ಅಪಹರಣ, ಕೊಲೆ ಯತ್ನ: ಮೂವರ ಸೆರೆ


Team Udayavani, Jun 26, 2018, 12:11 PM IST

apaharana.jpg

ಬೆಂಗಳೂರು: ಕಳೆದ ತಿಂಗಳು ನಡೆದ ಬಿಲ್ಡರ್‌ ಮಸೂದ್‌ ಅಲಿ ಅಪಹರಣ ಯತ್ನ ಪ್ರಕರಣ ಸಂಬಂಧ ಈ ಹಿಂದೆ ನಾಲ್ವರನ್ನು ಬಂಧಿಸಿದ್ದ ಪುಲಿಕೇಶಿನಗರ ಪೊಲೀಸರು, ಮತ್ತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತರ ಪ್ರದೇಶ ಮೂಲದ ಶಬಾಜ್‌ ಆಜಾದ್‌ ಅಲಿಯಾಸ್‌ ಶಾನ್‌(29), ಫ‌ುರಖಾನ್‌ (30), ನಿತಿನ್‌ ಶರ್ಮಾ (31) ಬಂಧಿತರು.

ಇವರಿಂದ ಮೂರು ನಾಡ ಪಿಸ್ತೂಲ್‌ ಹಾಗೂ ನಾಲ್ಕು ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.  ಜೂ.8ರಂದು ಪ್ರಕರಣದ ಪ್ರಮುಖ ಆರೋಪಿ ಮಾಸ್ಟರ್‌ ಮೈಂಡ್‌ ಪುಲಕೆಶಿನಗರದ ಶೇಖ್‌ ಜುಬೆರ್‌(36) ಮತ್ತು ಈತನ ಸಹಚರರಾದ ಎನ್‌.ಮೆಹ್ತಾಬ್‌ (29), ನಿಯಮತುಲ್ಲ (30), ಸೈಯ್ಯದ್‌ ಇಸ್ರಾರ್‌(31)ರನ್ನು ಬಂಧಿಸಲಾಗಿತ್ತು.

ಮಾಸ್ಟರ್‌ ಮೈಂಡ್‌ ಶೇಖ್‌ ಜುಬೇರ್‌ ಸಂಬಂಧಿಯೊಬ್ಬರು ಉದ್ಯಮಿ ಮಸೂದ್‌ ಅಲಿ ಅವರಿಂದ ಫ್ಲಾಟ್‌ವೊಂದನ್ನು ಖರೀದಿಸಿದ್ದರು. ಆಗ ಪರಿಚಯವಾದ ಜುಬೇರ್‌ ಆಗ್ಗಾಗ್ಗೆ ಮಸೂದ್‌ ಅಲಿ ಮನೆಗೆ ಹೋಗುತ್ತಿದ್ದ. ಈ ವೇಳೆ ಮಸೂದ್‌ ಅಲಿ ಬಳಿಯಿರುವ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಬಗ್ಗೆ ತಿಳಿದುಕೊಂಡಿದ್ದ.

ಈ ಹಿನ್ನೆಲೆಯಲ್ಲಿ ಅಲಿ ಅವರನ್ನು ಅಪಹರಿಸಿ 5 ಕೋಟಿ ರೂ.ಗೆ ಬೇಡಿಕೆ ಇಡಲು ತೀರ್ಮಾನಿಸಿದ್ದ. ಅದರಂತೆ ಮೂರು ತಿಂಗಳ ಹಿಂದೆ ತನ್ನ ಮನೆಯಲ್ಲಿಯೇ ಇತರೆ ಆರೋಪಿಗಳ ಜತೆ ಸೇರಿ ಅಪಹರಣಕ್ಕೆ ಸಂಚು ರೂಪಿಸಿದ್ದ. ಬಳಿಕ ಮಸೂದ್‌ ಅಲಿಯ ಪ್ರತಿ ಚಲನವಲನಗಳ ಬಗ್ಗೆ ನಿಗಾವಹಿಸಿದ್ದು, ನಿತ್ಯ ಓಡಾಡುವ ರಸ್ತೆ ಹಾಗೂ ಕಚೇರಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು.

ನಾಡ ಪಿಸ್ತೂಲ್‌: ಉತ್ತರ ಪ್ರದೇಶದಿಂದ ಕೆಲಸ ಅರಸಿಕೊಂಡು ನಗರಕ್ಕೆ ಬಂದಿದ್ದ ಶಬಾಜ್‌ ಶೇಖ್‌ ಜುಬೇರ್‌ ಕೆಲಸ ಮಾಡುವ ಸ್ಥಳದಲ್ಲಿ ಪಿಓಪಿ ಕೆಲಸ ಮಾಡುತ್ತಿದ್ದ. ಈ ವೇಳೆ ಶಬಾಜ್‌ಗೆ ಉತ್ತರ ಪ್ರದೇಶದಲ್ಲಿ ನಾಡ ಪಿಸ್ತೂಲ್‌ ಮಾರಾಟಗಾರರ ಪರಿಚಯವಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ ಶೇಖ್‌ ಹಣದ ಆಸೆ ತೋರಿಸಿ ಕೃತ್ಯಕ್ಕೆ ಸಹಕಾರ ನೀಡುವಂತೆ ಕೇಳಿಕೊಂಡಿದ್ದ.

ಇದಕ್ಕೆ ಒಪ್ಪಿದ ಶಬಾಜ್‌ಗೆ ಶೇಖ್‌ ಜುಬೇರ್‌ ಪಿಸ್ತೂಲ್‌ ಖರೀದಿ ಹಾಗೂ ಸಹಾಯಕ್ಕೆ ಇತರರನ್ನು ಉತ್ತರಪ್ರದೇಶದಿಂದ ಕರೆ ತರಲು ಈತನ ಖಾತೆಗೆ 80 ಸಾವಿರ ರೂ. ಹಣ ಜಮೆ ಮಾಡಿದ್ದ. ಹೀಗಾಗಿ ಉತ್ತರ ಪ್ರದೇಶದ ಮುಜಾಫರ್‌ ನಗರದಲ್ಲಿ 5-6 ಸಾವಿರ ರೂ.ಗೆ 3 ಪಿಸ್ತೂಲ್‌ ಮತ್ತು ಹತ್ತಾರು ಗುಂಡುಗಳನ್ನು ಖರೀದಿಸಿ, ತನ್ನ ಸ್ನೇಹಿತರಾದ ಫರ್ಖಾನ್‌ ಮತ್ತು ನಿತಿನ್‌ ಶರ್ಮಾನನ್ನು ನಗರಕ್ಕೆ ಕರೆದುಕೊಂಡು ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಅನಂತರ ಮೊದಲೇ ಸಂಚು ರೂಪಿಸಿದಂತೆ ಮೇ 21ರಂದು ಅಪಹರಣಕ್ಕೆ ಸಂಚು ರೂಪಿಸಿ ಅಂದು ಮನೆಯಿಂದ ಸೆಂಟ್‌ ಮಾರ್ಕ್ಸ್ ರಸ್ತೆಯಲ್ಲಿರುವ ಪಿಠೊಪಕರಣ ಅಂಗಡಿಗೆ ಹೋಗುವಾಗ ಆಸಾಯ್‌ ರಸ್ತೆ ಮಾರ್ಗದಲ್ಲಿ ಮಸೂದ್‌ ಅಲಿಯನ್ನು ಅಡ್ಡಗಟ್ಟಿದ್ದಾರೆ. ಬಳಿಕ ಅವರ ಕಾರಿನಲ್ಲೇ ಅಪಹರಣಕ್ಕೆ ಯತ್ನಿಸಿದ್ದಾರೆ. ಆದರೆ, ಮಸೂದ್‌ ಅಲಿ ಪ್ರತಿರೋಧ ವ್ಯಕ್ತಪಡಿಸಿದಾಗ ಆರೋಪಿಗಳು ತಮ್ಮ ಬಳಿಯಿದ್ದ ಪಿಸ್ತೂಲ್‌ನಿಂದ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.