ಹಾಲಿ ಬಾಯ್‌ ಫ್ರೆಂಡ್‌ ಜತೆ ಕೊಲೆ ಹಳೇ ಪ್ರಿಯಕರನ ಮೇಲೆ ದೂರು


Team Udayavani, Feb 25, 2018, 11:49 AM IST

hali-boy.jpg

ಬೆಂಗಳೂರು: ಅನೈತಿಕ ಸಂಬಂಧ ಪ್ರಶ್ನಿಸಿದ ಪತಿಯನ್ನು, ಪ್ರೇಮಿಯ ನೆರವಿನಿಂದ ಹತ್ಯೆಗೈದ ಹಂತಕಿ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ವಿಚಿತ್ರವೆಂದರೆ, ಕೊಲೆಗೆ ಸಹಕರಿಸಿದ ಹಾಲಿ ಪ್ರಿಯಕರನ ಉಳಿಸುವ ಸಂಬಂಧ ಮಾಜಿ ಪ್ರಿಯಕರನ ಹೆಸರು ಹೇಳುವ ಮೂಲಕ ಹಂತಕಿ ಪೊಲೀಸರೆದುರು ಹೈಡ್ರಾಮಾ ಸೃಷ್ಟಿಸಿದ್ದಾಳೆ.

ಪ್ರಕರಣ ಸಂಬಂಧ ಅನಿತಾ (22) ಹಾಗೂ ಪ್ರಿಯಕರ ಮೈಸೂರು ಮೂಲದ ರೋಷನ್‌ (24) ಹಾಗೂ ಇವರಿಗೆ ಸಹಾಯ ಮಾಡಿದ ಚಾಮರಾಜನಗರದ ಸೋಮರಾಜ್‌ (27) ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳು ಫೆ.23ರಂದು ನಸುಕಿನ 1 ಗಂಟೆ ಸುಮಾರಿಗೆ ಪಾನೀಪುರಿ ವ್ಯಾಪಾರಿ ನರಸಿಂಹಮೂರ್ತಿಯನ್ನು ಕೊಂದಿದ್ದರು.

ಹತ್ಯೆಯಲ್ಲಿ ಸೊಸೆಯ ಕೈವಾಡವಿದೆ ಎಂದು ಮೃತನ ತಾಯಿ ದೂರು ನೀಡಿದ್ದರು. ಅದರಂತೆ ಮೃತ ನರಸಿಂಹಮೂರ್ತಿ ಪತ್ನಿ ಅನಿತಾಳನ್ನು ಪೊಲೀಸರು ವಿಚಾರಣೇಗೆ ಒಳಪಡಿಸಿದ್ದರು. ಈ ವೇಳೆ ತನ್ನ ಮಾಜಿ ಪ್ರಿಯಕರ ಪ್ರವೀಣ್‌ ಕುಮಾರನ ಹೆಸರು ಹೇಳಿದ ಹಂತಕಿ, ರೋಷನ್‌ನನ್ನು ರಕ್ಷಿಸಲು ಯತ್ನಿಸಿದ್ದಾಳೆ.

ರಾಮನಗರದ ನರಸಿಂಹಮೂರ್ತಿ ಏಳು ವರ್ಷಗಳ ಹಿಂದೆ ಅನಿತಾಳನ್ನು ವಿವಾಹವಾಗಿದ್ದು, ದಂಪತಿಗೆ ಐದು ವರ್ಷದ ಪುತ್ರನಿದ್ದಾನೆ. ಐದು ವರ್ಷ ಹಿಂದೆ ನಗರಕ್ಕೆ ಬಂದು ಕುರುಬರಹಳ್ಳಿಯ ಬಾಡಿಗೆ ಮನೆಯಲ್ಲಿ ನೆಲೆಸಿರುವ ದಂಪತಿ ಮನೆಯ ಬಳಿಯೇ ತಳ್ಳುಗಾಡಿಯಲ್ಲಿ ಪಾನೀಪುರಿ ವ್ಯಾಪಾರ ಮಾಡುತ್ತಿದ್ದರು.

ಫೇಸ್‌ಬುಕ್‌ ಮೂಲಕ ಪರಿಚಯ: ಮೈಸೂರಿನ ನರಸಿಪುರದ ಕುಂತ್ತೂರು ಸಕ್ಕರೆ ಕಾರ್ಖಾನೆಯಲ್ಲಿ ಎಸಿ ಆಪರೇಟರ್‌ ಆಗಿರುವ ರೋಷನ್‌ ಮತ್ತು ಅನಿತಾ ಆರು ತಿಂಗಳ ಹಿಂದೆ ಫೇಸ್‌ಬುಕ್‌ ಮೂಲಕ ಸ್ನೇಹಿತರಾಗಿದ್ದಾರೆ. ನಂತರ ಹಲವು ಬಾರಿ ಅನಿತಾಳನ್ನು ಭೇಟಿಯಾಲು ರೋಷನ್‌ ನಗರಕ್ಕೆ ಬಂದಿದ್ದು, ಇಬ್ಬರ ನಡುವೆ ಅಕ್ರಮ ಸಂಬಂಧ ಬೆಳೆದಿತ್ತು. ಈ ವಿಚಾರ ತಿಳಿದ ಪತಿ ನರಸಿಂಹಮೂರ್ತಿ, ಅನಿತಾಗೆ ಎಚ್ಚರಿಕೆ ನೀಡಿ, ಹಲ್ಲೆ ಕೂಡ ನಡೆಸಿದ್ದ.

ಬಾಗಿಲು ತೆರೆದ ಅನಿತಾ: ಪತಿ ಹಲ್ಲೆ ನಡೆಸಿದ್ದರಿಂದ ನೊಂದಿದ್ದ ಅನಿತಾ, ರೋಷನ್‌ಗೆ ಈ ವಿಷಯ ತಿಳಿಸಿದ್ದಳು. 15 ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ರೋಷನ್‌, ಅನಿತಾ ಜತೆ ಚರ್ಚಿಸಿ ನರಸಿಂಹಮೂರ್ತಿ ಹತ್ಯೆಗೆ ಸಂಚು ರೂಪಿಸಿದ್ದ. ಅದರಂತೆ ಶುಕ್ರವಾರ ನಸುಕಿನ 1 ಗಂಟೆ ಸುಮಾರಿಗೆ ಸ್ನೇಹಿತ ಸೋಮರಾಜನ ಜತೆ ಮಾರಕಾಸ್ತ್ರ ಹಿಡಿದು ಅನಿತಾಳ ಮನೆಗೆ ಬಂದಿದ್ದಾನೆ.

ಆಗ ಖುದ್ದು ಅನಿತಾ ಬಾಗಿಲು ತೆರೆದು ಆರೋಪಿಗಳನ್ನು ಒಳ ಕರೆದುಕೊಂಡಿದ್ದಾಳೆ. ಇದೇ ವೇಳೆ ಮದ್ಯ ಸೇವಿಸಿ ಗಾಢನಿದ್ರೆಯಲ್ಲಿದ್ದ ನರಸಿಂಹಮೂರ್ತಿಯ ಬಾಯಿ ಮುಚ್ಚಿದ್ದಾರೆ. ಅನಿತಾ ಆತನ ಕಾಲುಗಳನ್ನು ಬಿಗಿಯಾಗಿ ಹಿಡಿದುಕೊಂಡಿದ್ದಾಳೆ. ರೋಷನ್‌ ಹಾಗೂ ಸೋಮರಾಜು ಮಾರಕಾಸ್ತ್ರಗಳಿಂದ ತಲೆ. ಕೈ, ಕಾಲಿಗೆ ತೀವ್ರ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ.

ನಂತರ ಮನೆ ತುಂಬ ಸಿಡಿದಿದ್ದ ರಕ್ತವನ್ನು ಅನಿತಾ ಸ್ವತ್ಛಗೊಳಿಸಿದ್ದಾಳೆ. ಅಷ್ಟರಲ್ಲಿ ಮುಂಜಾನೆ 5 ಗಂಟೆಯಾಗಿದ್ದು, ನೆಲಮಹಡಿಯಲ್ಲಿರುವ ಮನೆ ಮಾಲೀಕರು ಎಚ್ಚರಗೊಂಡಿದ್ದಾರೆ. ಜತೆಗೆ ಸಾರ್ವಜನಿಕರು ವಾಕಿಂಗ್‌ ಹೋಗುತ್ತಿದ್ದರು. ಇದನ್ನು ಗಮನಿಸಿದ ಆರೋಪಿಗಳು ಶವ ಸಾಗಿಸುವುದು ಸರಿಯಲ್ಲ ಎಂದು ಅಲ್ಲೇ ಇದ್ದ ಟಾರ್ಪಲ್‌ನಲ್ಲಿ ಸುತ್ತಿ ಮಂಚದ ಕೆಳಗೆ ನೂಕಿದರು. ನಂತರ ರೋಷನ್‌ ಮತ್ತು ಸೋಮಶೇಖರ್‌ ಪರಾರಿಯಾಗಿದ್ದರು.

ರಾತ್ರಿಯಿಂದ ಪತಿ ಕಾಣಿಲ್ಲ!: ಬೆಳಗ್ಗೆ ಏಳು ಗಂಟೆ ಸುಮಾರಿಗೆ ತನ್ನ ಸಂಬಂಧಿಕರು ಹಾಗೂ ಅತ್ತೆ ಹನುಮಮ್ಮ ಅವರಿಗೆ ಕರೆ ಮಾಡಿದ ಅನಿತಾ, ಪತಿ ನರಸಿಂಹಮೂರ್ತಿ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದಾಳೆ. ಗಾಬರಿಗೊಂಡ ಹನುಮಮ್ಮ ಮಗನ ಮನೆಗೆ ಬಂದು ಹುಡುಕಾಡಿದಾಗ ಮಂಚದ ಕೆಳಗೆ ರಕ್ತದ ಕಲೆ ಕಂಡು ಪರಿಶೀಲಿಸಿದಾಗ ಟಾರ್ಪಲಿನ್‌ನಲ್ಲಿ ನರಸಿಂಹ ಮೂರ್ತಿ ಶವ ಪತ್ತೆಯಾಗಿತ್ತು. ಕೂಡಲೆ ಸೊಸೆ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.

ಮೊದಲ ಪ್ರೇಮಿಯ ಎಳೆತಂದರು: ಆರೋಪಿ ಅನಿತಾಳನ್ನು ವಿಚಾರಣೆ ನಡೆಸಿದಾಗ ಮದುವೆಗೂ ಮುನ್ನ ತಾನು ಪ್ರೀತಿಸುತ್ತಿದ್ದ ಆಟೋ ಚಾಲಕ ಪ್ರವೀಣ್‌ ಕುಮಾರನ ಹೆಸರು ಹೇಳಿದ್ದಳು. ಪತಿ ನನ್ನ ಮೇಲೆ ಹಲ್ಲೆ ನಡೆಸಿದ್ದರಿಂದ ಕೋಪಗೊಂಡು ಪ್ರವೀಣನೇ ಕೊಲೆ ಮಾಡಿದ ಎಂದು ಹೇಳಿಕೆ ದಾಖಲಿಸಿದ್ದಳು.

ರೋಷನ್‌ ವಿಚಾರ ಅರಿಯದ ಅತ್ತೆ ಹನುಮಮ್ಮ ಕೂಡ ಪ್ರವೀಣ್‌ ಹಾಗೂ ಅನಿತಾ ಒಮ್ಮೆ ಮನೆ ಬಿಟ್ಟು ಹೋಗಿದ್ದ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದರು. ಹೀಗಾಗಿ ಪೊಲೀಸರು ಪ್ರವೀಣ್‌ನನ್ನು ಎಳೆತಂದು ವಿಚಾರಣೆ ನಡೆಸಡಿದ್ದಾರೆ. ಆದರೆ ನಿತಾ ಹಾಗೂ ತನ್ನ ನಡುವೆ ಸಂಪರ್ಕ ಕಡಿತು ಹಲವು ವರ್ಷಗಳೇ ಕಳೆದಿವೆ ಎಂದು ಪ್ರವೀಣ್‌ ಹೇಳಿದ್ದ.

ಆಗ ಮತ್ತೆ ತೀವ್ರ ವಿಚಾರಣೆಗೆ ಒಳಪಡಿಸಿದಾಗ ಅನಿತಾ, ರೋಷನ್‌ ಹೆಸರು ಬಾಯಿಬಿಟ್ಟಳು. ಕೂಡಲೇ ರೋಷನ್‌ನನ್ನು ಬಂಧಿಸಿದ್ದು, ಆತನೂ ತಪ್ಪೊಪ್ಪಿಕೊಂಡಿದ್ದಾನೆ. ಕೃತ್ಯವೆಸಗಿದ ಬಳಿಕ ಇಬ್ಬರು ಮದುವೆಯಾಗಲು ತೀರ್ಮಾನಿಸಿದ್ದರು ಎಂದು ವಿಚಾರಣೆ ವೇಳೆ ತಿಳಿದು ಬಂದಿರುವುದಾಗಿ ಪೊಲೀಸ್‌ ಅಧಿಕಾರಿಯೊಬ್ಬರು “ಉದಯವಾಣಿ’ಗೆ ವಿವರಿಸಿದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.