ಮಾಧ್ಯಮದವರ ಮೇಲೆ ಹಲ್ಲೆ: ದೂರು
Team Udayavani, Feb 20, 2018, 11:45 AM IST
ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಹಲ್ಲೆ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಕಬ್ಬನ್ ಪಾರ್ಕ್ ಠಾಣೆಗೆ ಶರಣಾಗಿದ್ದ ಸುದ್ದಿ ಪ್ರಸಾರ ಮಾಡಲು ತೆರಳಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ಶಾಸಕ ಹ್ಯಾರಿಸ್ ಪುತ್ರ ಮೊಹ್ಮದ್ನ ನೂರಾರು ಬೆಂಬಲಿಗರು ಹಲ್ಲೆ ನಡೆಸಿದ್ದಾರೆಂದು ದೂರು ನೀಡಲಾಗಿದೆ.
ಛಾಯಾಗ್ರಾಹಕ ಅಕ್ರಮ್ ಮತ್ತು ಮೂರು ದೃಶ್ಯ ಮಾಧ್ಯಮ ಪ್ರತಿನಿಧಿಗಳ ಮೇಲೆ ಪೊಲೀಸ್ ಠಾಣೆ ಆವರಣದಲ್ಲೇ ಹಲ್ಲೆ ನಡೆಸಿದ್ದಾರೆ. ಆರೋಪಿಗಳನ್ನು ಪೊಲೀಸರು ಕರೆದೊಯ್ಯುತ್ತಿದ್ದಂತೆ ಮೊಹಮ್ಮದ್ ಬೆಂಬಲಿಗರು ಖಾಸಗಿ ಸುದ್ದಿ ವಾಹಿನಿ ವರದಿಗಾರ ಕಾರ್ತಿಕ್, ಕ್ಯಾಮರಾಮ್ಯಾನ್ ಗಣೇಶ್ ಮತ್ತು ಛಾಯಾಗ್ರಾಹಕ ಅಕ್ರಮ್ ಮೇಲೆ ಹಲ್ಲೆ ನಡೆಸಿದರು.
ಬಳಿಕ ಠಾಣೆಯಿಂದ ಕಬ್ಬನ್ ಪಾರ್ಕ್ವರೆಗೆ ಎಳೆದೊಯ್ದು ಗೂಂಡಾಗಳು ಬಾಲ ಭವನ ಮುಂಭಾಗ ಮತ್ತೆ ಹಲ್ಲೆ ನಡೆಸಿದರು. ಈ ಸಂದರ್ಭ ಒಬ್ಬ ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಲಾಯಿತು. ಘಟನೆ ಸಂಬಂಧ ಖಾಸಗಿ ಸುದ್ದಿ ವಾಹಿನಿ ವರದಿಗಾರ ಕಾರ್ತಿಕ್ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ