ಆರು ಬೋಗಿ ಮೆಟ್ರೋಗೆ ಮುಗಿಬಿದ್ದ ಪ್ರಯಾಣಿಕರು


Team Udayavani, Jun 24, 2018, 11:05 AM IST

6bhogi.jpg

ಬೆಂಗಳೂರು: “ನಮ್ಮ ಮೆಟ್ರೋ’ ನಿಲ್ದಾಣಗಳಲ್ಲಿ ನಿತ್ಯ 40ಕ್ಕೂ ಹೆಚ್ಚು ರೈಲುಗಳು ಸಂಚರಿಸುತ್ತವೆ. ಆದರೆ, ಶನಿವಾರ ಬಹುತೇಕ ಪ್ರಯಾಣಿಕರ ದೃಷ್ಟಿ ನೆಟ್ಟಿದ್ದು ಮಾತ್ರ ಅದೊಂದೇ ರೈಲಿನ ಮೇಲೆ! ಆ ರೈಲು ಪ್ಲಾಟ್‌ಫಾರಮ್‌ಗೆ ಬಂದು ನಿಲ್ಲುತ್ತಿದ್ದಂತೆ ಪ್ರಯಾಣಿಕರು ರೈಲು ಏರಲು ಮುಗಿಬೀಳುತ್ತಿದ್ದರು!

ಶುಕ್ರವಾರವಷ್ಟೇ ಕಾರ್ಯಾಚರಣೆ ಆರಂಭಿಸಿದ ಆರು ಬೋಗಿಗಳ ಮೆಟ್ರೋ ರೈಲು ಮೊದಲ ದಿನ ಪ್ರಯಾಣಿಕರ ಗಮನಸೆಳೆಯಿತು. ಅದೇ ರೈಲಿಗಾಗಿ ಪ್ರಯಾಣಿಕರು ಕಾದುಕುಳಿತಿದ್ದರು. ಅತಿ ಉದ್ದದ ಮೆಟ್ರೋದಲ್ಲಿ ಮೊದಲ ದಿನವೇ ಸಂಚರಿಸಿ ಖುಷಿಪಟ್ಟರು.

ಆರು ಬೋಗಿಗಳ ಮೆಟ್ರೋ ರೈಲಿನ ಪ್ರಯಾಣ ನಗರದ ಜನರ ಬಹುದಿನಗಳ ನಿರೀಕ್ಷೆಯಾಗಿತ್ತು. ಹೀಗಾಗಿ ರೈಲಿನ ಸಾಮರ್ಥ್ಯ ದುಪ್ಪಟ್ಟಾಗಿದ್ದರೂ “ಪೀಕ್‌ ಅವರ್‌’ನಲ್ಲಿ ತುಂಬಿತುಳುಕುತ್ತಿತ್ತು. ಸುಮಾರು ಆರು ತಿಂಗಳಿಂದ ಈ ರೈಲಿನ ಬಗ್ಗೆ ಬರೀ ಸುದ್ದಿಗಳನ್ನು ಕೇಳುತ್ತಿದ್ದರು. ಈಗ ಅದು ಆಚರಣೆಗೆ ಬಂದಿದ್ದು ಕುತೂಹಲವನ್ನು ಇಮ್ಮಡಿಗೊಳಿಸಿತ್ತು.

ಈ ಹಿನ್ನೆಲೆಯಲ್ಲಿ ಮೊದಲ ದಿನ ಆರು ಬೋಗಿಯ ಮೆಟ್ರೋ ರೈಲು ಬೈಯಪ್ಪನಹಳ್ಳಿಯಿಂದ ನಾಯಂಡಹಳ್ಳಿ ನಡುವೆ ಆರು ಟ್ರಿಪ್‌ಗ್ಳಲ್ಲಿ ಕಾರ್ಯಾಚರಣೆ ಮಾಡಿದೆ. ಸುಮಾರು 15,600 ಪ್ರಯಾಣಿಕರು ಈ ರೈಲಿನಲ್ಲಿ ಸಂಚರಿಸಿದ್ದು, ಅಂದಾಜು 7 ಲಕ್ಷ ರೂ. ಆದಾಯ ಸಂಗ್ರಹವಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಸಾಮಾನ್ಯವಾಗಿ ಮೂರು ಬೋಗಿಯ ಒಂದು ಮೆಟ್ರೋ ರೈಲು ನಿತ್ಯ 7 ಟ್ರಿಪ್‌ಗ್ಳಲ್ಲಿ ಸಂಚರಿಸುತ್ತದೆ. ಇದರಲ್ಲಿ ಸುಮಾರು 7 ಸಾವಿರ ಜನ ಪ್ರಯಾಣಿಸುತ್ತಿದ್ದು, ಅಂದಾಜು 3.5 ಲಕ್ಷ ರೂ. ಆದಾಯ ಸಂಗ್ರಹ ಆಗುತ್ತದೆ. ಆದರೆ, ರೈಲಿನ ಸಾಮರ್ಥ್ಯ ದುಪ್ಪಟ್ಟಾಗಿದ್ದರಿಂದ ಪ್ರಯಾಣಿಕರ ಸಂಖ್ಯೆ ಕೂಡ ಹೆಚ್ಚಳ ಆಗಿದೆ ಎಂದು ನಿಗಮದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯು.ಎ. ವಸಂತರಾವ್‌ ಹೇಳಿದರು.

ಕುತೂಹಲ ತಣಿಸಿತು: “ಆರು ಬೋಗಿ ರೈಲಿನ ಬಗ್ಗೆ ಹಲವು ತಿಂಗಳಿಂದ ಟಿವಿ, ರೇಡಿಯೊ, ಪತ್ರಿಕೆಗಳಲ್ಲಿ ಸುದ್ದಿ ಓದುವುದು, ನೋಡುವುದೇ ಆಗಿತ್ತು. ಈಗ ಆ ರೈಲು ಕಾರ್ಯಾಚರಣೆ ನಡೆಸುತ್ತಿದೆ. ಇದು ಸಹಜವಾಗಿಯೇ ಕುತೂಹಲ ಮೂಡಿಸಿತ್ತು. ಕಚೇರಿಗೆ ರಜೆ ಇದ್ದರೂ, ಮೊದಲ ದಿನ ಈ ರೈಲಿನಲ್ಲಿ ಪ್ರಯಾಣಿಸಬೇಕು ಎಂಬ ಉದ್ದೇಶದಿಂದಲೇ ಬಂದಿದ್ದೇನೆ. ಮೂರು ಬೋಗಿಯ ಮೆಟ್ರೋಗಿಂತ ಇದೇನೂ ಭಿನ್ನವಾಗಿಲ್ಲ. ಆದರೂ ಖುಷಿ ಆಗುತ್ತಿದೆ,’ ಎಂದವರು ವಿಜಯನಗರದ ಹರ್ಷ.

“ಎರಡು ಬೋಗಿ ಮಹಿಳೆಯರಿಗಿರಲಿ’: “ಪ್ರಯಾಣಿಕರ ದಟ್ಟಣೆ ತಗ್ಗಿಸಲು ಆರು ಬೋಗಿಗಳ ಮೆಟ್ರೋ ರೈಲು ನಿಜಕ್ಕೂ ಪರಿಹಾರ ಆಗಲಿದೆ. ಮೊದಲ ಬೋಗಿ ಮಹಿಳೆಯರಿಗೆ ಮೀಸಲಿಟ್ಟಿರುವುದು ಸ್ವಾಗತಾರ್ಹ. ಆದರೆ, ಇದನ್ನು ಎರಡು ಬೋಗಿಗಳಿಗೆ ವಿಸ್ತರಿಸುವ ಅವಶ್ಯಕತೆ ಇದೆ.

ಮೊದಲ ದಿನ ವಾರಾಂತ್ಯವಾದರೂ ಎಲ್ಲ ಬೋಗಿಗಳು ತುಂಬಿತುಳುಕುತ್ತಿವೆ. ಮಹಿಳೆಯರು ನಿರಾತಂಕವಾಗಿ ಹಾಗೂ ಆರಾಮವಾಗಿ ಪ್ರಯಾಣಿಸಲು ಎರಡು ಬೋಗಿ ಮೀಸಲಿಡುವುದು ಅತ್ಯಗತ್ಯ,’ ಎಂದು ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಮೆಟ್ರೋ ಏರಿದ ರೂಪಿಣಿ ಹೇಳಿದರು.

ದೂರದೃಷ್ಟಿ ಕೊರತೆ: “ಈಗಷ್ಟೇ ಕೇವಲ ಒಂದು ರೈಲು ಆರು ಬೋಗಿಗಳಿಗೆ ವಿಸ್ತರಣೆ ಆಗಿದೆ. ಆದರೆ, ಇದು ಯಾವುದಕ್ಕೂ ಸಾಕಾಗುವುದಿಲ್ಲ. ಇಷ್ಟೊತ್ತಿಗಾಗಲೇ ಎಲ್ಲ ರೈಲುಗಳು ಆರು ಬೋಗಿಗಳಾಗಿ ಪರಿವರ್ತನೆ ಆಗಬೇಕಿತ್ತು. ಮೊದಲ ಹಂತದ ಅನುಷ್ಠಾನ ಆಗುವಾಗಲೇ ಎರಡನೇ ಹಂತದ ಯೋಜನೆಯನ್ನು ಬಿಎಂಆರ್‌ಸಿಎಲ್‌ ಸಿದ್ಧಗೊಳಿಸಿದೆ.

ಈಗಿರುವ ಎಂಜಿನ್‌ಗಳೂ ಆರು ಬೋಗಿಗಳನ್ನು ತೆಗೆದುಕೊಂಡು ಹೋಗುವಷ್ಟು ಸಾಮರ್ಥ್ಯ ಹೊಂದಿವೆ. ಹಾಗಿದ್ದರೆ, ಮೊದಲೇ ಹೆಚ್ಚುವರಿ 150 ಬೋಗಿಗಳ ಪೂರೈಕೆಗೆ ನಿಗಮ ಯಾಕೆ ಯೋಚಿಸಲಿಲ್ಲ? ಇದರಿಂದ ನಿರ್ಮಾಣ ವೆಚ್ಚವನ್ನೂ ತಗ್ಗಿಸಬಹುದಿತ್ತಲ್ಲವೇ,’ ಎಂದು ಎಂಜಿನಿಯರ್‌ ಸುನೀಲ್‌ ಪ್ರಶ್ನಿಸುತ್ತಾರೆ.

ಟಾಪ್ ನ್ಯೂಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.