ಮೇಸ್ತ ಮನೆಗೆ ಶಾ ಭೇಟಿ
Team Udayavani, Feb 22, 2018, 11:30 AM IST
ಹೊನ್ನಾವರ: ಹೊನ್ನಾವರದಲ್ಲಿ ನಡೆದ ನಿಗೂಢ ಸಾವಿನ ಪ್ರಕರಣದಲ್ಲಿ ಅಮಾ ನುಷವಾಗಿ ಮೃತಪಟ್ಟ ಪರೇಶ್ ಮೇಸ್ತ
ಹತ್ಯೆ ತನಿಖೆಯನ್ನು ಸಿಬಿಐ ಸಮ ರ್ಪಕವಾಗಿ ನಿರ್ವಹಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.
ಬುಧವಾರ ಪರೇಶ್ ಮೇಸ್ತ ಮನೆಗೆ ತೆರಳಿ, ಅವರ ತಂದೆ ಕಮಲಾಕರ ಮೇಸ್ತ ಹಾಗೂ ಕುಟುಂಬದವರೊಂದಿಗೆ
ಸುಮಾರು 25 ನಿಮಿಷಗಳ ಕಾಲ ಮಾತನಾಡಿದರು.
ಜೊತೆಯಲ್ಲಿದ್ದ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರು ಅಮಿತ್ ಶಾ ಅವರಿಗೆ ಪರಿ ಸ್ಥಿತಿಯ ಬಗ್ಗೆ ಮನವರಿಕೆ
ಮಾಡಿದರು. ಎಲ್ಲ ವಿಷಯಗಳನ್ನು ಆಲಿಸಿದ ಅಮಿತ್ ಶಾ, ಈ ಬಗ್ಗೆ ಅಗತ್ಯ ಕ್ರಮ ವಹಿಸಲಿದ್ದು, ಆತಂಕಪಡುವ
ಅವಶ್ಯಕತೆ ಇಲ್ಲವೆಂದು ಪರೇಶ್ ಕುಟುಂಬಕ್ಕೆ ಧೈರ್ಯ ತುಂಬಿ ಸಾಂತ್ವನ ಹೇಳಿದರು. ಬೇಡಿಕೆಯ ಅಹವಾಲಿನ
ಕುರಿತು ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು.
ಪರೇಶ್ ಮನೆಯಿಂದ ನೇರ ಹೆಲಿಪ್ಯಾಡ್ಗೆ ಆಗಮಿಸಿದ ಅಮಿತ್ ಶಾ ಕುಮಟಾದಲ್ಲಿ ಏರ್ಪಡಿಸಿದ್ದ ನವಶಕ್ತಿ ಸಮಾವೇಶದಲ್ಲೂ ಪಾಲ್ಗೊಳ್ಳದೇ ಹೆಲಿಕಾಪ್ಟರ್ನಲ್ಲಿ ನೇರ ಹುಬ್ಬಳ್ಳಿಗೆ ತೆರಳಿದರು.
ಶಾ ಮೌನಕ್ಕೆ ನಾಯಕರ ಸ್ಪಷ್ಟನೆ: ತೀವ್ರ ಜ್ವರದಿಂದ ಬಳಲುತ್ತಿದ್ದ ಕಾರಣ ಮಾಧ್ಯಮ ಪ್ರತಿನಿಧಿಗಳ ಜತೆಯೂ
ಮಾತನಾಡಿಲ್ಲ ಎಂದು ಬಿಜೆಪಿ ನಾಯಕರು ಅಮಿತ್ ಶಾ ಮೌನಕ್ಕೆ ಸಮಜಾಯಿಷಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ