ಎಚ್ಡಿಕೆಗೆ 2 ಲಕ್ಷ ರೂ. ನೀಡಿದ ರೈತ
Team Udayavani, Apr 26, 2018, 12:13 PM IST
ಬೆಂಗಳೂರು: ಪಕ್ಷದ ಪ್ರಚಾರದ ಖರ್ಚಿಗಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರಿಗೆ ರೈತನೊಬ್ಬ ಎರಡು ಲಕ್ಷ ರೂ. ನೀಡಿದ ಪ್ರಸಂಗ ನಡೆದಿದೆ. ಕುಮಾರಸ್ವಾಮಿ ಅವರು ಬುಧವಾರ ಮೈಸೂರಿಗೆ ತೆರಳುತ್ತಿದ್ದ ಮಾರ್ಗ ಮಧ್ಯೆ ಅವರ ವಾಹನ ನಿಲ್ಲಿಸಿದ ಮಾಗಡಿ ವಿಧಾನಸಭಾ ಕ್ಷೇತ್ರದ ಕೂಟಗಲ್ನ ರೈತ ಕೃಷ್ಣಪ್ಪ, ತಮ್ಮಲ್ಲಿದ್ದ 2 ಲಕ್ಷ ರೂ.ಗಳನ್ನು ಕುಮಾರಸ್ವಾಮಿ ಅವರಿಗೆ ನೀಡಿ, ನೀವೇ ನಾಡಿನ ಮುಖ್ಯಮಂತ್ರಿಯಾಗ ಬೇಕು ಎಂದು ಹಾರೈಸಿದರು.
ನಂತರ ಮಾತನಾಡಿದ ರೈತ ಕೃಷ್ಣಪ್ಪ, ಏಕಾಂಗಿಯಾಗಿ ರಾಜ್ಯದಾದ್ಯಾಂತ ರೈತರ ಪರವಾದ ಧ್ವನಿ ಎತ್ತುತ್ತಿರುವ ಕುಮಾರಸ್ವಾಮಿ ಅವರಿಗೆ ನನ್ನ ಕೈಲಾದ ಸಹಾಯ ಮಾಡಿದ್ದೇನೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯವರು ಸಾಕಷ್ಟು ಹಣ ಖರ್ಚು ಮಾಡುತ್ತಿದ್ದು, ಕುಮಾರಸ್ವಾಮಿ ಬಳಿ ಅಷ್ಟೊಂದು ಹಣ ಇಲ್ಲದ ಕಾರಣ ನಾನು ದುಡಿದು ಸೇರಿಸಿಟ್ಟ ಹಣವನ್ನು ಅವರಿಗೆ ಕೊಟ್ಟಿದ್ದೇನೆ. ಕುಮಾರಸ್ವಾಮಿಯಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲ. ಅವರು ಸಿಎಂ ಆಗಬೇಕೆಂಬುದು ನನ್ನ ಆಸೆ ಎಂದು ಹೇಳಿದರು.
ಈ ಕುರಿತಂತೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, “ಕುಮಾರ ಸ್ವಾಮಿಯವರ ಕಷ್ಣ ನೋಡಿ ನಾಡಿನ ಪ್ರತಿಯೊಬ್ಬ ರೈತ ಕೂಡ ಮಿಡಿಯುತಿದ್ದಾನೆ. ಕೂಟಗಲ್ ಕೃಷ್ಣಪ್ಪ ತನ್ನ ಕಷ್ಟದ ನಡುವೆಯೂ ಸಹಾಯ ಮಾಡಿದ್ದಾರೆ. ಅವರಿಗೆ ಭಗವಂತ ಒಳ್ಳೆಯದನ್ನ ಮಾಡಲಿ. ಇಂತಹ
ಮುಗ್ಧ ಮತ್ತು ನಿಷ್ಕಲ್ಮಷ ಮನಸ್ಸಿನ ರೈತರ ಆಶೀರ್ವಾದದಿಂದ ಜೆಡಿಎಸ್ ಅಧಿಕಾರಕ್ಕೆ ಬಂದೇಬರುತ್ತದೆ,’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್