ಆಟೋ ಚಾಲಕ ಅನುಮಾನಾಸ್ಪದ ಸಾವು
Team Udayavani, Jul 20, 2018, 10:39 AM IST
ಬೆಂಗಳೂರು: ಆಟೋ ಚಾಲಕನೊಬ್ಬ ನೇಣುಬಿಗಿದ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ಗಿರಿನಗರದಲ್ಲಿ ನಡೆದಿದೆ. ಮುನೇಶ್ವರ ಬ್ಲಾಕ್ನ ಲಿಂಗರಾಜ್ (30) ಮೃತ ಚಾಲಕ. ಮೇಲ್ನೋಟಕ್ಕೆ ಲಿಂಗರಾಜು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಪತ್ನಿಯೇ ಹತ್ಯೆಗೈದಿದ್ದಾಳೆ ಎಂದು ಮೃತನ ಸಂಬಂಧಿಗಳು ಆರೋಪಿಸಿ, ದೂರು ನೀಡಿದ್ದಾರೆ. ಈ ಕುರಿತು ಪತ್ನಿ ನಳಿನಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಳವಳ್ಳಿ ಮೂಲದ ಲಿಂಗರಾಜು ಮತ್ತು ನಳಿನಿ ಕೆಲ ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಆದರೆ, ಇತ್ತೀಚೆಗೆ ಪತ್ನಿ ನಳಿನಿ ನಡವಳಿಕೆ ವಿಚಾರವಾಗಿ ಲಿಂಗರಾಜು ನಿತ್ಯ ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಇದರಿಂದ ಕೋಪಗೊಂಡು ಆಕೆಯೇ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ ಎಂದು ಲಿಂಗರಾಜ್ ಸಹೋದರ ಸುರೇಶ್ ಆರೋಪಿಸಿದ್ದಾರೆ.
ಗುರುವಾರ ಬೆಳಗ್ಗೆ ಸುರೇಶ್ಗೆ ಕರೆ ಮಾಡಿದ್ದ ಪತ್ನಿ ನಳಿನಿ ನಿಮ್ಮ ಸಹೋದರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದರು. ಬಳಿಕ ಸುರೇಶ್ ಪೊಲೀಸ್ ಸಹಾಯವಾಣಿಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ