ಮೀಸಲಿಗೆ ಸ್ತ್ರೀಯರು ಫ‌ುಲ್‌ಖುಷ್‌


Team Udayavani, Feb 20, 2018, 11:45 AM IST

meesalu-metro.jpg

ಬೆಂಗಳೂರು: “ನಮ್ಮ ಮೆಟ್ರೋ’ ಪ್ರಯಾಣ ಸೋಮವಾರ ಎಂದಿನಂತಿರಲಿಲ್ಲ. ಮಹಿಳೆಯರು ಪುರುಷರೊಂದಿಗೆ ನೂಕು ನುಗ್ಗಲಿನಲ್ಲಿ ನುಸುಳುವ ಅನಿವಾರ್ಯತೆ ಇರಲಿಲ್ಲ. ತಮಗಾಗಿ ಪ್ರತ್ಯೇಕ ಸರದಿ ಇತ್ತು ಹಾಗೂ ತಮ್ಮೊಂದಿಗೆ ಇರುವವರೆಲ್ಲಾ ಮಹಿಳೆಯರು ಎಂಬ ಸಮಾಧಾನ ಇತ್ತು. ಇದೆಲ್ಲದರಿಂದ ಪ್ರಯಾಣ ಕೂಡ ನಿರಾತಂಕವಾಗಿತ್ತು. 

ಇದು ಮೆಟ್ರೋ ರೈಲಿನಲ್ಲಿ ಮಹಿಳೆಯರಿಗಾಗಿಯೇ ಪ್ರತ್ಯೇಕ ಪ್ರವೇಶ ಮತ್ತು ನಿರ್ಗಮನಕ್ಕೆ ಅವಕಾಶ ಕಲ್ಪಿಸಿದ ಮೊದಲ ದಿನ ಕಂಡುಬಂದ ಮಹಿಳೆಯರ ಸಂತಸ. ಬೆಳಗ್ಗೆ 9ರ ಸುಮಾರಿಗೆ ನಿಲ್ದಾಣ ಪ್ರವೇಶಿಸಿದ ಮಹಿಳಾ ಪ್ರಯಾಣಿಕರಿಗೆ ಅಚ್ಚರಿ ಕಾದಿತ್ತು. ಪ್ಲಾಟ್‌ ಫಾರಂನ ಮೊದಲ ತುದಿಯಲ್ಲಿ “ಮಹಿಳೆಯರಿಗೆ ಮಾತ್ರ ಪ್ರವೇಶ’ ಎಂಬ ಫ‌ಲಕ ಇತ್ತು.

ಹೀಗೆ ತಮಗಾಗಿ ಮೀಸಲಿಟ್ಟ ದ್ವಾರಗಳ ಕಡೆಗೆ ದಾರಿ ತೋರಿಸುವ ಮಹಿಳಾ ಸಿಬ್ಬಂದಿ ಇದ್ದರು. ಬೋಗಿಯ ಒಳಗಡೆ “ಮೊದಲೆರಡು ದ್ವಾರಗಳು ಮಹಿಳೆಯರಿಗೆ ಮೀಸಲು’ ಎಂದು ಮುದ್ರಿತ ದನಿ ಕೇಳಿಬರುತ್ತಿತ್ತು. ಹಾಗಾಗಿ, ನೂಕುನುಗ್ಗಲಿನ ನಡುವೆಯೂ ಪ್ರಯಾಣ ತುಸು ನಿಟ್ಟುಸಿರು ಬಿಡುವಂತಿತ್ತು. ಈ ಚಿತ್ರಣ ಕಂಡ ಯುವತಿಯರು ಕೇಕೆ ಹಾಕಿ ಖುಷಿಯಿಂದ ಮೆಟ್ರೋ ಏರಿದರು.

ಕೆಲವರು ಉತ್ತಮ ಕ್ರಮ ಎಂದು ಬಿಎಂಆರ್‌ಸಿ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಇನ್ನು ಹಲವರು ಇಡೀ ಬೋಗಿಯನ್ನು ಮಹಿಳೆಯರಿಗೇ ಮೀಸಲಿಟ್ಟರೆ ಇನ್ನೂ ಚೆಂದ ಎಂದು ಹೇಳಿಕೊಂಡರು. ಇದಕ್ಕೆ ಪುರುಷ ಪ್ರಯಾಣಿಕರೂ ದನಿಗೂಡಿಸಿದರು. ಈ ಮೂಲಕ “ಪೀಕ್‌ ಅವರ್‌’ನಲ್ಲಿ ಎರಡು ಪ್ರವೇಶ ದ್ವಾರಗಳನ್ನು ಮಹಿಳೆಯರಿಗೆ ಮೀಸಲಿಟ್ಟ ಬಿಎಂಆರ್‌ಸಿ ಕ್ರಮಕ್ಕೆ ಅತ್ಯುತ್ತಮ ಸ್ಪಂದನೆ ದೊರೆಯಿತು.

ಮಹಿಳೆಯರಿಂದ ತುಂಬಿತುಳುಕಿದ ಬೋಗಿ: ಪ್ರವೇಶ ದ್ವಾರಗಳು ಮಾತ್ರ ಮಹಿಳೆಯರಿಗೆ ಮೀಸಲಿದ್ದು, ಒಳಗಡೆ ಎಲ್ಲ ಬೋಗಿಗಳಲ್ಲೂ ಪುರುಷರು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಬಹುತೇಕ ಮೆಟ್ರೋ ರೈಲುಗಳ ಮೊದಲ ಬೋಗಿಗಳು ಮಹಿಳೆಯರಿಂದಲೇ ತುಂಬಿತುಳುಕುತ್ತಿದ್ದವು. ಪುರಷರು ಇದಕ್ಕೆ ಸ್ಪಂದಿಸಿದರು.

ಈ ಮಧ್ಯೆ ಮೊದಲೆರಡು ಮಾತ್ರ ಮಹಿಳೆಯರಿಗೆ ಎಂಬ ತಪ್ಪು ಕಲ್ಪನೆಯಿಂದ ರೈಲು ತಪ್ಪಿಸಿಕೊಂಡವರೂ ಕಂಡುಬಂದರು. ಈ ನೂಕುನುಗ್ಗಲಿನಿಂದ ತಪ್ಪಿಸಿಕೊಂಡು ಎರಡು-ಮೂರನೇ ಬೋಗಿಗಳಿಗೆ ಏರಲು ಮುಂದಾಗಿ ಗಲಿಬಿಲಿಗೊಂಡವರೂ ಇದ್ದರು. 

ಪ್ರತ್ಯೇಕ ಬೋಗಿ ಮೀಸಲಿಡಬೇಕು: ಈ ಸಂದರ್ಭದಲ್ಲಿ “ಉದಯವಾಣಿ’ಯೊಂದಿಗೆ ಮಾತಿಗಿಳಿದ ಅವನಿ, “ಮೊದಲೆರಡು ದ್ವಾರಗಳನ್ನು ಮಹಿಳೆಯರಿಗೆ ಮೀಸಲಿಟ್ಟಿರುವುದು ಸ್ವಾಗತಾರ್ಹ. ಆದರೆ, ಇಡೀ ಬೋಗಿಯನ್ನು ಮೀಸಲಿಟ್ಟರೆ ತುಂಬಾ ಅನುಕೂಲ ಆಗುತ್ತದೆ. ನಿರಾತಂಕವಾಗಿ ಪ್ರಯಾಣಿಸಬಹುದು’ ಎಂದು ಅಭಿಪ್ರಾಯಪಟ್ಟರು. 

ಮತ್ತೂಬ್ಬ ಪ್ರಯಾಣಿಕರಾದ ಉಷಾ, “ಕೊನೆಯ ಬೋಗಿಯ ಒಂದು ದ್ವಾರವನ್ನೂ ಮಹಿಳೆಯರಿಗೆ ಮೀಸಲಿಡಬೇಕು. ಇದರಿಂದ ಮೆಜೆಸ್ಟಿಕ್‌ನಂತಹ ನಿಲ್ದಾಣಗಳಲ್ಲಿ ಎಸ್ಕಲೇಟರ್‌ ಮತ್ತು ಲಿಫ್ಟ್ ಏರಲು ಅನುಕೂಲ ಆಗುತ್ತದೆ. ಇಲ್ಲವಾದರೆ, ಎರಡು ಬೋಗಿಗಳನ್ನು ದಾಟಿಕೊಂಡು ಹೋಗಬೇಕಾಗುತ್ತದೆ’ ಎಂದರು. 

ಅಭಿಪ್ರಾಯ ಸಂಗ್ರಹಿಸಿದ ಎಂಡಿ: ಹೊಸ ಕ್ರಮಕ್ಕೆ ಸಂಬಂಧಿಸಿದಂತೆ ಪ್ರಯಾಣಿಕರ ಅಭಿಪ್ರಾಯ ಸಂಗ್ರಹಿಸಲು ಸ್ವತಃ ಬಿಎಂಆರ್‌ಸಿ ವ್ಯವಸ್ಥಾಪಕ ನಿರ್ದೇಶಕ ಮಹೇಂದ್ರ ಜೈನ್‌, ಎಂ.ಜಿ. ರಸ್ತೆಯಿಂದ ಮೆಜೆಸ್ಟಿಕ್‌ ನಡುವೆ ಮೆಟ್ರೋ ರೈಲಿನಲ್ಲಿ ಒಂದು ಸುತ್ತು ಪ್ರಯಾಣ ಮಾಡಿದರು. ಈ ವೇಳೆ ಮಹಿಳಾ ಪ್ರಯಾಣಿಕರೊಂದಿಗೆ ಚರ್ಚಿಸಿದ ಅವರು, ಮಹಿಳೆಯರಿಗಾಗಿಯೇ ದ್ವಾರಗಳನ್ನು ಮೀಸಲಿಟ್ಟಿರುವುದು ಹೇಗೆ ಅನಿಸುತ್ತಿದೆ?

ಪ್ರಯಾಣ ಮೊದಲಿಗಿಂತ ತೃಪ್ತಿಕರವಾಗಿದೆಯೇ? ಎಂದು ಕೇಳಿದರು. ಇದಕ್ಕೆ ಮಹಿಳೆಯೊಬ್ಬರು, “ಪ್ರವೇಶಕ್ಕೆ ಅನುಕೂಲ ಮಾಡಿಕೊಟ್ಟಿದ್ದು ಸಂತಸ. ಆದರೆ, ಆಸನಗಳನ್ನೂ ಮೀಸಲಿಟ್ಟರೆ ಉತ್ತಮ’ ಎಂದರು. ಬೆನ್ನಲ್ಲೇ “ಬೋಗಿಯನ್ನು ಮಹಿಳೆಯರಿಗೆ ಮೀಸಲಿಡಿ’ ಎಂಬ ದನಿ ಮತ್ತೋರ್ವ ಮಹಿಳೆಯಿಂದ ತೂರಿಬಂತು. ಇದಕ್ಕೆ ಪ್ರತಿಕ್ರಿಯಿಸಿದ ಮಹೇಂದ್ರ ಜೈನ್‌, “ಮೆಟ್ರೋ ಆರು ಬೋಗಿಗಳಾಗುತ್ತಿದ್ದಂತೆ ಇದಕ್ಕೆ ಅವಕಾಶ ಮಾಡಿಕೊಡಲಾಗುವುದು’ ಎಂದರು.

ಮೂರು ದ್ವಾರಗಳು ಮಹಿಳೆಗೆ?: ಪ್ರಸ್ತುತ ಎರಡು ದ್ವಾರಗಳನ್ನು ಮಹಿಳೆಯರ ಪ್ರವೇಶ-ನಿರ್ಗಮನಕ್ಕೆ ಸೀಮಿತಗೊಳಿಸಲಾಗಿದೆ. ಇನ್ನೊಂದು ವಾರದಲ್ಲಿ ಈ ವ್ಯವಸ್ಥೆಯನ್ನು ಮೂರು ದ್ವಾರಗಳಿಗೆ ವಿಸ್ತರಿಸುವ ಚಿಂತನೆ ಇದೆ ಎಂದು ಬಿಎಂಆರ್‌ಸಿ ವ್ಯವಸ್ಥಾಪಕ ನಿರ್ದೇಶಕ ಮಹೇಂದ್ರ ಜೈನ್‌ ತಿಳಿಸಿದರು.
 
ಮೆಟ್ರೋ ಪ್ರಯಾಣಿಕರೊಂದಿಗೆ ಚರ್ಚೆ ನಡೆಸಿದ ನಂತರ “ಉದಯವಾಣಿ’ಯೊಂದಿಗೆ ಮಾತನಾಡಿದ ಅವರು, “ಒಂದು ವಾರ ಪ್ರಾಯೋಗಿಕವಾಗಿ ಎರಡು ದ್ವಾರಗಳನ್ನು ಮೀಸಲಿಡಲಾಗಿದೆ. ಇದಕ್ಕೆ ಉತ್ತಮ ಸ್ಪಂದನೆ ದೊರೆತರೆ, ಮೂರು ದ್ವಾರಗಳಿಗೆ ಈ ಸೇವೆಯನ್ನು ವಿಸ್ತರಿಸುವ ಉದ್ದೇಶ ಇದೆ. ಅಷ್ಟೇ ಅಲ್ಲ, ಪೀಕ್‌ ಅವರ್‌ಗೆ ಸೀಮಿತವಾಗಿರುವ ಈ ಸೇವೆ ಪೂರ್ಣಾವಧಿಗೆ ವಿಸ್ತರಿಸಲಾಗುವುದು’ ಎಂದರು. 

ನಿತ್ಯ ಸಂಚರಿಸುವ ಒಟ್ಟಾರೆ ಮೆಟ್ರೋ ಪ್ರಯಾಣಿಕರಲ್ಲಿ ಶೇ. 35ರಿಂದ 40ರಷ್ಟು ಮಹಿಳೆಯರಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಮೊದಲು ಮಾ. 1ರಿಂದ ಜಾರಿಗೊಳಿಸಲು ನಿರ್ಧರಿಸಲಾಗಿತ್ತು. ಆದರೆ, ಪ್ರಾಯೋಗಿಕವಾಗಿ ಸೋಮವಾರದಿಂದಲೇ ಜಾರಿಗೊಳಿಸಲಾಗಿದೆ ಎಂದರು.

ಮಹಿಳೆಯರಿಗೆ ಮೀಸಲಿಟ್ಟ ದ್ವಾರಗಳಲ್ಲಿ ಪುರುಷರು ಪ್ರವೇಶಿಸಿದರೆ, ದಂಡ ವಿಧಿಸುವ ಆಲೋಚನೆ ಇಲ್ಲ. ಆದರೆ, ಈ ರೀತಿಯ ಪ್ರವೇಶ-ನಿರ್ಗಮನಗಳಿಗೆ ಅವಕಾಶ ನೀಡದಂತೆ ಭದ್ರತಾ ಸಿಬ್ಬಂದಿಗೆ ಸೂಚಿಸಲಾಗಿದೆ.
-ಮಹೇಂದ್ರ ಜೈನ್‌, ಬಿಎಂಆರ್‌ಸಿ ವ್ಯವಸ್ಥಾಪಕ ನಿರ್ದೇಶಕ 

“ಸಬ್‌ ವೇ’ ಇಂದು ಸೇವೆಗೆ ಮುಕ್ತ: ಬಿಎಂಆರ್‌ಸಿ, ಬಿಬಿಎಂಪಿ, ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಸಹಯೋಗದಲ್ಲಿ ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ಬಸ್‌ ನಿಲ್ದಾಣ ಮತ್ತು ರೈಲು ನಿಲ್ದಾಣಕ್ಕೆ ನೇರ ಸಂಪರ್ಕ ಕಲ್ಪಿಸುವ “ಸಬ್‌ ವೇ’ ಮಂಗಳವಾರ ಸೇವೆಗೆ ಮುಕ್ತಗೊಳ್ಳಲಿದೆ.

ಅಂದು ಸಂಜೆ 5.30ಕ್ಕೆ ಸಬ್‌ ವೇ ಉದ್ಘಾಟನೆಗೊಳ್ಳಲಿದ್ದು, ಸಚಿವರಾದ ಕೆ.ಜೆ. ಜಾರ್ಜ್‌, ಎಚ್‌.ಎಂ. ರೇವಣ್ಣ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ಸಂಸದ ಪಿ.ಸಿ. ಮೋಹನ್‌ ಉಪಸ್ಥಿತರಿರುವರು.

ಇದೇ ವೇಳೆ, ಆನೇಕಲ್‌ ತಾಲೂಕಿನ ವೀರಸಂಗ್ರಾಮದಲ್ಲಿರುವ ವೀರಸಂದ್ರ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಬಿಎಂಆರ್‌ಸಿ ಮತ್ತು ಕರ್ನಾಟಕ ಸರೋವರ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಹಾಗೂ ಟೈಟಾನ್‌ ಕಂಪೆನಿ ಲಿ., ನಡುವೆ ಒಡಂಬಡಿಕೆಗೆ ಪರಸ್ಪರ ಸಹಿ ಹಾಕಲಿವೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.