ರೇವಣ್ಣ “ಕುರ್ಚಿ’ ಕಾಲೆಳೆದ ಬಿಜೆಪಿ


Team Udayavani, Jul 5, 2018, 11:54 AM IST

blore-4.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಕೇಂದ್ರ ಬಿಂದುವಾಗಿರುವ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ವಿಧಾನಸಭೆಯಲ್ಲಿ ತಮಗೆ ನೀಡಿದ ಆಸನದಲ್ಲಿ ಕುಳಿತುಕೊಳ್ಳದೇ ಇರುವ ವಿಷಯ ಸ್ವಾರಸ್ಯಕರ ಚರ್ಚೆಗೆ ಕಾರಣವಾಯಿತು.

ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಬಿಜೆಪಿಯ ಜಗದೀಶ್‌ ಶೆಟ್ಟರ್‌ ಮಾತನಾಡಿ, ಅಧಿವೇಶನ 10 ದಿನದ ಬದಲು 9 ದಿನ ಮಾಡಿದ್ದಾರೆ. ಇದರ ಹಿಂದೆ ರೇವಣ್ಣ ಅವರ ಜ್ಯೋತಿಷಿಗಳ ಸಲಹೆ ಇರಬಹುದು ಎಂದರು.

ಮಧ್ಯಪ್ರವೇಶಿಸಿದ ಬಿಜೆಪಿಯ ಜೆ.ಸಿ.ಮಾಧುಸ್ವಾಮಿ, ರೇವಣ್ಣ ಇದುವರೆಗೂ ಅವರಿಗೆ ನೀಡಿದ ಆಸನದಲ್ಲಿ ಕುಳಿತುಕೊಂಡಿಲ್ಲ. ಅಲ್ಲಿಯೂ ಏನಾದರೂ ವಾಸ್ತು ದೋಷವಿದೆಯೇ ಎಂಬುದನ್ನು ಸಭಾಧ್ಯಕ್ಷರು ಪರಿಶೀಲಿಸಬೇಕು ಎಂದರು. ಪ್ರತಿಕ್ರಿಯಿಸಿದ ಸ್ಪೀಕರ್‌ ರಮೇಶ್‌ ಕುಮಾರ್‌, ಸದನದಲ್ಲಿ ಹಿರಿತನದ ಆಧಾರದಲ್ಲಿ ಕುರ್ಚಿ ಹಂಚಲಾಗಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ನಂತರ ಕಾನೂನು ಸಂಸದೀಯ ವ್ಯವಹಾರಗಳ ಸಚಿವರಿಗೆ ಅವಕಾಶ ನೀಡಲಾಗುತ್ತದೆ. ಆದರೆ, ದೇಶಪಾಂಡೆ ಹಾಗೂ ಡಿ.ಕೆ.ಶಿವಕುಮಾರ್‌ ಹಿರಿಯ ಸದಸ್ಯರಾಗಿರುವುದರಿಂದ ಅವರಿಗೆ ಮೊದಲು ಕುರ್ಚಿ ಹಂಚಿಕೆ ಮಾಡಿ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡಗೆ ಅವಕಾಶ ಕಲ್ಪಿಸಲಾಗಿದೆ. ಅವರ ನಂತರದ ಸ್ಥಾನದಲ್ಲಿ ರೇವಣ್ಣಗೆ ಕುರ್ಚಿ ಹಂಚಲಾಗಿದೆ. ಅವರಿಗೆ ಬೇಸರವಿದ್ದರೆ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಚರ್ಚಿಸಿ ಹೇಳಿದರೆ ಹಿರಿಯ ನಾಯಕರ ಪಕ್ಕದಲ್ಲಿ ಸ್ಥಳಾವಕಾಶ ಮಾಡಿಕೊಡಲಾಗುವುದು ಎಂದರು.

ಈ ವೇಳೆ ರೇವಣ್ಣ ಸದನದಲ್ಲಿ ಹಾಜರಿರಲಿಲ್ಲ. ನಂತರ ಸದನಕ್ಕೆ ಆಗಮಿಸಿದ ಎಚ್‌.ಡಿ.ರೇವಣ್ಣ ತಮಗೆ ಮೀಸಲಾಗಿದ್ದ ಕುರ್ಚಿಯಲ್ಲಿ ಕೂಡದೇ ಬೇರೆಯವರಿಗೆ ಮೀಸಲಾಗಿದ್ದ ಕುರ್ಚಿಯಲ್ಲಿ ಕುಳಿತುಕೊಂಡರು. ಇದನ್ನು ಗಮನಿಸಿದ ಮಾಧುಸ್ವಾಮಿ, ಸಭಾಧ್ಯಕ್ಷರೇ, ರೇವಣ್ಣ ಬೇರೆ ಕುರ್ಚಿಯಲ್ಲಿ ಕುಳಿತಿದ್ದಾರೆ ಎಂದಾಗ, ರೇವಣ್ಣ ತಮಗೆ ಮೀಸಲಿಟ್ಟ ಕುರ್ಚಿಯಲ್ಲಿ ಕುಳಿತುಕೊಳ್ಳದಿರುವುದಕ್ಕೆ ಕಾರಣ ಹೇಳಬೇಕೆಂದು ಬಿಜೆಪಿ ಸದಸ್ಯರು ಆಗ್ರಹಿಸಿದರು.

ವಾಸ್ತು ಸರಿಯಾಗೇ ಇದೆ: ರೇವಣ್ಣ ತಮಗೆ ಮೀಸಲಿಟ್ಟ ಆಸನದಲ್ಲಿ ಕುಳಿತುಕೊಳ್ಳದ ಬಗ್ಗೆ ಬೆಳಗ್ಗೆಯೂ ಚರ್ಚೆ ನಡೆಯಿತು. ಕೊನೆಯ ಸಾಲಿನಲ್ಲಿ ರೇವಣ್ಣ ಕುಳಿತಿದ್ದುದನ್ನು ಗಮನಿಸಿದ ಸ್ಪೀಕರ್‌, ಮೀಸಲಿಟ್ಟ ಸ್ಥಾನಕ್ಕೆ ಹೋಗುವಂತೆ ಸಲಹೆ ಮಾಡಿದರು. ಆದರೆ, ನನಗೆ ಹಿಂದಿನ ಸಾಲಿನಲ್ಲೇ ಕುರ್ಚಿ ಕೊಡಿ ಎಂದು ರೇವಣ್ಣ ಕೇಳಿದಾಗ, ಅದೆಲ್ಲಾ ಸಾಧ್ಯವಿಲ್ಲ. ನಿಮಗೆ ಕೊಟ್ಟಿರುವ ಸ್ಥಾನ ವಾಸ್ತು ಪ್ರಕಾರವೇ ಇದೆ. ಅಲ್ಲೇ ಕುಳಿತುಕೊಳ್ಳಿ ಎಂದರು.

ಸಿದ್ದು ದನಿ ಮಿಮಿಕ್ರಿ ಮಾಡಿದ್ದಾರೆ: ಅಪ್ಪಾಜಿಗೌಡ
ವಿಧಾನ ಪರಿಷತ್ತು: ಧರ್ಮಸ್ಥಳದ ಶಾಂತಿವನದಲ್ಲಿ ಸಮ್ಮಿಶ್ರ ಸರ್ಕಾರದ ಬಗ್ಗೆ ಹೊರಬಂದ ವಿಡಿಯೋದಲ್ಲಿ ಇರುವುದು ಸಿದ್ದರಾಮಯ್ಯ ಅವರ ಧ್ವನಿ ಅಲ್ಲ, ಯಾರೋ ಮಿಮಿಕ್ರಿ ಮಾಡಿ ವಿಡಿಯೋ ಬಿಡುಗಡೆ ಮಾಡಿದ್ದಾರೆ ಎಂದು ಜೆಡಿಎಸ್‌ ಸದಸ್ಯ ಅಪ್ಪಾಜಿಗೌಡ ಹೇಳಿದರು.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, 37 ಸ್ಥಾನ ಗೆದ್ದರೂ ಪ್ರಜಾಪ್ರಭುತ್ವದಲ್ಲಿ ಇರುವ ಅವಕಾಶವನ್ನು ಬಳಸಿಕೊಂಡು ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ. ಈ ಸರ್ಕಾರ 5 ವರ್ಷ ಸುಭದ್ರವಾಗಿರುತ್ತದೆ. ಅಸೂಯೆ ಬಿಟ್ಟು ರಚನಾತ್ಮಕ ಪ್ರತಿಪಕ್ಷವಾಗಿ ಕೆಲಸ ಮಾಡಿ ಎಂದು ಬಿಜೆಪಿಯವರಿಗೆ ಕಿವಿಮಾತು ಹೇಳಿದರು.

ನಾವು ಅಸೂಯೆ ಪಟ್ಟುಕೊಳ್ಳುತ್ತಿಲ್ಲ. ಸರ್ಕಾರದ ಅಸ್ತಿತ್ವ, ಆಯಸ್ಸು ಮತ್ತು ಬಜೆಟ್‌ ಮಂಡನೆ ಬಗ್ಗೆ ಶಾಂತಿವನದಲ್ಲಿ ಸಿದ್ದರಾಮಯ್ಯನವರೇ ಹೇಳಿದ್ದಾರೆ ಎಂದು ಬಿಜೆಪಿ ಸದಸ್ಯರು ತಿರುಗೇಟು ನೀಡಿದರು. “ಅದು ಸಿದ್ದರಾಯ್ಯನವರ ಧ್ವನಿ ಅಲ್ಲ, ಯಾರೋ ಮಿಮಿಕ್ರಿ ಮಾಡಿ ವಿಡಿಯೋ ರಿಲೀಸ್‌ ಮಾಡಿದ್ದಾರೆ ಎಂದು ಅಪ್ಪಾಜಿಗೌಡ ಹೇಳುತ್ತಿದ್ದಂತೆ ಬಿಜೆಪಿ ಸದಸ್ಯರೆಲ್ಲರೂ ಜೋರಾಗಿ ನಕ್ಕರು.

ಶಾಸಕರ ಭವನಕ್ಕೆ ಸಮಯ ನಿಗದಿಗೆ ಸ್ಪೀಕರ್‌ ಸಮರ್ಥನೆ ಶಾಸಕರ ಭವನಕ್ಕೆ ಸಾರ್ವಜನಿಕರ ವಾಹನ ಮತ್ತು ಸಾರ್ವಜನಿಕರ ಪ್ರವೇಶಕ್ಕೆ ಸಮಯ ನಿಗದಿ ಮಾಡಿರುವ ನಿರ್ಬಂಧ ತೆರವುಗೊಳಿಸುವಂತೆ ಶಾಸಕರ ಕೋರಿಕೆಯನ್ನು ಸ್ಪೀಕರ್‌ ರಮೇಶ್‌ಕುಮಾರ್‌ ತಳ್ಳಿಹಾಕಿದ್ದಾರೆ. ಬುಧವಾರ ಈ ಕುರಿತಂತೆ ಶಾಸಕರು ಮಾಡಿಕೊಂಡ ಮನವಿಗೆ ಪ್ರತಿಕ್ರಿಯಿಸಿದ ಸ್ಪೀಕರ್‌, ಶಾಸಕರ ಭವನದಲ್ಲಿ ಅನೇಕ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ. 

ಎಲ್ಲವನ್ನೂ ಗಮನದಲ್ಲಿಟ್ಟುಕೊಂಡೇ ನಿರ್ಬಂಧ ಹೇರಿದ್ದೇನೆ. ಜನಪ್ರತಿನಿಧಿಗಳಾದ ನಮಗೆ ಖಾಸಗಿತನ ಇರಬೇಕು. ಹಾಗಾಗಿ ಜನರು ಬೆಳಗ್ಗೆ 9 ಗಂಟೆ ನಂತರ ಬಂದರೆ ತೊಂದರೆಯಿಲ್ಲ ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಟಾಪ್ ನ್ಯೂಸ್

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.