ಟೊಮೆಟೋ ಕೆಜಿಗೆ3 ರೂ: ರೈತ ಕಂಗಾಲು


Team Udayavani, May 28, 2018, 11:38 AM IST

blore-9.jpg

ಗೌರಿಬಿದನೂರು: ಮಾರುಕಟ್ಟೆಯಲ್ಲಿ ಟೊಮೆಟೋ ಬೆಲೆ ಭಾರೀ ಕುಸಿತ ಕಂಡಿರುವುದರಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ಇಲ್ಲಿನ ಎಪಿಎಂಸಿ ಮಾರುಕಟ್ಟೆ ಯಲ್ಲಿ 15 ಕೆಜಿ ತೂಕದ ಟೊಮೆಟೋ ಬಾಕ್ಸ್‌ ಕೇವಲ 60 ರೂ.ಗೆ ಮಾರಾಟವಾಗುತ್ತದೆ. ಅಂದರೆ ಕೆಜಿಗೆ ಬರೀ 3 ರೂ. ಮಾತ್ರ ದೊರೆಯುತ್ತಿದೆ.

ಕಳೆದವಾರ 15 ಕೆಜಿ ತೂಕದ ಬಾಕ್ಸ್‌ 120 ರೂ.ಗೆ ಮಾರಾಟವಾಗುತ್ತಿತ್ತು. ಒಂದು ವಾರದ ಅವಧಿಯಲ್ಲಿ ಅರ್ಧದಷ್ಟು ದರ ಕುಸಿತವಾಗಿದೆ ಎಂದು ಟೊಮೆಟೋ ಬೆಳೆಗಾರರು ಅವಲತ್ತುಕೊಂಡಿದ್ದಾರೆ.

ತಾಲೂಕಿನಲ್ಲಿ ಸುಮಾರು 100 ಹೆಕ್ಟೇರ್‌ ಪ್ರದೇಶದಲ್ಲಿ ಟೊಮೆಟೋ ಬೆಳೆಯಲಾಗಿದೆ. ಇಲ್ಲಿನ ಟೊಮೆಟೋ
ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಮತ್ತಿತರ ಪ್ರದೇಶಗಳಿಗೆ ಸಾಗಣೆಯಾಗುತ್ತದೆ. ಆದರೆ, ಇತ್ತೀಚಿನ
ದಿನಗಳಲ್ಲಿ ಬೇಡಿಕೆ ಕುಸಿದಿದ್ದು, ಇದರಿಂದ ಟೊಮೆಟೋ ಧಾರಣೆ ಕಡಿಮೆಯಾಗಿದೆ.

ಆಲಿಕಲ್ಲಿಗೆ ಬೆಳೆ ಹಾನಿ: ಜೊತೆಗೆ ಕಳೆದ 15 ದಿನಗಳ ಹಿಂದೆ ಸುರಿದ ಆಲಿಕಲ್ಲು ಮಳೆಯಿಂದ ಅಪಾರ ಪ್ರಮಾಣದಲ್ಲಿ ಟೊಮೆಟೋ ಬೆಳೆ ಹಾನಿಯಾಗಿದೆ. ಇದರ ಜೊತೆಗೆ ಉಳಿಸಿಕೊಂಡಿರುವ ಟೊಮೆಟೋಗೂ ಕೂಡ ಬೆಲೆ ಪಾತಾಳ ಕುಸಿದಿರುವುದು ರೈತರನ್ನು ಚಿಂತಗೀಡು ಮಾಡಿದೆ. ಬೆಳೆಗೆ ಹಾಕಿದ ಬಂಡವಾಳ ಕೂಡ ಸಿಗುತ್ತಿಲ್ಲ. ಸಾಗಾಣಿಕೆ ವೆಚ್ಚ ಕೂಡ ಸಿಗದಂತಾಗಿದೆ. ಇದರಿಂದಾಗಿ ಬೀದಿಗೆ ಬಿಸಾಡುವಂತಾಗಿದೆ ಎಂದು ರೈತರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. 

ಎರಡು ಎಕರೆ ಜಮೀನಿನಲ್ಲಿ ಹನಿ ನೀರಾವರಿ ಅಳವಡಿಸಿ, ಟೊಮೆಟೋ ಬೆಳೆದಿದ್ದು, ಬೆಳೆ ಕೂಡ ಉತ್ತಮವಾಗಿತ್ತು. ಆದರೆ, ಇದೀಗ ಬೆಲೆ ಕುಸಿತದಿಂದ ಅಪಾರ ಪ್ರಮಾಣದಲ್ಲಿ ನಷ್ಟ ಆಗಿದೆ ಎಂದು ತಾಲೂಕಿನ ದೊಡ್ಡಮಲ್ಲೇ ಕೆರೆ ಗ್ರಾಮದ ರೈತ ಭೀಮೇಶ್‌ ಅಳಲು ತೋಡಿಕೊಂಡಿದ್ದಾರೆ.

ಟೊಮೆಟೋ ಬೆಲೆ ಕುಸಿತದ ಕುರಿತು ಪ್ರತಿಕ್ರಿಯಿಸಿರುವ ತೋಟಗಾರಿಕೆ ಅಧಿಕಾರಿ ರವಿಕುಮಾರ್‌, ಆಲಿಕಲ್ಲು ಮಳೆಯಿಂದಾಗಿ ನಷ್ಟಕ್ಕೆ ಒಳಗಾಗಿರುವ ಟೊಮೆಟೋ ಬೆಳೆಗಾರರಿಗೆ ಸರ್ಕಾರದಿಂದ ಹೆಕ್ಟೇರ್‌ಗೆ 16 ಸಾವಿರ
ರೂ. ಪರಿಹಾರ ದೊರೆಯಲಿದೆ. 

ರೈತರು ಬೇಡಿಕೆಗೆ ಅನುಗುಣವಾಗಿ ಬೆಳೆ ಬೆಳೆಯಬೇಕು. ಎಲ್ಲರೂ ಒಂದೇ ತರಹದ ಬೆಳೆ ಬೆಳೆಯುವ ಬದಲಾಗಿ
ಬೆಂಡೆಕಾಯಿ, ನುಗ್ಗೆಕಾಯಿ, ಆಲೂಗಡ್ಡೆ, ಮೆಣಸಿನಕಾಯಿ, ಕೋಸು ಮತ್ತಿತರ ತರಕಾರಿ ಬೆಳೆದರೆ ಈ ಉತ್ತಮ
ಧಾರಣೆ ದೊರೆಯಲಿದೆ. ಈ ರೀತಿ ನಷ್ಟ ಸಂಭವಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.