ಸಿಲಿಂಡರ್ ಸ್ಫೋಟ: ಯುವಕನಿಗೆ ಗಾಯ
Team Udayavani, Jul 9, 2018, 12:12 PM IST
ಬೆಂಗಳೂರು: ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುವಾಗ ಸಿಲಿಂಡರ್ ಸ್ಫೋಟಗೊಂಡು ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ವಿಜಯನಗರದ ಪಟ್ಟೇಗಾರ ಪಾಳ್ಯದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಫೈರೋಜ್ (20) ಗಾಯಗೊಂಡವ.
ಭಾನುವಾರ ಮಧ್ಯಾಹ್ನ 15 ಕೆ.ಜಿ ಸಿಲಿಂಡರ್ ನಿಂದ, ಆಟೋಗೆ ಬಳಸುವ 5 ಕೆ.ಜಿ ಸಿಲಿಂಡರ್ಗೆ ಗ್ಯಾಸ್ ರೀಫಿಲ್ ಮಾಡುವಾಗ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡಿದ್ದು, ಫೈರೋಜ್ನ ಮುಖ, ಕೈ ಹಾಗೂ ಕಾಲಿಗೆ ಗಂಭೀರವಾದ ಗಾಯಗಳಾಗಿವೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ವಿಜಯನಗರದ ಪಟ್ಟೇಗಾರ್ ಪಾಳ್ಯದಲ್ಲಿ ನಿವಾಸಿಯಾಗಿರುವ ಉಮಾಶಂಕರ್ ತಮ್ಮ ಮನೆಯ ನೆಲಮಹಡಿಯಲ್ಲಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಏಜೆನ್ಸಿ ನಡೆಸುತ್ತಿದ್ದಾರೆ. ಈ ಏಜೆನ್ಸಿಯಲ್ಲಿ ಫೈರೋಜ್ ಕೆಲಸ ಮಾಡಿಕೊಂಡಿದ್ದ. ಘಟನೆ ಸಂಬಂಧ ಉಮಾಶಂಕರ್ ವಿರುದ್ಧ ನಿರ್ಲಕ್ಷ್ಯ ಹಾಗೂ ಅಕ್ರಮವಾಗಿ ಸಿಲಿಂಡರ್ ದಾಸ್ತಾನು ಮಾಡಿದ ಆರೋಪದ ಮೇಲೆ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್