ಕಿಡ್ನಿ ದಾನ ನೀಡಲು ಮಹಿಳೆಗೆ ಅನುಮತಿ
Team Udayavani, Jul 20, 2018, 10:44 AM IST
ಬೆಂಗಳೂರು: ರಾಜ್ಯ ಹೈಕೋರ್ಟ್ ಬಿಸಿ ಮುಟ್ಟಿಸಿದ ನಂತರ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ, ವಾಯುಸೇನೆ ಕರ್ನಲ್ ಪಂಕಜ್ ಭಾರ್ಗವ ಅವರಿಗೆ ಕಿಡ್ನಿ ದಾನ ಮಾಡಲು ಮಹಿಳೆಗೆ ಅನುಮತಿ ನೀಡಿದೆ. ಈ ಕುರಿತು ಆರೋಗ್ಯ ಇಲಾಖೆ ಅಧೀನದ ರಾಜ್ಯಮಟ್ಟದ ಅಂಗಾಂಗ ಕಸಿ ಜೋಡಣಾ ಅಧಿಕಾರಯುಕ್ತ ಸಮಿತಿ, ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕ ಸದಸ್ಯ ಪೀಠಕ್ಕೆ ಗುರುವಾರ ಪ್ರಮಾಣಪತ್ರ ಸಲ್ಲಿಸಿದೆ. ಕಿಡ್ನಿ ವೈಫಲ್ಯ ಸಮಸ್ಯೆ ಎದುರಿಸುತ್ತಿರುವ ಸೇನಾಧಿಕಾರಿ ಕರ್ನಲ್ ಪಂಕಜ್ ಭಾರ್ಗವ ಅವರಿಗೆ ವರ್ಷಾ ಶರ್ಮಾ ಎಂಬುವವರು ಕಿಡ್ನಿ ದಾನ ನೀಡಲು ಮುಂದಾಗಿದ್ದಾರೆ.
ಇದೊಂದು ವಿಶೇಷ ಪ್ರಕರಣ ಎಂದು ಪರಿ ಗಣಿಸಿ ಸಮಿತಿಯು ಜು.18ರಂದು ತುರ್ತು ಸಭೆ ನಡೆಸಿ ಕಿಡ್ನಿ ದಾನ ಮಾಡಲು ವರ್ಷಾಶರ್ಮಾ ಅವರಿಗೆ ಅನುಮತಿ ನೀಡಲಾಗಿದೆ ಎಂದು ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ. ಅಲ್ಲದೆ, ಹೆಬ್ಟಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ತಜ್ಞ ವೈದ್ಯರು, ಪಂಕಜ್ ಭಾರ್ಗವ ಅವರಿಗೆ ಕಿಡ್ನಿ ಕಸಿ ನಡೆಸಬಹುದು ಎಂದೂ ಪ್ರಮಾಣಪತ್ರದಲ್ಲಿ ತಿಳಿಸಿದ್ದು, ಈ ಕುರಿತು ಅನುಮತಿ ಪತ್ರವನ್ನು ವರ್ಷಾ ಶರ್ಮಾ ಪರ ವಕೀಲರಿಗೆ ನೀಡಿದೆ.
ಭಾರತೀಯ ವಾಯುಸೇನೆಯ ನೈಋತ್ಯ ವಿಭಾಗದ ಕಮಾಂಡೆಂಟ್ ಪುಣೆಯ ಕೇಂದ್ರ ಕಚೇರಿಯಲ್ಲಿ ಮುಖ್ಯ ಅಭಿಯಂತರ ಹುದ್ದೆಯಲ್ಲಿರುವ 49 ವರ್ಷದ ಕರ್ನಲ್ ಪಂಕಜ್ ಭಾರ್ಗವ ಅವರಿಗೆ ಸ್ವಯಂ ಪ್ರೇರಿತವಾಗಿ ಕಿಡ್ನಿ ನೀಡಲು ಮುಂದೆ ಬಂದರೂ ಅನುಮತಿ ನೀಡಲು ಸಮಿತಿ ವಿಳಂಬ ಮಾಡುತ್ತಿದೆ ಎಂದು ಆಕ್ಷೇಪಿಸಿ ವರ್ಷಾ ಶರ್ಮಾ ಕೋರ್ಟ್ ಮೆಟ್ಟಿಲೇರಿದ್ದರು. ಬುಧವಾರ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳು, ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ರಲ್ಲದೆ, ಕೂಡಲೆ ಸಮಿತಿ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಗಡುವು ವಿಧಿಸಿದ್ದರು. ಈ ಹಿನ್ನೆಲೆಯಲ್ಲಿ ಸಮಿತಿ ಬುಧವಾರವೇ ಸಭೆ ನಡೆಸಿ ಕಿಡ್ನಿ ದಾನಕ್ಕೆ ಅನುಮತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ