ಮೀನುಗಳ ಜತೆ ಗಾಂಜಾತರಿಸಿ ಮಾರುತ್ತಿದ್ದವರ ಸೆರೆ
Team Udayavani, Feb 15, 2018, 12:13 PM IST
ಬೆಂಗಳೂರು: ಒಡಿಶಾದಿಂದ ನಗರಕ್ಕೆ ಥರ್ಮಕೋಲ್ ಬಾಕ್ಸ್ನಲ್ಲಿ ಒಣ ಮೀನುಗಳ ಜತೆ ಗಾಂಜಾ ತರಿಸಿ ಮಾರಾಟ
ಮಾಡುತ್ತಿದ್ದ ಮೂವರನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಮೂಲದ ಗೋವಿಂದರಾಜು (29), ರಾಮನಗರದ ಬಸವರಾಜ್ (28), ಚಾಮರಾಜನಗರದ ಮಹೇಂದ್ರ (22) ಬಂಧಿತರು. ಆರೋಪಿಗಳಿಂದ 75 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಹತ್ತು ವರ್ಷಗಳ ಹಿಂದೆ ನಗರಕ್ಕೆ ಬಂದಿರುವ ಆರೋಪಿಗಳು, ಪೇಟಿಂಗ್ ಕೆಲಸ ಮಾಡುತ್ತಿದ್ದರು. ಬಳಿಕ ಹೆಚ್ಚಿನ ಹಣ ಸಂಪಾದಿಸಲು ಈ ದಂಧೆಗೆ ಇಳಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರು ಕೂಡ ಮಾದಕ ವಸ್ತು ವ್ಯಸನಿಗಳಾಗಿದ್ದು, ಈ ಮೊದಲು ನವೀನ್ ಎಂಬಾತನ ಮೂಲಕ ಗಾಂಜಾ ಖರೀದಿಸಿ ಸೇವಿಸುತ್ತಿದ್ದರು. ಆಗಾಗ್ಗ ಆರೋಪಿಗಳನ್ನು ಭೇಟಿಯಾಗುತ್ತಿದ್ದ ನವೀನ್, ಹೆಚ್ಚಿನ ಹಣ ಗಳಿಸಲು ದಂಧೆಗೆ ಇಳಿಯುವಂತೆ ಪ್ರೇರೆಪಿಸಿ, ತಾನು ದಂಧೆಯಿಂದ ದೂರವಾಗಿದ್ದ. ಆದರೆ, ಇದೇ ವೇಳೆ ಒಡಿಶಾ ಮೂಲದ ಗಾಂಜಾ ಮಾರಾಟಗಾರ ಸಂಪತ್ರಾಜ್ ಎಂಬಾತನನ್ನು ಆರೋಪಿಗಳಿಗೆ ಪರಿಚಯಸಿಕೊಟ್ಟಿದ್ದ. ಸಂಪತ್ರಾಜ್, ಬಂಧಿತರಿಗೆ ತನ್ನೊಂದಿಗೆ ಸೇರಿದರೆ ಲಕ್ಷಾಂತರ ರೂ. ಹಣ ನೀಡುವುದಾಗಿ
ಆಮಿಷವೊಡ್ಡಿದ್ದ. ಅಷ್ಟೇ ಅಲ್ಲದೆ, ಒಂದು ಲಕ್ಷ ರೂ. ಮುಂಗಡ ಹಣ ನೀಡಿ ಮೂವರಿಗೂ ಕೋಣನಕುಂಟೆಯಲ್ಲಿ ಬಾಡಿಗೆ ಮನೆ ಕೊಡಿಸಿದ್ದ. ಜತೆಗೆ ಪ್ರತಿ ತಿಂಗಳು ಬಾಡಿಗೆ ಸಹ ಆತನೇ ಪಾವತಿಸುತ್ತಿದ್ದು, ಮಾಸಿಕ ಸಂಬಳ ನಿಗದಿ ಮಾಡಿದ್ದ. ಇವರ ಮೂಲಕ ತನ್ನ ಗ್ರಾಹಕರಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಎಂದು ಡಿಸಿಪಿ ಬೋರಲಿಂಗಯ್ಯ ಹೇಳಿದರು.
ಒಣ ಮೀನಿನಲ್ಲಿ ಗಾಂಜಾ!: ಸಂಪತ್ರಾಜ್ ಒಡಿಶಾದಿಂದಲೇ ಬಸ್ ಹಾಗೂ ಟ್ರಕ್ಗಳಲ್ಲಿ ಥರ್ಮಕೋಲ್ ಬಾಕ್ಸ್ಗಳಲ್ಲಿ ಒಣ ಮೀನು ಇಟ್ಟು ಅದರೊಳಗೆ ಕೆ.ಜಿಗಟ್ಟಲ್ಲೇ ಗಾಂಜಾ ಇಟ್ಟು, ಒಡಿಶಾದಿಂದ ವಿಶಾಖಾಪಟ್ಟಣಂ, ಡೆಂಕಣಿಕೋಟೆ ಮೂಲಕ ನಗರಕ್ಕೆ ಆಗಮಿಸುವ ಬಸ್ಗಳ ಮೂಲಕ ಕಳುಹಿಸುತ್ತಿದ್ದ. ಇದನ್ನು ಆರೋಪಿಗಳು ತಮ್ಮ ಬಾಡಿಗೆ ಮನೆಯಲ್ಲಿ ಸಂಗ್ರಹಿಸಿಟ್ಟು, ಬಿಸಿನಲ್ಲಿ ಒಣಗಿಸುತ್ತಿದ್ದರು. ಗಾಂಜಾ ವಾಸನೆಯಿಂದ ಅನುಮಾನಗೊಂಡ ಪ್ರಶ್ನಿಸಿದ ಸ್ಥಳೀಯರಿಗೆ ಮೀನಿನ ವಾಸನೆ ಎಂದು ನಂಬಿಸುತ್ತಿದ್ದರು. ಬಳಿಕ ಹೋಟೆಲ್
ನಲ್ಲಿ ಚಪಾತಿಗಳನ್ನು ಪ್ಯಾಕ್ ಮಾಡುವ ರೀತಿಯಲ್ಲಿ ಗಾಂಜಾವನ್ನು ರೋಲ್ ಮಾಡಿ ಪ್ಯಾಕ್ ಮಾಡುತ್ತಿದ್ದರು. ಒಂದು ರೋಲ್ ಅನ್ನು 200-500 ರೂಪಾಯಿಗೆ ಸಾಫ್ಟ್ ವೇರ್ ಎಂಜಿಯರ್, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್