ಜನ್ಮ ದಿನಾಂಕ ಮುಚ್ಚಿಟ್ಟ ಪತ್ನಿ;ವಿಚ್ಛೇದನ ಕೋರಿ ಪತಿ ಅರ್ಜಿ


Team Udayavani, Jul 21, 2018, 11:42 AM IST

highcourt.jpg

ಬೆಂಗಳೂರು: ವಿವಾಹದ ವೇಳೆ ಪತ್ನಿ ತಾನು ಹುಟ್ಟಿದ ಅಸಲಿ ದಿನಾಂಕವನ್ನು ಮುಚ್ಚಿಟ್ಟಿದ್ದಾಳೆ ಮತ್ತು ಆಕೆ ಹೇಳಿಕೊಂಡ ವಯಸ್ಸಿಗಿಂತಲೂ ಎರಡು ವರ್ಷ ದೊಡ್ಡವಳಾಗಿದ್ದಾಳೆ ಎಂಬ ಕಾರಣಕ್ಕೆ ವಿವಾಹ ವಿಚ್ಛೇದನ ಬಯಸಿ ವ್ಯಕ್ತಿ ಹೈಕೋರ್ಟ್‌
ಮೊರೆ ಹೋಗಿದ್ದಾರೆ.

ಸಾಂಸಾರಿಕ ಜೀವನ ಹೊಂದಾಣಿಕೆ ಆಗುತ್ತಿಲ್ಲ ಎಂಬ ಕಾರಣ ನೀಡಿ ವಿವಾಹ ವಿಚ್ಛೇದನ ಕೋರುವುದು ಸಾಮಾನ್ಯ. ಆದರೆ, ವಿವಾಹದ ಸಂಧರ್ಭದಲ್ಲಿ ಆಕೆ ಹುಟ್ಟಿದ ದಿನಾಂಕದ ಬಗ್ಗೆ ಸುಳ್ಳು ಮಾಹಿತಿ ನೀಡಿ ವಂಚಿಸಿದ್ದಾಳೆ. ಹೀಗಾಗಿ, ಆಕೆ ಜತೆ ಜೀವನ ನಡೆಸಲು ಇಷ್ಟವಿಲ್ಲ ಎಂದು ವಿಚ್ಛೇದನ ನೀಡುವಂತೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿರುವುದು ಅಪರೂಪದ ಪ್ರಕರಣವಾಗಿದೆ.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕುಮಾರ್‌ (ಹೆಸರು ಬದಲಿಸಲಾಗಿದೆ) ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ನ್ಯಾಯಮೂರ್ತಿ ಎ.ಎಸ್‌.ಬೋಪಣ್ಣ ಹಾಗೂ ನ್ಯಾಯಮೂರ್ತಿ ಮೊಹಮದ್‌ ನವಾಜ್‌ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿ ಪತ್ನಿಗೆ ಕಾನೂನು ಹೋರಾಟದ ಶುಲ್ಕವಾಗಿ 10 ಸಾವಿರ ರೂ. ನೀಡುವಂತೆ ಕುಮಾರ್‌ಗೆ ಆದೇಶಿಸಿ, ಅರ್ಜಿ ಸಂಬಂಧ ಆಕೆಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ಪದವೀಧರನಾಗಿರುವ ಹೊಸನಗರ ತಾಲೂಕಿನ ಕುಮಾರ್‌, 2013ರಲ್ಲಿ ವಧು ಹುಡುಕಾಟದಲ್ಲಿದ್ದರು. ಈ ವೇಳೆ ಸಂಬಂಧಿಕರೊಬ್ಬರ ಮೂಲಕ ಅದೇ ತಾಲೂಕಿನ ಹೇಮಾ (ಹೆಸರು ಬದಲಿಸಲಾಗಿದೆ) ಕುಟುಂಬದವರ ಪರಿಚಯವಾಗಿದ್ದು, ಹೇಮಾರನ್ನು ವರಿಸಲು ಒಪ್ಪಿಕೊಂಡಿದ್ದರು. ಈ ವೇಳೆ ಇಬ್ಬರಿಗೂ ಜಾತಕ ಕೂಡಿ ಬರುತ್ತದೆಯೋ ಇಲ್ಲವೋ ಎಂಬ ಬಗ್ಗೆ ಪರಿಶೀಲಿಸಲು ಹೇಮಾ ಅವರ ಜನ್ಮ ದಿನಾಂಕ ಕೇಳಿದ್ದರು. ಹೇಮಾ ಅವರು ನೀಡಿದ್ದ ಜನ್ಮ ದಿನಾಂಕ ಹಾಗೂ ಕುಮಾರ್‌ ಜನ್ಮ ದಿನಾಂಕಕ್ಕೆ ಜಾತಕ ಫ‌ಲ ಕೂಡಿ ಬಂದಿತ್ತು. ಹೀಗಾಗಿ 2013ರಲ್ಲಿ ಇಬ್ಬರೂ ವಿವಾಹ ಬಂಧನಕ್ಕೊಳಗಾಗಿದ್ದರು.

ಡೈವೋರ್ಸ್‌ ಯಾಕೆ?: ವಿವಾಹವಾದ ಕೆಲ ವರ್ಷಗಳವರೆಗೆ ಪತಿ ಪತ್ನಿ ಅನೂನ್ಯವಾಗಿದ್ದರು. ಈ ಮಧ್ಯೆ ಪತ್ನಿಯ ಶಾಲಾ
ದಾಖಲೆಗಳು ಹಾಗೂ ಅಂಕಪಟ್ಟಿಯನ್ನು ಕುಮಾರ್‌ ಪರಿಶೀಲಿಸಿದಾಗ, ವಿವಾಹ ಸಂದರ್ಭದಲ್ಲಿ ನೀಡಿದ್ದ ಜನ್ಮ ದಿನಾಂಕಕ್ಕೂ, ಶಾಲಾ ದಾಖಲೆಗಳಲ್ಲಿ ನಮೂದಾಗಿರುವ ದಿನಾಂಕಕ್ಕೂ ಎರಡು ವರ್ಷ ವ್ಯತ್ಯಾಸವಿತ್ತು. ಅಂದರೆ, ಮದುವೆ ವೇಳೆ ನೀಡಿದ್ದ ಮಾಹಿತಿಗಿಂತ ಹೇಮಾ ಎರಡು ವರ್ಷ ದೊಡ್ಡವರಾಗಿದ್ದರು.

ಇದರಿಂದ ಅಸಮಾಧಾನಗೊಂಡ ಕುಮಾರ್‌, ಜನ್ಮ ದಿನಾಂಕದ ಬಗ್ಗೆ ಸುಳ್ಳು ಮಾಹಿತಿ ನೀಡಿ ಮೋಸ ಮಾಡಿದ್ದಾರೆ. ಅಸಲಿ ಜನ್ಮ ದಿನಾಂಕಕ್ಕೆ ತಾಳೆ ಹಾಕಿದಾಗ ನಮ್ಮಿಬ್ಬರ ಜಾತಕ ಫ‌ಲ ಕೂಡಿಬರುವುದಿಲ್ಲ. ಹೀಗಾಗಿ ವಿವಾಹ ವಿಚ್ಛೇದನ ನೀಡಬೇಕು ಎಂದು ಕೋರಿ ಹೊಸನಗರ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದರು. ನ್ಯಾಯಾಲಯ ಈ ಅರ್ಜಿಯನ್ನು ವಜಾಗೊಳಿಸಿ ಡೈವೋರ್ಸ್‌ ನೀಡಲು ನಿರಾಕರಿಸಿ ಜ.16ರಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಕುಮಾರ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.