ಮಾವು, ಹಲಸು ಮಾರಾಟ ಮೇಳ ಆರಂಭ


Team Udayavani, May 23, 2018, 12:08 PM IST

mavu-halsu.jpg

ಬೆಂಗಳೂರು: ಮಧ್ಯವರ್ತಿಗಳ ಹಾವಳಿಯಿಂದಾಗಿ ಮಾವಿನ ಹಣ್ಣಿನ ಬೆಲೆ ಅಧಿಕವಾಗಿದು,ª ಗ್ರಾಹಕರ ಅನುಕೂಲಕ್ಕಾಗಿ ತೋಟಗಾರಿಕೆ ಇಲಾಖೆ ಹೆಚ್ಚೆಚ್ಚು ಮಾವಿನ ಮೇಳವನ್ನು ಆಯೋಜಿಸಲಿದೆ ಎಂದು ತೋಟಗಾರಿಕೆ ಇಲಾಖೆಯ ನಿರ್ದೇಶಕ ವೈ.ಎಸ್‌.ಪಾಟೀಲ್‌ ಹೇಳಿದರು.

ನಗರದ ಹಡ್ಸನ್‌ ವೃತ್ತದ ಬಳಿ ಇರುವ ಹಾಪ್‌ ಕಾಮ್ಸ್‌ನಲ್ಲಿ ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ ಆಯೋಜಿಸಿರುವ “ಮಾವು ಮತ್ತು ಹಲಸು ಮಾರಾಟ ಮೇಳ’ವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಬೇಗ ಹಣ್ಣಾಗಲಿ ಎನ್ನುವ ಕಾರಣದಿಂದ ಮಾವಿನ ಕಾಯಿಗೆ ಕೆಲವರು ರಾಸಾಯನಿಕ ದ್ರಾವಣ ಸಿಂಪಡಿಸುತ್ತಾರೆ.

ಆದರೆ, ಹಾಪ್‌ ಕಾಮ್ಸ್‌ನಲ್ಲಿ ಇದಕ್ಕೆ ಅವಕಾಶ ಇಲ್ಲ. ಗ್ರಾಹಕರ ಹಿತದೃಷ್ಟಿಯಿಂದ ಮುಖ್ಯವಾಗಿರುವ ಹಿನ್ನೆಲೆಯಲ್ಲಿ ರಾಸಾಯನಿಕ ರಹಿತ ಹಣ್ಣುಗಳನ್ನಷ್ಟೇ ಮಾರಾಟ ಮಾಡಲಾಗುವುದು. ಹೀಗಾಗಿ, ಹಣ್ಣು ಗಳು ಕೂಡ ತಿನ್ನಲು ಸ್ವಾದಿಷ್ಟವಾಗಿರುತ್ತವೆ. ಆರೋಗ್ಯಕ್ಕೂ ಕೂಡ ಒಳ್ಳೆಯದ್ದು ಎಂದು ಹೇಳಿದರು.

ಹಾಪ್‌ ಕಾಮ್ಸ್‌ ಸಂಸ್ಥೆಯ ಅಧ್ಯಕ್ಷ ಎ.ಎಸ್‌.ಚಂದ್ರೇಗೌಡ ಮಾತನಾಡಿ, ಹಾಪ್‌ ಕಾಮ್ಸ್‌ ರೈತರಿಂದ ಮಾವು ಮತ್ತು ಹಲಸಿನ ಹಣ್ಣುಗಳನ್ನು ನೇರವಾಗಿ ಖರೀದಿಸಿ ಶೇ.10ರ ರಿಯಾಯ್ತಿ ದರದಲ್ಲಿ ಗ್ರಾಹಕರಿಗೆ ಮಾರಾಟ ಮಾಡುತ್ತಿದೆ. ಸುಮಾರು ಒಂದು ತಿಂಗಳ ಕಾಲ ಈ ಮೇಳ ನಡೆಯಲಿದೆ ಎಂದು ಹೇಳಿದರು.

ಕಳೆದ ವರ್ಷ ಸುಮಾರು 708 ಟನ್‌ ವಹಿವಾಟು ನಡೆಸಲಾಗಿತ್ತು. ಈ ಬಾರಿ ಒಂದು ಸಾವಿರ ಟನ್‌ ವಹಿವಾಟಿನ ಗುರಿ ಹೊಂದಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿರುವ ಹಾಪ್‌ ಕಾಮ್ಸ್‌ ಮಳುಗೆಗಳಲ್ಲಿ ರಿಯಾಯ್ತಿ ದರದಲ್ಲಿ ಮಾರಾಟ ನಡೆಯಲಿದೆ ಎಂದರು. 

ಮಾವಿನಲ್ಲಿ ನಾಟಿ, ತೋತಾಪುರಿ, ಸೆಂದೂರ, ಬೈಗಾನ್‌, ಕಾಲಪಾಡು, ಮಲ್ಲಿಕಾ, ಬಾದಾಮಿ, ದಸೇರಿ, ಮಲಗೋವ, ಸಕ್ಕರೆಗುತ್ತಿ ಸೇರಿದಂತೆ ಹಲವು ತಳಿಗಳಿವೆ. ಜೊತೆಗೆ ಚಂದಹಲಸು ಗ್ರಾಹಕರ ಆಯ್ಕೆಗೆ ಕೈಗೆಟಕುತ್ತಿವೆ. ಮೇಳದಲ್ಲಿ ಹಾಪ್‌ ಕಾಮ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ವಿಶ್ವನಾಥ್‌, ಉಪಾಧ್ಯಕ್ಷ ಬಿ.ಮುನೇಗೌಡ ಸೇರಿದಂತೆ ಮತ್ತಿತರ‌ರು ಉಪಸ್ಥಿತರಿದ್ದರು.

ವೈರಸ್‌ ಭಯ ಬೇಡ: ಕೇರಳದಲ್ಲಿ ಕಾಣಿಸಿಕೊಂಡಿರುವ ನಿಪಾಹ್‌ ವೈರಸ್‌ ಬಗ್ಗೆ ಹಾಪ್‌ ಕಾಮ್ಸ್‌ ಗ್ರಾಹಕರಿಗೆ ಭಯ ಬೇಡ. ಹಕ್ಕಿ ತಿಂದ ಹಣ್ಣು ತಿನ್ನುವುದರಿಂದ ಈ ರೋಗ ಬರುತ್ತಿದೆ ಎಂದು ಹೇಳಲಾಗುತ್ತದೆ. ಆದರೆ, ಹಾಪ್‌ಕಾಮ್ಸ್‌ ನಲ್ಲಿ ಸಂಸ್ಕರಣೆ ಮಾಡಿದ ಹಣ್ಣುಗಳನ್ನೇ ಮಾರಾಟ ಮಾಡಲಾಗುತ್ತಿದ್ದು, ವೈರಸ್‌ ಬಗ್ಗೆ ಗ್ರಾಹಕರು ಯಾವುದೇ ರೀತಿಯಲ್ಲಿ ಆತಂಕ ಪಡುವ ಆಗತ್ಯ ಇಲ್ಲ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕ ವೈ.ಎಸ್‌.ಪಾಟೀಲ್‌ ಸ್ಪಷ್ಟಪಡಿಸಿದರು. 

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.