ಪದವೀಧರರಿಗೆ ಕೌಶಲ್ಯ ಅಗತ್ಯ


Team Udayavani, Feb 20, 2018, 11:45 AM IST

padavi.jpg

ಬೆಂಗಳೂರು: ಕೈಗಾರಿಕೆ ಮತ್ತು ಶಿಕ್ಷಣ ಸಂಸ್ಥೆಗಳ ನಡುವೆ ಸೃಷ್ಟಿಯಾಗಿರುವ ದೊಡ್ಡ ಕಂದಕದಿಂದಾಗಿ ಶೇ.80 ರಷ್ಟು ಪದವೀಧರರು ಉದ್ಯೋಗ ಪಡೆದುಕೊಳ್ಳಲು ವಿಫ‌ಲರಾಗುತ್ತಿದ್ದಾರೆ ಎಂದು ತಾಂತ್ರಿಕ ಶಿಕ್ಷಣ ನಿರ್ದೇಶಕ ಎಚ್‌.ಯು ತಳವಾರ್‌ ಕಳವಳ ವ್ಯಕ್ತಪಡಿಸಿದರು.

ಸೋಮವಾರ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಯೋಗಾರ್ಹತೆಯ ಬಲವರ್ಧನೆ ಸಂಬಂಧಿಸಿದಂತೆ ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ಹೈರ್‌ಮಿ ಸಂಸ್ಥೆಯ ನಡುವೆ ಒಡಬಂಡಿಕೆ ಮಾಡಿಕೊಂಡ ನಂತರ ಮಾತನಾಡಿದರು.

ಎಂಜಿನಿಯರಿಂಗ್‌ ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪೂರೈಸಿದ ಪದವೀಧರರಲ್ಲಿ ಶೇ.20ರಷ್ಟು ಮಂದಿಗೆ ಮಾತ್ರ ಉದ್ಯೋಗ ದೊರೆಯುತ್ತಿದೆ. ಉಳಿದ ಶೇ.80ರಷ್ಟು ಅಭ್ಯರ್ಥಿಗಳು ಉದ್ಯೋಗ ಪಡೆಯಲು ಸಾಕಷ್ಟು ಒದ್ದಾಡುತ್ತಿರುತ್ತಾರೆ.

ಇಂತಹ ಅಭ್ಯರ್ಥಿಗಳ ಮೇಲೆ ಸರ್ಕಾರ ಹಾಗೂ ಖಾಸಗಿ ವಲಯ ವಿಶೇಷ ಗಮನ ನೀಡುವ ಅಗತ್ಯವಿದೆ ಎಂದರು. ಕೈಗಾರಿಕೆಗಳು ಮತ್ತು ಶಿಕ್ಷಣ ಸಂಸ್ಥೆಗಳು ಜತೆಯಾಗಿ ತಾಂತ್ರಿಕ ಶಿಕ್ಷಣ ಪಠ್ಯಕ್ರಮ ಸಿದ್ಧಪಡಿಸುವ ಮೂಲಕ ತಾಂತ್ರಿಕ ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗ ಕೌಶಲ್ಯಕ್ಕೆ ವೇದಿಕೆ ಸೃಷ್ಟಿಸಬೇಕು ಎಂದು ಅಭಿಪ್ರಾಯಪಟ್ಟರು.

ರಾಜ್ಯದ ಎಂಜಿನಿಯರಿಂಗ್‌ ಹಾಗೂ ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಉದ್ಯೋಗ ಮಾಹಿತಿ ಕೋಶದ ಉನ್ನತೀಕರಿಸಲಾಗಿದೆ. ಎಲ್ಲಾ ಕಾಲೇಜುಗಳಲ್ಲಿ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಇದರ ಮಾಹಿತಿಯನ್ನು ಸಮರ್ಪಕವಾಗಿ ನೀಡುವ ಕೆಲಸ ಮಾಡಬೇಕು. ಪದವಿ ಮತ್ತು ಸ್ನಾತಕೋತ್ತರ ಪದವಿ ಬಳಿಕ ಲಭ್ಯವಿರುವ ಉದ್ಯೋಗವಕಾಶದ ಮಾಹಿತಿ ಈ ಕೇಂದ್ರದಿಂದಲೇ ಲಭ್ಯವಾಗಲಿದೆ ಎಂದು ಹೇಳಿದರು.

ಹೈರ್‌ಮಿ ಸಂಸ್ಥಾಪಕ ಚೊಕ್ಕಲಿಂಗಂ ವಲ್ಲಿಯಪ್ಪಮಾತನಾಡಿ, ಕಾಲೇಜುಗಳಲ್ಲಿ ನಡೆಯುವ ಕ್ಯಾಂಪಸ್‌ ಸಂದರ್ಶನಲ್ಲಿ 10ರಲ್ಲಿ ಒಬ್ಬ ವಿದ್ಯಾರ್ಥಿಗೆ ಉದ್ಯೋಗ ದೊರೆತರೆ, ಕ್ಯಾಂಪಸ್‌ ಹೊರಗೆ ನಡೆಯುವ ಸಂದರ್ಶನಗಳಲ್ಲಿ 5 ಸಾವಿರಕ್ಕೆ ಒಬ್ಬ ವಿದ್ಯಾರ್ಥಿ ಉದ್ಯೋಗ ಪಡೆಯುತ್ತಿದ್ದಾನೆ.

ಅಭ್ಯರ್ಥಿಯೊಬ್ಬ ಉದ್ಯೋಗ ಪಡೆಯಲು ಕನಿಷ್ಠ 25 ರಿಂದ 30 ಕಂಪನಿಗಳ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕಾದ ಸ್ಥಿತಿ ಇದೆ. ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ 1 ಲಕ್ಷಕ್ಕೂ ಹೆಚ್ಚು ಪಾಲಿಟೆಕ್ನಿಕ್‌ ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡಲಿದ್ದೇವೆ.

ಇದಕ್ಕಾಗಿ 1 ಸಾವಿರ ಜನರ ತಂಡ ಸಿದ್ಧಗೊಂಡಿದೆ ಎಂದು ಮಾಹಿತಿ ನೀಡಿದರು. ಟೊಯೊಟೊ ಸಂಸ್ಥೆಯ ಉಪ ವ್ಯವಸ್ಥಾಪಕ ಪರಶುರಾಮನ್‌, ಎಫ್ಕೆಸಿಸಿಐ ಅಧ್ಯಕ್ಷ ಕೆ. ರಘು, ತಾಂತ್ರಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಭೋಜೆದರ್‌ ಮೊದಲಾದವರು ಇದ್ದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.