ನಿಯಮಗಳ ನೆಪದಲ್ಲಿ ದೌರ್ಜನ್ಯ
Team Udayavani, Jul 20, 2018, 9:55 AM IST
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಹೆಸರಿನಲ್ಲಿ ನಗರ ಸಂಚಾರ ಪೊಲೀಸರು ಆಟೋ ಚಾಲಕರ ಮೇಲೆ ದೌರ್ಜನ್ಯವೆಸಗುತ್ತಿದ್ದಾರೆ ಎಂದು ಆರೋಪಿಸಿ ಪೀಸ್ ಆಟೋ ಮತ್ತು ಟ್ಯಾಕ್ಸಿ ಚಾಲಕರ ಅಸೋಸಿಯೇಷನ್ ಸದಸ್ಯರು ಗುರುವಾರ ಪುರಭವನದ ಎದುರು ಪ್ರತಿಭಟನೆ ನಡೆಸಿದರು.
15 ದಿನಗಳಿಂದ ಸಂಚಾರ ಪೊಲೀಸರು ನಿಯಮ ಉಲ್ಲಂಘನೆ ಆರೋಪದ ಮೇಲೆ ಸಾವಿರಾರು ಆಟೋಗಳನ್ನು ವಶಕ್ಕೆ ಪಡೆದು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ. 2-4 ಸಾವಿರ ರೂ.ವರೆಗೆ ದಂಡವಿಧಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಈ ವೇಳೆ ಮಾತನಾಡಿದ ಅಸೋಸಿಯೇಷನ್ ರಾಜ್ಯಾಧ್ಯಕ್ಷ ರಘು, ನಿಯಮ ಉಲ್ಲಂಘನೆ ಆರೋಪದಡಿ ರಸ್ತೆಗಳಲ್ಲಿ ಆಟೋಗಳನ್ನು ಜಪ್ತಿ ಮಾಡುತ್ತಿದ್ದಾರೆ. ಮೊಬೈಲ್ ಆ್ಯಪ್ ಆಧಾರಿತ ಓಲಾ, ಉಬರ್ ಸಂಸ್ಥೆಗಳ ಅಡಿಯಲ್ಲಿ ಓಡಿಸುತ್ತಿರುವ ಆಟೋಗಳನ್ನು ಗುರಿಯಾಗಿಸಿಕೊಂಡು ಈ ರೀತಿಯ ದೌರ್ಜನ್ಯ ನಡೆಸುತ್ತಿದ್ದಾರೆ. ಇನ್ನು ಕೆಲ ಆಟೋ ಚಾಲಕರಿಗೆ ಬ್ಯಾಡ್ಜ್ಗಳಿಲ್ಲ ಎಂದು ದಂಡ ವಿಧಿಸುತ್ತಿದ್ದಾರೆ. ಸುಪ್ರೀಂ ಕೋರ್ಟ್ ಬ್ಯಾಡ್ಜ್ಇಲ್ಲದೆ ಆಟೋ ಹಾಗೂ ಟ್ಯಾಕ್ಸಿ ಚಾಲನೆ ಮಾಡಬಹುದು ಎಂದು ಹೇಳಿದೆ. ಆದರೂ ಏಕಾಏಕಿ ಜಪ್ತಿ ಮಾಡಿ, ದಂಡ ವಿಧಿಸುತ್ತಿದ್ದಾರೆ. ಹೀಗಾಗಿ ದೌರ್ಜನ್ಯ ನಿಲ್ಲಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ