ಹೂವಿನ ಕರಗ ಪ್ರಯುಕ್ತ ಶಕ್ತಿಪೀಠಕ್ಕೆ ಪೂಜ
Team Udayavani, Mar 26, 2018, 12:22 PM IST
ಬೆಂಗಳೂರು: ಇತಿಹಾಸ ಪ್ರಸಿದ್ಧ ಬೆಂಗಳೂರಿನ ಹೂವಿನ ಕರಗ ಶಕ್ತ್ಯೋತ್ಸವದ ಧಾರ್ಮಿಕ ವಿಧಿವಿಧಾನಗಳು ಭರದಿಂದ ಸಾಗಿವೆ. ಕರಗ ಶಕ್ತ್ಯೋತ್ಸವದ ಮೂರನೇ ದಿನ ಭಾನುವಾರ ಸಂಪಂಗಿ ಕೆರೆಯ ಅಂಗಳದಲ್ಲಿ ಶಕ್ತಿಪೀಠಕ್ಕೆ ಪೂಜೆ ನಡೆಯಿತು. ಬಳಿಕ ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಾಲಯದಲ್ಲಿ ನಡೆದ ವಿಶೇಷ ಪೂಜಾ ಕೈಂಕರ್ಯಗಳು, ಧಾರ್ಮಿಕ ಕಾರ್ಯ ಕ್ರಮಗಳಲ್ಲಿ ನೂರಾರು ಮಂದಿ ಭಕ್ತರು ಪಾಲ್ಗೊಂಡಿದ್ದರು. ಕರಗ ವಿಶೇಷವಾಗಿ ಏಪ್ರಿಲ್ 2ರವರೆಗೆ ದೇವಾಲಯದಲ್ಲಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಗಳು ನಡೆಯಲಿವೆ. ಮಾ.28ರಂದು ವಹಿಕುಲ ಬಾಂಧವರಿಂದ ಆರತಿ ನಡೆಯಲಿದೆ.
29ರಂದು ಹಸಿ ಕರಗ, 30ರಂದು ಪೊಂಗಲ್ ಸೇವೆ ನಡೆಯಲಿದೆ. 31ರಂದು ಐತಿಹಾಸಿಕ ಕರಗ ಶಕ್ತ್ಯೋತ್ಸವದ ಹಾಗೂ ಧರ್ಮರಾಯ ಸ್ವಾಮಿ ದೇವರ ರಥೋತ್ಸವ ಜರುಗಲಿದ್ದು, ಬೆಳಗ್ಗೆ 9 ಗಂಟೆಯಿಂದ ಶ್ರೀಧರ್ಮರಾಯ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆಗಳು ನಡೆಯಲಿವೆ. ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಅಂದು ರಾತ್ರಿ 12 ಗಂಟೆಗೆ ಹೂವಿನ ಕರಗ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ.
ಹೂವಿನ ಕರಗ ಮೆರವಣಿಗೆ ಅಲಸೂರು ಪೇಟೆ ಆಂಜನೇಯಸ್ವಾಮಿ, ಶ್ರೀರಾಮ ದೇವಾಲಯ ಮತ್ತು ಶ್ರೀಪ್ರಸ್ನ ಗಂಗಾಧರೇಶ್ವರ ಸ್ವಾಮಿ ದೇವಾಲಯ. ನಗರ್ತ ಪೇಟೆಯ ವೇಣುಗೋಪಾಲಸ್ವಾಮಿ ದೇವಾಲಯದಿಂದ ಸಿದ್ದಣ್ಣ ಗಲ್ಲಿ, ಭೈರವೇಶ್ವರ ದೇವಾಲಯದ ಮಾರ್ಗವಾಗಿ ಕಬ್ಬನ್ ಪೇಟೆಯ ಶ್ರೀರಾಮ ಮಂದಿರ,ಆಂಜನೇಯ ಸ್ವಾಮಿ ದೇವಾಲಯ ಗಾಣಿಗರ ಪೇಟೆ ಚೆನ್ನಕೇಶವ ಸ್ವಾಮಿ ದೇವಸ್ಥಾನ, ಚಾಮುಂಡೇಶ್ವರಿ ದೇವಾಲಯ, ಅವೆನ್ಯೂ ರಸ್ತೆಯ ಈಶ್ವರದೇವಾಲಯಗಳಲ್ಲಿ ಪೂಜೆ ಸ್ವೀಕರಿಸಲಿದೆ. ಏ.1ರಂದು ದೇವಾಲಯದಲ್ಲಿ ಪುರಾಣ ಪ್ರವಚನ, ಗಾವುಶಾಂತಿ ನಡೆದು 2ರಂದು ಧ್ವಜಾರೋಹಣದೊಂದಿಗೆ ಕರಗ ಶಕ್ತ್ಯೋತ್ಸವದ ತೆರೆಬೀಳಲಿದೆ.
ಮೊದಲ ಬಾರಿ ಕರಗ ಹೊರುವ ಮನು: ಮುಜರಾಯಿ ಇಲಾಖೆ ಆದೇಶದಂತೆ ಈ ಬಾರಿ ಅರ್ಚಕ ಮನು ಕರಗ ಹೊರಲಿದ್ದು, ಸಂಪ್ರದಾಯ ದಂತೆ ಮಡಿ ಕಾಪಾಡುವ ಸಲುವಾಗಿ ಮೂರು ತಿಂಗಳ ಹಿಂದೇ ದೇವಾಲಯಕ್ಕೆ ಆಗಮಿಸಿರುವ ಮನು, ಪೂಜಾ ಕೈಂಕರ್ಯಗಳು, ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ