ನಿಧಿ ಆಸೆಗೆ ನರಬಲಿ ನೀಡಲು ಹಳ್ಳ ತೊಡಿದ್ದ!


Team Udayavani, Mar 27, 2018, 3:27 PM IST

blore-10.jpg

ಆನೇಕಲ್‌:  ನಿಧಿ ಆಸೆಗೆ ವ್ಯಕ್ತಿಯೊಬ್ಬನನ್ನು ಬಲಿ ನೀಡಲು ಮುಂದಾಗಿ ಕೊನೆಗೆ ಅವನೇ ಜೈಲು ಸೇರಿದ ಘಟನೆ ತಾಲೂಕಿನ ಅತ್ತಿಬೆಲೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

 ತಾಲೂಕಿನ ಅತ್ತಿಬೆಲೆ ನಿವಾಸಿ ಶಂಕರಪ್ಪ(45) ಬಂಧನಕ್ಕೆ ಒಳಗಾಗಿರುವ ವ್ಯಕ್ತಿ. ನರಬಲಿಯಿಂದ ಬಚಾವ್‌ ಆಗಿ ಠಾಣೆಯಲ್ಲಿ ದೂರು ನೀಡಿದವನು ಮೂಲತಃ ದಾವಣಗೆರೆ ನಿವಾಸಿ ನಾಗರಾಜು. ಹಲವು ವರ್ಷಗಳಿಂದ ಅತ್ತಿಬೆಲೆ ಸುತ್ತಮುತ್ತ ಕೂಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ. 

ಘಟನೆ ವಿವರ: ಶಂಕರಪ್ಪ ತಮ್ಮ ಜಮೀನಿನಲ್ಲಿ ಅಡಗಿರುವ ನಿಧಿ ತೆಗೆಯಲು ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಆ ಪೂಜೆಗೆ ನರ ಬಲಿ ನೀಡಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದ. ಇದಕ್ಕಾಗಿ ಆರು ಅಡಿ ಹಳ್ಳ ತೆಗೆದು, ಹಳ್ಳದಲ್ಲಿ ವಿಶೇಷ ಪೂಜೆ ನಡೆಸಿ ನರ ಬಲಿಗಾಗಿ ದಾವಣಗೆರೆ ಮೂಲದ ನಾಗರಾಜು ಎಂಬುವರನ್ನು ಭೇಟಿ ಮಾಡಿ ನಮ್ಮ ಹೊಲದಲ್ಲಿ ಕೆಲಸ ಇದೆ ಬಾ ಎಂದು ಕರೆದಿದ್ದ. ಕೂಲಿಗೆ ಬರುವಾಗ ಸ್ನಾನ ಮಾಡಿಕೊಂಡು ಬಾ. ಕೂಲಿಗೆ ಹೋಗುತ್ತಿರುವ ವಿಷಯ ಬೇರೆಯಾರಿಗೂ ಹೇಳಬೇಡ ಎಂದು ನಾಗರಾಜುವನ್ನು ಒಪ್ಪಿಸಿ ಬಂದಿದ್ದ.

ಒಬ್ಬನೇ ಬರಲು ಹೇಳಿದ್ದ: ರಾತ್ರಿ ಕೂಲಿಗೆ ನಾಗರಾಜು ಬರುವ ಸಮಯದಲ್ಲಿ ನಾಗರಾಜು ಮತ್ತೂಬ್ಬ ಸ್ನೇಹಿತನೊಂದಿಗೆ ಬರುವ ವಿಷಯ ತಿಳಿದು ಕೇವಲ ನಾಗರಾಜು ಒಬ್ಬನನ್ನೇ ಬರಲು ಒತ್ತಾಯಿಸಿದ್ದಾನೆ. ಅದರಂತೆ ನಾಗರಾಜು ಒಬ್ಬನೇ ಬಂದಿದ್ದಾನೆ. ಶಂಕರಪ್ಪ ನಾಗರಾಜುವನ್ನು ಕರೆದುಕೊಂಡು ಮೊದಲೇ ನಿಗದಿಯಾಗಿದ್ದ ನಿಧಿ ತೆಗೆಯುವ ಪೂಜಾ ಸ್ಥಳದ ಬಳಿ ಕರೆದುಕೊಂಡು ಹೋಗಿ ಆರು ಅಡಿ ಹಳ್ಳದಲ್ಲಿ ಇಳಿಯಲು ತಿಳಿಸಿದ್ದಾನೆ.

ಸ್ಥಳದಲ್ಲಿ ಪೂಜೆಗಳು ನಡೆದಿರುವುದು, ಅಲ್ಲದೇ ಹಳ್ಳದೊಳಗೆ ಪೂಜಾರಿ ಒಬ್ಬ ಪೂಜೆ ನಡೆಸುತ್ತಿದ್ದಿದ್ದನ್ನು ಕಂಡ ನಾಗರಾಜನಿಗೆ ಅನುಮಾನ ಬಂದಿದೆ. ಕೂಡಲೇ ಅಲ್ಲಿಂದ ಪರಾರಿಯಾಗಿ ಅತ್ತಿಬೆಲೆ ಪೊಲೀಸ್‌ ಠಾಣೆಗೆ ಹೋಗಿ ನಡೆದ ಘಟನೆ ಬಗ್ಗೆ ಮಾಹಿತಿ ನೀಡಿದ್ದಾನೆ.

ನಾಗರಾಜು ನೀಡದ ದೂರಿನ ಮೇರೆಗೆ ಶಂಕರಪ್ಪನನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಮಾಹಿತಿ ನೀಡದ ಪೊಲೀಸರು: ಘಟನೆ ಬಗ್ಗೆ ಮಾಹಿತಿ ನೀಡಲು ಪೊಲೀಸರು ಮೀನಮೇಷ ಏಣಿಸಿದ್ದು ಪತ್ರಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ನಡೆದಿರುವ ಘಟನೆ ಕುರಿತು ಮಾಹಿತಿ ನೀಡದೇ ಇದ್ದರಿಂದ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಜೂಜಾಟ: 23 ಆರೋಪಿಗಳ ಬಂಧನ, 62 ಸಾವಿರ ರೂ. ವಶ
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳ ವಂಗಳ ಪೊಲೀಸ್‌ ಠಾಣೆ ವ್ಯಾಪ್ತಿಯ ವಿವಿಧೆಡೆ ಜೂಜಾಟದಲ್ಲಿ ತೊಡಗಿದ್ದ 23 ಮಂದಿಯನ್ನು ಪೊಲೀಸರು ಬಂಧಿಸಿ ನಗದು ವಶಪಡಿಸಿಕೊಂಡಿದ್ದಾರೆ. ಗ್ರಾಮಾಂತರ ಪ್ರದೇಶಗಳಲ್ಲಿ ಸಾಮಾನ್ಯವಾಗಿರುವ ಜೂಜಾಟದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ದೊಡ್ಡಬೆಳವಂಗಲ ಪೊಲೀಸ್‌ ಠಾಣೆಯ ಎಸ್‌ಐ ಗಜೇಂದ್ರ ನೇತೃತ್ವದಲ್ಲಿ ದಾಳಿ ನಡೆಸಿ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ 7 ಮಂದಿಯನ್ನು ಬಂಧಿಸಿ ಪಡೆದು 11,480ರೂ. ನಗದು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ಬೆನಕಿನ ಮಡಗು ಗ್ರಾಮದಲ್ಲಿ ದಾಳಿ ನಡೆಸಿ ಜೂಜಾಟದಲ್ಲಿ ತೊಡಗಿದ್ದ 16 ಮಂದಿಯನ್ನು ಬಂಧಿಸಿ 50,700 ರೂ. ನಗದು ವಶಕ್ಕೆ ಪಡೆದಿದ್ದಾರೆ. 

ಪ್ರತಿ ವರ್ಷ ಯುಗಾದಿ ಹಬ್ಬದ ಆದ ನಂತರದ ದಿನಗಳಲ್ಲಿ ಗ್ರಾಮಗಳಲ್ಲಿ ಜೂಜಾಟಗಳು ಹೆಚ್ಚಾಗಿ ನಡೆಯುತ್ತಿದ್ದು,
ಪೊಲೀಸ್‌ ಇಲಾಖೆ ಈ ಬಗ್ಗೆ ಈ ವೇಳೆ ಹೆಚ್ಚಿನ ನಿಗಾವಹಿಸಿ ಜೂಜಾಟಗಳನ್ನು ತಡೆಗಟ್ಟಬೇಕಿದೆ ಎನ್ನುತ್ತಾರೆ ಗ್ರಾಮಸ್ಥರು

ಯುವತಿ ನಾಪತ್ತೆ: ಪತ್ತೆಗೆ ತಾಯಿ ಮನವಿ
ಹೊಸಕೋಟೆ: ತಾಲೂಕಿನ ಕೊಳತೂರಿ ನಿಂದ ಮಂಜುಳಾ ಮಗಳಾದ ಎನ್‌.ನಯನಾ (17) ಎಂಬ ಯುವತಿ ಕಾಣೆಯಾಗಿದ್ದಾಳೆ. ಮಾ.23ರಂದು ರಾತ್ರಿ ಸುಮಾರು 8 ಗಂಟೆ ಸಮಯದಲ್ಲಿ ಅದೇ ಗ್ರಾಮದಲ್ಲಿ ವಾಸಿಸುತ್ತಿರುವ ತನ್ನ ಅಕ್ಕ ಅಮರಾವತಮ್ಮ ಮನೆಗೆ ಹೋಗಿಬರುವುದಾಗಿ ಹೇಳಿ ಮತ್ತೆ ಹಿಂದಿರುಗಿಲ್ಲ. ಸಂಬಂಧಿಕರು, ಸ್ನೇಹಿತರ ಮನೆಯಲ್ಲಿ ಹುಡುಕಾಡಿದರೂ ಪತ್ತೆಯಾಗಿಲ್ಲ ಎಂದು ಮಂಜುಳಾ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಯುವತಿಯು ಸುಮಾರು 5 ಅಡಿ ಎತ್ತರವಿದ್ದು ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು ನೀಲಿ, ಹಸಿರು, ಬಿಳಿ ಬಣ್ಣದ ಚೂಡಿದಾರ್‌ ಧರಿಸಿದ್ದಾಳೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡಲು ಬರುತ್ತಿದ್ದು ಯುವತಿಯ ಬಗ್ಗೆ ಯಾರಿಗಾದರೂ ಸುಳಿವು ದೊರೆತಲ್ಲಿ ಹೊಸಕೋಟೆ ಪೊಲೀಸ್‌ ಠಾಣೆ ದೂ. (080) 27931570 ಸಂಪರ್ಕಿಸಬಹುದಾಗಿದೆ ಎಂದು ಪೊಲೀಸ್‌ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.