ಮಾಲಿನ್ಯ ತಡೆಯುವ ಮಾತೇ ಇಲ್ಲ!


Team Udayavani, Mar 1, 2018, 10:38 AM IST

blore-1.jpg

ಬೆಂಗಳೂರು: ಬಜೆಟ್‌ನಲ್ಲಿ ಉದ್ಯಾನ ಮತ್ತು ಕೆರೆಗಳ ಬದಿಗಳಲ್ಲಿಔಷಧ ಗಿಡಗಳನ್ನು ನೆಡುವುದು, ಉದ್ಯಾನಗಳಲ್ಲಿ ಕನ್ನಡ ಸಾಹಿತಿಗಳ ಪರಿಚಯ, ಇಂಗು ಗುಂಡಿಗಳ ನಿರ್ಮಾಣ, ಅಸ್ತಿತ್ವದಲ್ಲಿರುವ ಕೆರೆಗಳ ಪುನರುಜ್ಜೀವನ, ನಿರ್ವಹಣೆಗೆ 10 ಕೋಟಿ ರೂ. ಮೀಸಲಿಡಲಾಗಿದೆ. ಆದರೆ, ಪರಿಸರ ಮಾಲಿನ್ಯ ತಡೆಗೆ ಬಜೆಟ್‌ನಲ್ಲಿ ಯಾವುದೇ ಕ್ರಮಗಳಿಲ್ಲ.

ಧನ್ವಂತರಿ ಮರಗಳ ಉದ್ಯಾನ ಅಭಿವೃದ್ಧಿಗಾಗಿ ಮತ್ತು ಕೆರೆಗಳ ಬದಿಗಳಲ್ಲಿ ಔಷಧ ಗಿಡಗಳನ್ನು ನೆಡಲು 50 ಲಕ್ಷ ರೂ.
ಮೀಸಲಿಡಲಾಗಿದೆ. ಪ್ರತಿ ವಾರ್ಡ್‌ಗಳಲ್ಲಿ 200 ಸಸಿಗಳನ್ನು ನೆಟ್ಟು, ಟ್ರೀ ಗಾರ್ಡ್‌ ನಿರ್ಮಿಸಲು 1 ಕೋಟಿ ರೂ. ನೀಡಲಾಗಿದೆ. ಹಸಿರೀಕರಣ ಹೆಚ್ಚಳಕ್ಕೆ ಸಸ್ಯ ಕ್ಷೇತ್ರ ನಿರ್ಮಿಸಲು ಉದ್ದೇಶಿಸಲಾಗಿದೆ. ಕೆರೆಗಳ ನಿರ್ವಹಣೆಗಾಗಿಯೇ 10 ಕೋಟಿ ರೂ. ಕೊಡಲಾಗಿದೆ. ಸರ್ಕಾರವು 40 ಕೆರೆಗಳ ಅಭಿವೃದ್ಧಿಗಾಗಿ 20 ಕೋಟಿ ಅನುದಾನ ನೀಡಿದ್ದು, ಈ ಸಂಬಂಧದ ಕ್ರಿಯಾಯೋಜನೆ ಅನ್ವಯ ಕೆರೆಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ.

ಇಂಗು ಗುಂಡಿ ಕಡ್ಡಾಯ: ಪಾಲಿಕೆಯಿಂದ ಕೈಗೊಳ್ಳುವ ಎಲ್ಲ ರೀತಿಯ ಚರಂಡಿ ಕಾಮಗಾರಿಗಳಲ್ಲಿ ಇಂಗು ಗುಂಡಿ ಕಡ್ಡಾಯವಾಗಿ ನಿರ್ಮಿಸುವುದು ಹಾಗೂ ಕಾಮಗಾರಿ ವೆಚ್ಚದ ಶೇ.10ರಷ್ಟು ಹಣವನ್ನು ಇಂಗು ಗುಂಡಿಗೆ ಮೀಸಲಿಟ್ಟು, ಕಾಮಗಾರಿ ಅಂದಾಜು ಪಟ್ಟಿಯಲ್ಲಿ ಅಳವಡಿಸಿಕೊಳ್ಳುವುದು ಕಡ್ಡಾಯಗೊಳಿಸಲಾಗಿದೆ. ಇದರಿಂದ ಭವಿಷ್ಯದಲ್ಲಿ ಎದುರಾಗಬಹುದಾದ ನೀರಿನ ಅಭಾವ ತಪ್ಪಿಸಲು ಇದು ಪೂರಕ ಹೆಜ್ಜೆ ಆಗಲಿದೆ. 

5 ಕಡೆ ಕಲಾಭವನ: ನಾಟಕ, ಸಂಗೀತ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸಲು ಪಾಲಿಕೆಯ ಐದು ವಲಯಗಳಲ್ಲಿ ಕಲಾಭವನ ನಿರ್ಮಿಸುವುದಾಗಿ ಘೋಷಿಸಲಾಗಿದೆ. ಇದಕ್ಕಾಗಿ 5 ಕೋಟಿ ರೂ. ಮೀಸಲಿರಿಸಲಾಗಿದೆ. ಅಲ್ಲದೆ, ಗ್ರಾಮೀಣ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ “ಆಡೋಣ ಬಾ ಅಂಗಳದಲ್ಲಿ’ ಕಾರ್ಯಕ್ರಮಕ್ಕೆ ಪ್ರತಿ ವಾರ್ಡ್‌ಗೆ 1 ಲಕ್ಷ ರೂ. ತೆಗೆದಿಡಲಾಗಿದೆ. 

ರಾಜ್ಯ ಹಾಕಿ ಅಸೋಸಿಯೇಷನ್‌ ಆವರಣದಲ್ಲಿ ಹಾಕಿ ದಂತಕತೆ ಧ್ಯಾನ್‌ಚಂದ್‌ ಪುತ್ಥಳಿ, ಮೇಕ್ರಿ ವೃತ್ತದಲ್ಲಿ ಮೇಜರ್‌ ಸಂದೀಪ್‌ ಉನ್ನಿಕೃಷ್ಣನ್‌ ಮತ್ತು ಮೇಜರ್‌ ಅಕ್ಷಯ್‌ ಗಿರೀಶ್‌ ಕುಮಾರ್‌ ಅವರ ಪ್ರತಿಮೆ ಸ್ಥಾಪಿಸಲು ತಲಾ 1 ಕೋಟಿ ಮೀಸಲಿಡಲಾಗಿ¨ 

ಶೌಚಾಲಯಕ್ಕೆ ಕೋಟಿ ರೂ.
ಸಾರ್ವಜನಿಕರ ಅನುಕೂಲಕ್ಕಾಗಿ ಪ್ರಮುಖ 50 ಉದ್ಯಾನಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ 1 ಕೋಟಿ ರೂ.,
ಉದ್ಯಾನಗಳಿಗೆ ನಿರಂತರ ನೀರು ಪೂರೈಕೆಗೆ ಅಗತ್ಯ ಬೋರ್‌ ವೆಲ್‌ ನಿರ್ವಹಣೆಗೆ 2 ಕೋಟಿ ರೂ., ಪ್ರಾಣಿ-ಪಕ್ಷಿಗಳ ಹಸಿವು ನೀಗಿಸಲು ಲ್ಯಾಂಡ್‌ಲ್‌ ಸ್ಥಳ, ಉದ್ಯಾನ, ಕೆರೆಗಳ ಬದಿಯಲ್ಲಿ ಹಣ್ಣಿನ ಗಿಡ ಬೆಳೆಸಲು, ಗೂಡು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು 50 ಲಕ್ಷ ರೂ. ಮೀಸಲಿಡಲಾಗಿದೆ.

ಕೆರೆಗಳ ಸುತ್ತ ಗಿಡ ನೆಡುವುದಾಗಿ ತಿಳಿಸಲಾಗಿದೆ. ಆದರೆ, ಕೆರೆಗಳೇ ಮಾಯವಾಗಿವೆ. ಕರ್ನಾಟಕ ಸರೋವರ ಸಂರಕ್ಷಣಾ ಪ್ರಾಧಿಕಾರಕ್ಕೆ ಅಸಿತ್ವ ಇಲ್ಲದಂತೆ ಮಾಡಲಾಗಿದೆ.
 ಲಿಯೊ ಸಾಲ್ಡಾನ, ಪರಿಸರವಾದಿ

ಟಾಪ್ ನ್ಯೂಸ್

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.