಶಿಗೆ ಭಾನುವಾರ ಅಚ್ಚರಿಯ ಅತಿಥಿಯಾಗಿ ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿ, ಬಾಹುಬಲಿ ಕೇಂದ್ರಿತವಾದ ಫಲಪುಷ್ಪ ಪ್ರದರ್ಶನ ಕಂಡು ಸಂತಸ ವ್ಯಕ್ತಪಡಿಸಿದರು.
ಜತೆಗೆ ಉದ್ಯಾನದ ಪ್ರತಿಯೊಂದು ಸ್ಥಳಕ್ಕೂ ಭೇಟಿ ಅಲ್ಲಿ ಅಳವಡಿಸಲಾಗಿದ್ದ ಹೂವುಗಳ ವಿಶೇಷತೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ತ್ಯಾಗಮೂರ್ತಿ ಬಾಹುಬಲಿಯನ್ನು ಕೇಂದ್ರವಾಗಿಸಿಕೊಂಡು ಫಲಪುಷ್ಪ ಪ್ರದರ್ಶನ ಏರ್ಪಡಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಅವರು, ಫಲಪುಷ್ಪ ಪ್ರದರ್ಶನ ಸುಂದರವಾಗಿ ಮೂಡಿಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಮಾದರಿಯ ಸಣ್ಣ ಸಣ್ಣ ಫಲಪುಷ್ಪ ಪ್ರದರ್ಶನಗಳನ್ನು ರಾಜ್ಯದ ಎಲ್ಲ ಕಡೆಗಳಲ್ಲಿ ಆಯೋಜಿಸಿದರೆ ಗ್ರಾಮೀಣ ಭಾಗದ ಜನರಿಗೂ ಪ್ರದರ್ಶನ ಕುರಿತು ಮಾಹಿತಿ ದೊರೆಯುತ್ತದೆ. ಆ ಮೂಲಕ ಯಾವ ರೀತಿಯ ತೋಟಗಾರಿಕಾ ಬೆಳೆಗಳು ಹಾಗೂ ಸುಲಭ ವಿಧಾನಗಳ ಮೂಲಕ ತೋಟಗಾರಿಕೆಯ ಮಾಡುವ ಕುರಿತು ಅವರಿಗೆ ಮಾಹಿತಿ ಲಭ್ಯವಾಗುತ್ತದೆ ಎಂದು ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ