ನನ್ನ ಕವಿತೆ-ನನ್ನ ಹಾಡು ಸಾಕ್ಷ್ಯಚಿತ್ರ ಬಿಡುಗಡೆ


Team Udayavani, Feb 25, 2018, 11:49 AM IST

nanna-kavite.jpg

ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘದಿಂದ “ನನ್ನ ಕವಿತೆ- ನನ್ನ ಹಾಡು’ ಎಂಬ ಕಿರುಸಾಕ್ಷ್ಯಚಿತ್ರಗಳ ಸಂಗ್ರಹ ಬಿಡುಗಡೆಯಾಗುತ್ತಿದೆ. ನಾಲ್ಕು ದಶಕಗಳ ಇತಿಹಾಸವಿರುವ ಲೇಖಕಿಯರ ಸಂಘ ತನ್ನೊಂದಿಗೆ ಹೆಜ್ಜೆ ಹಾಕುತ್ತಿರುವ ಮೂರು ತಲೆಮಾರುಗಳ ಲೇಖಕಿಯರನ್ನು ಒಂದೆಡೆ ಸೇರಿಸಿದ್ದು, ರಾಜ್ಯ ಹಾಗೂ ಹೊರರಾಜ್ಯದಲ್ಲಿರುವ 174 ಕವಯಿತ್ರಿಯರ ಬದುಕು, ಬರಹ ಹಾಗೂ ಕಾವ್ಯಗಳು ಪುಟ್ಟ ವಿಡಿಯೊ ರೂಪದಲ್ಲಿ ದಾಖಲೀಕರಣಗೊಂಡಿವೆ. 

ಈ ಯೋಚನೆಯ ಹಿಂದಿರುವ ಪ್ರೇರಕ ಶಕ್ತಿ, ಲೇಖಕಿಯರ ಸಂಘದ ಅಧ್ಯಕ್ಷೆ ವಸುಂಧರಾ ಭೂಪತಿ ಅವರು. ಕವಯಿತ್ರಿಯರ ಮನೆಗೇ, ಅವರ ಪರಿಸರಕ್ಕೇ ಹೋಗಿ ವಿಡಿಯೋಗಳನ್ನು ದಾಖಲಿಸಿದ್ದು, ಎರಡೂವರೆ ವರ್ಷಗಳಿಂದ ಸಾಕ್ಷ್ಯಚಿತ್ರ ಚಿತ್ರೀಕರಣ ನಡೆದಿತ್ತು. ಚೆನ್ನೈ, ಮುಂಬೈ, ಹೈದರಬಾದಿನಲ್ಲಿರುವ ಕನ್ನಡಿಗರನ್ನೂ ಈ ಸಾಕ್ಷ್ಯಚಿತ್ರದಲ್ಲಿ ದಾಖಲಿಸಲಾಗಿದೆ.

ಪ್ರತಿ ಸಾಕ್ಷ್ಯಚಿತ್ರವೂ 15 ನಿಮಿಷಗಳ ಅವಧಿಯದ್ದಾಗಿದ್ದು, ಪ್ರತಿ ಕವಯಿತ್ರಿಗೆ ಐದು ಕವಿತೆಗಳನ್ನು ಓದುವ ಹಾಗೂ ಸಂಕ್ಷಿಪ್ತವಾಗಿ ತನ್ನ ಪರಿಚಯ ಮಾಡಿಕೊಡುವ ಅವಕಾಶ ನೀಡಲಾಗಿದೆ. ಲೀಲಾದೇವಿ ಆರ್‌ ಪ್ರಸಾದ್‌, ಭಾನುಮುಷ್ತಾಕ್‌, ಸಬಿತಾ ಬನ್ನಾಡಿ, ಮೀನಾಕ್ಷಿ ಬಾಳಿ, ಕವಿತಾ ರೈ, ಎಚ್‌.ಎನ್‌.ಆರತಿ, ಸುನಂದ ಪ್ರಕಾಶ ಕಡಮೆ, ಅಂಜಲಿ ಬೆಳಗಲ್‌ ಮುಂತಾದ ಕವಯತ್ರಿಯರು ಈ ಸಾಕ್ಷ್ಯಚಿತ್ರದ ಭಾಗವಾಗಿದ್ದಾರೆ.

ಸುಮಾರು 26 ಲಕ್ಷ ರೂ.ಗಳ ವೆಚ್ಚದಲ್ಲಿ ಪೂರ್ಣಗೊಂಡಿರುವ ಈ ಸಾಕ್ಷ್ಯಚಿತ್ರ ನಿರ್ಮಾಣದ ಜವಾಬ್ದಾರಿ ಹೊತ್ತವರು ಇತ್ತೀಚೆಗೆ ನಿಧನರಾದ ಡಿ.ಎಸ್‌ ಸುರೇಶ್‌ ಅವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸಿದ್ಧವಾಗಿರುವ ನನ್ನ ಕವಿತೆ- ನನ್ನ ಹಾಡು ಸಾಕ್ಷ್ಯಚಿತ್ರ  ಫೆ.25ರಂದು (ಇಂದು) ಸಂಜೆ 6 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಸಂಸ ಬಯಲು ರಂಗಮಂದಿರದಲ್ಲಿ ಬಿಡುಗಡೆಯಾಗಲಿದೆ. ಲೇಖಕಿಯರ ಸಂಘದ ವೆಬ್‌ಸೈಟ್‌ನಲ್ಲಿ ಸಾಕ್ಷ್ಯಚಿತ್ರ ಸಂಗ್ರಹ ಪ್ರಕಟವಾಗಲಿದ್ದು, ಮುಂಬರುವ ದಿನಗಳಲ್ಲಿ ಡಿವಿಡಿ ರೂಪಕ್ಕೆ ತರುವ ಯೋಚನೆಯಿದೆ ಎಂದು ಸಂಘದ ಅಧ್ಯಕ್ಷೆ ವಸುಂಧರಾ ಭೂಪತಿ ತಿಳಿಸಿದ್ದಾರೆ. 

ಬದುಕು ಮತ್ತು ಕಾವ್ಯವನ್ನು ಬೇರೆ ಬೇರೆಯಾಗಿ ನೋಡಲು ಸಾಧ್ಯವಿಲ್ಲ. ಒಂದು ಸಂಗತಿ ಮತ್ತು ಸನ್ನಿವೇಶವನ್ನು ನಗರ ಪ್ರದೇಶದ ವ್ಯಕ್ತಿ ಗ್ರಹಿಸುವುದರಲ್ಲೂ, ಒಬ್ಬ ಗ್ರಾಮೀಣ ಪರಿಸರದ ವ್ಯಕ್ತಿ ಗ್ರಹಿಸುವುದರಲ್ಲೂ ವ್ಯತ್ಯಾಸವಿರುತ್ತದೆ. ಒಂದೇ ವಿಷಯವನ್ನು, ಒಂದೇ ಕಾಲದ, ಒಂದೇ ಭಾಷೆಯ ಲೇಖಕಿಯರು ಬರೆದರೂ ಹೇಗೆ ಯೋಚನೆಗಳು ವಿಭಿನ್ನವಾಗಿವೆ ಎಂದು ತೋರಿಸುವುದು ಈ ಸಾಕ್ಷ್ಯಚಿತ್ರ ಸಂಗ್ರಹದ ಉದ್ದೇಶ. ಮೂರು ತಲೆಮಾರಿನ ಲೇಖಕಿಯರನ್ನು ಇದರಲ್ಲಿ ಒಳಗೊಂಡಿದ್ದೇವೆ. ಹಾಗಾಗಿ ಮುಂದಿನ ಪೀಳಿಗೆಗೆ ತಮ್ಮ ಹಿಂದಿನ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಲೋಕದ ಪರಿಚಯ ಮಾಡಿಕೊಡುವ ದಾಖಲೀಕರಣವೂ ಇದಾಗಲಿದೆ. 
-ವಸುಂಧರಾ ಭೂಪತಿ, ಲೇಖಕಿಯರ ಸಂಘದ ಅಧ್ಯಕ್ಷೆ

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್‌ ಸವಾರ ಸಾವು

Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್‌ ಸವಾರ ಸಾವು

Bangalore Karaga: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ

Bangalore Karaga: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ

Bengaluru: ಬೆಂಗಳೂರಿನಲ್ಲಿ 1.35 ಕೋಟಿ ರೂ. ನಗದು ವಶ

Bengaluru: ಬೆಂಗಳೂರಿನಲ್ಲಿ 1.35 ಕೋಟಿ ರೂ. ನಗದು ವಶ

Bengaluru: ಬಸ್‌ನಲ್ಲಿ ಮೊಬೈಲ್‌ ಕದಿಯುತ್ತಿದ್ದ ಗ್ಯಾಂಗ್‌ ಸೆರೆ

Bengaluru: ಬಸ್‌ನಲ್ಲಿ ಮೊಬೈಲ್‌ ಕದಿಯುತ್ತಿದ್ದ ಗ್ಯಾಂಗ್‌ ಸೆರೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.