ಎಲ್ಲೆಮಾಳದಲ್ಲಿ ಪ್ರಕೃತಿ ಮಾಹಿತಿ ಕೇಂದ್ರ


Team Udayavani, Jul 5, 2018, 11:36 AM IST

hqdefault.jpg

ಚಾಮರಾಜನಗರ: ಸ್ಥಳೀಯ ಪ್ರಾಣಿ, ಪಕ್ಷಿ, ಸಸ್ಯಗಳನ್ನು ಪರಿಚಯಿಸುವ ಸದುದ್ದೇಶದಿಂದ ಕಾಡಂಚಿನ ಮಕ್ಕಳು, ವಿದ್ಯಾರ್ಥಿಗಳು, ಸ್ಥಳೀಯರನ್ನು ಕೇಂದ್ರವಾಗಿಟ್ಟುಕೊಂಡು ರಾಜ್ಯದಲ್ಲೇ ಪ್ರಥಮ ಬಾರಿಗೆ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಎಲ್ಲೆಮಾಳದಲ್ಲಿ ಪ್ರಕೃತಿ ಮಾಹಿತಿ ಕೇಂದ್ರ ಸ್ಥಾಪಿಸಲಾಗಿದೆ.

ನೇಚರ್‌ ಕನ್ಸರ್ವೇಷನ್‌ ಫೌಂಡೇಷನ್‌ ಸಂಸ್ಥೆ, ನಿಸರ್ಗ ಸಂರಕ್ಷಣೆಗಾಗಿ ಅಂತಾರಾಷ್ಟ್ರೀಯ ಒಕ್ಕೂಟ ಮತ್ತು ಜರ್ಮನ್‌ ಸರ್ಕಾರ ಬೆಂಬಲಿತ ಇಂಟಿಗ್ರೇಟೆಡ್‌ ಟೈಗರ್‌ ಹ್ಯಾಬಿಟಾಟ್‌ ಕನ್ಸರ್ವೇಷನ್‌ ಪ್ರಾಜೆಕ್ಟ್ ಅಡಿಯಲ್ಲಿ ಮಾಹಿತಿ ಕೇಂದ್ರವನ್ನು ಅಭಿವೃದ್ಧಿಪಡಿಸಲಾಗಿದೆ. 

ಹೊಳೆಮತ್ತಿ ಎಂದರೇನು?: ಕಾವೇರಿ, ಪಾಲಾರ್‌ ನದಿ, ಉಡತೊರೆಹಳ್ಳ, ದೊಡ್ಡಹಳ್ಳ ಮತ್ತು ಇತರ ನದಿ ಪಾತ್ರಗಳಲ್ಲಿ ಮಾತ್ರ ಬೆಳೆಯುವ ಸುಂದರ, ಬೃಹತ್‌ ಮರವಾದ ಹೊಳೆಮತ್ತಿಯ ಹೆಸರನ್ನೇ ಈ ಮಾಹಿತಿ ಕೇಂದ್ರಕ್ಕಿಡಲಾಗಿದೆ. ಈ ಮರ, ನಮ್ಮ ನದಿ ಮತ್ತು ನೀರಿನ ಸಂಕೇತವಾಗಿದೆ ಹಾಗೂ ಚಾಮರಾಜನಗರ ಜಿಲ್ಲೇಯ ಕೆಲ ಭಾಗಗಳಲ್ಲಿ ಯಥೇತ್ಛವಾಗಿ ಬೆಳೆಯುವುದರಿಂದ ಈ ಮಾಹಿತಿ ಕೇಂದ್ರಕ್ಕೆ ಹೊಳೆಮತ್ತಿ ಹೆಸರಿಡಲಾಗಿದೆ.

ಮಾಹಿತಿ ಕೇಂದ್ರದಲ್ಲಿ ಸ್ಥಳೀಯ ಪ್ರಾಣಿ ಪಕ್ಷಿ, ಮರಗಿಡ, ಕೀಟ, ಮಲೈ ಮಹದೇಶ್ವರ ವನ್ಯಜೀವಿ ಧಾಮದಲ್ಲಿರುವ ವಿವಿಧ ಆವಾಸಗಳು (ಕುರುಚಲು ಕಾಡು, ಎಲೆ ಉದುರುವ ಕಾಡುಗಳು ಮತ್ತು ಅರೆ-ನಿತ್ಯ ಹರಿದ್ವರ್ಣದ ಕಾಡುಗಳು), ಕೀಟ-ಸಸ್ಯ ಸಂಬಂಧ ಹೀಗೆ ಎಲ್ಲ ವಿಚಾರಗಳನ್ನು ಕಲಾತ್ಮಕವಾಗಿ ಪ್ರದರ್ಶಿಸಲಾಗಿದೆ. ಅದರೊಂದಿಗೆ ಮಕ್ಕಳಿಗೆ ನಿಸರ್ಗದ ಬಗ್ಗೆ ಅರಿವು ಮೂಡಿಸುವ ಆಟಗಳು ಹೀಗೆ ಹಲವಾರು ವಿಷಯಗಳ ಬಗೆಗಿನ ವೈಜ್ಞಾನಿಕ ಮಾಹಿತಿಯನ್ನು ಎಲ್ಲರಿಗೂ ತಿಳಿಯುವ ರೀತಿಯಲ್ಲಿ ಕನ್ನಡದಲ್ಲಿ ನೀಡಲಾಗಿದೆ.

ರಾಜ್ಯದಲ್ಲೇ ಅತಿ ಹೆಚ್ಚು ಹುಲಿ ಮತ್ತು ಆನೆಗಳಿರುವ ಹೆಗ್ಗಳಿಕೆ ಚಾಮರಾಜನಗರ ಜಿಲ್ಲೇಗಿದೆ. ಆದುದರಿಂದ ಈ ಎರಡು ವನ್ಯಜೀವಿಗಳ ಬಗ್ಗೆ ತರಕರಡಿ, ನೀರು ನಾಯಿ, ಉರುಗಲು ಮರ, ಕಾಡಿನಲ್ಲಿ ಸಿಗುವ ಸೊಪ್ಪಿನ ಪ್ರಭೇದಗಳು ಹೀಗೆ ಹಲವು ಪ್ರಾಣಿಪಕ್ಷಿ, ಸಸ್ಯಸಂಕುಲದ ಮಾಹಿತಿ ಒದಗಿಸಲಾಗಿದೆ. ಜೊತೆಗೆ ವನ್ಯಜೀವಿಗಳ ಜೀವನಕ್ರಮವನ್ನು ಸರಳವಾಗಿ ಕಥೆಗಳ ಮೂಲಕ ವಿವರಿಸುವ ಪ್ರಯತ್ನ ಮಾಡಲಾಗಿದೆ. 

ಸಂಜಯ್‌ ಗುಬ್ಬಿ ಪರಿಕಲ್ಪನೆ ಯೋಜನೆಯ ಪರಿಕಲ್ಪನೆ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಮತ್ತು ವನ್ಯಜೀವಿ ವಿಜ್ಞಾನಿ ಸಂಜಯ್‌ ಗುಬ್ಬಿಯವರದು. ಅವರ ನೇತೃತ್ವದಲ್ಲಿ ಈ ಮಾಹಿತಿ ಕೇಂದ್ರ ಅಭಿವೃದ್ಧಿಪಡಿಸಿದೆ.

ನಿಸರ್ಗ ಚಿತ್ರ ಕಲಾವಿದೆ ಸಂಗೀತಾ ಈ ಮಾಹಿತಿ ಕೇಂದ್ರಕ್ಕೆ ವಿನ್ಯಾಸ ರೂಪಿಸಿದ್ದಾರೆ. ಅವರೊಂದಿಗೆ ಅಭಿಷೇಕ್‌, ಕೃಷ್ಣ ಗೋಪಾಲ…, ಶಿಲ್ಪಶ್ರೀ, ಸರ್ತಾಜ್‌ ಘುಮನ, ಅವಿನಾಶ್‌, ಅಭಿಜ್ಞಾ ದೇಸಾಯಿ, ವನ್ಯಾ ಜೋಸೆಫ್ ಮತ್ತಿತರ ಚಿತ್ರ ಕಲಾವಿದರು ಹಾಗೂ ಸ್ಥಳೀಯರು ಕೈಜೋಡಿಸಿದ್ದಾರೆ.  

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.