ಚುನಾವಣೆ ಸಬೂಬು ಸಲ್ಲದು


Team Udayavani, Apr 19, 2018, 2:35 PM IST

blore-8.jpg

ಬೆಂಗಳೂರು: “ಬೇಸಿಗೆ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಗೆ ಕೆಲವೆಡೆ ಸಮಸ್ಯೆ ಇದೆ. ಆದರೆ, ಪರಿಹರಿಸಲು ಜಲಮಂಡಳಿ ಜತೆಗೂಡಿ ಕ್ರಮ ಕೈಗೊಳ್ಳಲಾಗುತ್ತಿದೆ. ಚುನಾವಣೆ ಕಾರ್ಯದ ಸಬೂಬು ಹೇಳಿ ಯಾವ ಅಧಿಕಾರಿಯೂ ಜನರಿಗೆ ನೀರೊದಗಿಸುವ ಹೊಣೆಗಾರಿಕೆ ಯಿಂದ ನುಣುಚಿಕೊಳ್ಳುವಂತಿಲ್ಲ,’ ಎಂದು ಪಾಲಿಕೆ ಆಯುಕ್ತ ಮಂಜುನಾಥ್‌ ಪ್ರಸಾದ್‌ ತಿಳಿಸಿದ್ದಾರೆ. 

ಕುಡಿಯುವ ನೀರು ಪೂರೈಕೆ ಸಮಸ್ಯೆ ಬಗ್ಗೆ “ಉದಯವಾಣಿ’ಜತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಮುಂಜಾಗ್ರತಾ ಕ್ರಮವಾಗಿ ಸಾಕಷ್ಟು ಎಚ್ಚರಿಕೆ ವಹಿಸಿದ್ದೇವೆ. ಆದರೂ ಸಣ್ಣಪುಟ್ಟ ಸಮಸ್ಯೆಗಳು ಇವೆ.
ಆದಷ್ಟೂ ಜನರಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗದಂತೆ ಬಿಬಿಎಂಪಿ ಹಾಗೂ ಜಲಮಂಡಳಿ ಸಮನ್ವಯತೆಯಿಂದ ಎಲ್ಲ ರೀತಿಯ ಕ್ರಮ ಕೈಗೊಳ್ಳಲಿದೆ. ಜೂನ್‌ 15 ರವರೆಗೂ ಗಮನಹರಿಸಲಾಗುವುದು ಎಂದು ಹೇಳಿದರು

„ ಉದಯವಾಣಿ ಕಾಳಜಿಗೆ ಮೆಚ್ಚುಗೆ  ಉದಯವಾಣಿ “ಜೀವಜಲ ಜಂಜಾಟ’ ಸರಣಿ ಪ್ರಕಟಿಸಿದ್ದು ಒಳ್ಳೆಯ ಕೆಲಸ. ನಗರದ ಕೇಂದ್ರ ಹಾಗೂ ಹೊರವಲಯಗಳಲ್ಲಿನ ನೀರಿನ ಸಮಸ್ಯೆಯ ಬಗ್ಗೆ ಬಿಬಿಎಂಪಿ ಹಾಗೂ ಜಲಮಂಡಳಿಗೆ ಇದರಿಂದ ಮಾಹಿತಿ ಸಿಕ್ಕಂತಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ ಆಯುಕ್ತರು, ಸಮಸ್ಯೆ ಇರುವ ಕಡೆ ಶೀಘ್ರ ಪರಿಹಾರ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು. 

„ ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಕ್ರಿಯಾ ಯೋಜನೆ ರೂಪಿಸಿದರೂ ಸಮಸ್ಯೆ ಯಾಕೆ ಬಗೆಹರಿದಿಲ್ಲ?
 ಈಗಾಗಲೇ ಜಲಮಂಡಳಿ ಹಾಗೂ ಬಿಬಿಎಂಪಿಯಿಂದ ಬೇಸಿಗೆಯಲ್ಲಿ ಸಮಸ್ಯೆ ಉಂಟಾಗದಂತೆ ಕ್ರಿಯಾ ಯೋಜನೆ ರೂಪಿಸಲಾಗಿದೆ. ಅದರ ಹೊರತಾಗಿಯೂ ಸಮಸ್ಯೆಯಿರುವ ಬಗ್ಗೆ ಕೆಲವೆಡೆ ದೂರುಗಳು ಕೇಳಿ ಬಂದಿವೆ. ಅಂತಹ ಭಾಗಗಳಲ್ಲಿ ಸಮಸ್ಯೆ ನಿವಾರಣೆಗೆ ಕ್ರಮಕೈಗೊಳ್ಳಲಾಗುವುದು.

„ ಕಾವೇರಿ ನೀರು ಪೂರೈಕೆಯಾಗದ ಕಡೆ ನೀರು ಸರಬರಾಜು ಹೇಗೆ?
 ಕಾವೇರಿ ನೀರು ಪೂರೈಕೆಯಾಗದ ಪ್ರದೇಶಗಳಲ್ಲಿ ಜನಪ್ರತಿನಿಧಿಗಳು ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುತ್ತಿದ್ದರು.  ಆದರೆ, ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಈಗ ಜನಪ್ರತಿನಿಧಿಗಳು ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡುವಂತಿಲ್ಲ. ಆ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿರುವ ಕಡೆಗಳಲ್ಲಿ ಪಾಲಿಕೆಯಿಂದಲೇ ನೀರು ಪೂರೈಕೆ ಮಾಡುವಂತೆ ಹಾಗೂ ಅಗತ್ಯ ಇರುವ ಕಡೆ ಕೊಳವೆಬಾವಿ ಕೊರೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

„ ಮಹದೇವಪುರ ಸೇರಿ ವಿವಿಧ ವಲಯಗಳಲ್ಲಿ ಜಲಮಂಡಳಿ ಸಂಪರ್ಕವಿದ್ದರೂ ನೀರಿನ ಸಮಸ್ಯೆ ಇರುವುದೇಕೆ?
 ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಆದ್ಯತೆಯ ಮೇಲೆ ಕ್ರಮಕೈಗೊಳ್ಳುವಂತೆ ಎಲ್ಲ ವಾರ್ಡ್‌ ಅಭಿಯಂತರುಗಳಿಗೆ ಸೂಚಿಸಲಾಗಿದೆ. ಅದರ ಹೊರತಾಗಿಯೂ ಜಲಮಂಡಳಿಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುವಂತೆ ತಿಳಿಸಲಾಗಿದೆ.

„ ನೀರು ಪೂರೈಕೆ ಸಂಬಂಧಿತ ಸಮಸ್ಯೆಗಳನ್ನು ತಿಳಿಸಲು ಅಧಿಕಾರಿಗಳು ಸಿಗುತ್ತಿಲ್ಲ ಎಂಬ ದೂರಿದೆ?
 ಹಲವಾರು ಅಧಿಕಾರಿಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಅದರ ಹೊರತಾಗಿಯೂ ಜನರಿಗೆ ಸಮಸ್ಯೆಗಳಿಗೆ ಸ್ಪಂದಿಸಿ ಅವುಗಳ ಪರಿಹಾರಕ್ಕೆ ಮುಂದಾಗು ವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಆದರೆ, ಚುನಾವಣಾ ಕಾರ್ಯ ಇಲ್ಲದಿದ್ದರೂ ಆ ಸಬೂಬು ಹೇಳಿ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವಂತಿಲ್ಲ. ಅಂತಹ ಪ್ರಕರಣ ಕಂಡು ಬಂದರೆ ಕ್ರಮ ಕೈಗೊಳ್ಳಲಾಗುವುದು.

„ ಕೆಲವೆಡೆ ಪಾಲಿಕೆಯಿಂದ ಕೊರೆಸಿರುವ ಕೊಳವೆಬಾವಿಗಳು ಹಾಳಾಗಿದ್ದರೂ ದುರಸ್ತಿಗೆ ಕ್ರಮ ಕೈಗೊಂಡಿಲ್ಲವೇಕೆ?
 ಬಿಬಿಎಂಪಿ ವ್ಯಾಪ್ತಿಯ ಕೊಳವೆಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲಾಗಿದ್ದು, ದುರಸ್ತಿಯಾಗಬೇಕಿರುವ ಕೊಳವೆಬಾವಿಗಳ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು. 

ವೆಂ.ಸುನೀಲ್‌ಕುಮಾರ್‌

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.