ಕಣವಿಗೆ ಕನ್ನಡ ರತ್ನ ಪ್ರಶಸ್ತಿ
Team Udayavani, Jul 22, 2018, 10:48 AM IST
ಬೆಂಗಳೂರು: ದುಬೈನಲ್ಲಿರುವ ಕನ್ನಡ ಸಂಘಟನೆ ಕೊಡಮಾಡುವ ಕನ್ನಡ ರತ್ನ ಪ್ರಶಸ್ತಿಗೆ ನಾಡಿನ ಹಿರಿಯ ಕವಿ ನಾಡೋಜ ಚನ್ನವೀರ ಕಣವಿ ಭಾಜನರಾಗಿದ್ದಾರೆ. “ಕನ್ನಡಿಗರು ದುಬೈ’ ಎಂಬ ಸಂಘಟನೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ನಾಡಿನ ಹಿರಿಯ ಚೇತನಗಳಿಗೆ ಪ್ರತಿ ವರ್ಷ ದುಬೈನಿಂದ ಆಗಮಿಸಿ ರಾಜ್ಯದಲ್ಲಿಯೇ ಪ್ರಶಸ್ತಿ ಕೊಡುವ ವಿಶಿಷ್ಟ ಸಂಪ್ರದಾಯ ಪಾಲಿಸಿಕೊಂಡು ಬಂದಿದ್ದು, ಈ ವರ್ಷ ಕವಿ ಚನ್ನವೀರ ಕಣವಿಯವರಿಗೆ ಪ್ರಶಸ್ತಿ ನೀಡಲು ಸಂಘಟನೆ ನಿರ್ಧರಿಸಿದೆ. ಕಣವಿ ಅವರಿಗೆ ಧಾರವಾಡದಲ್ಲಿಯೇ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆ.3 ರಂದು ಶುಕ್ರವಾರ ಸಂಜೆ 6 ಗಂಟೆಗೆ ಧಾರವಾಡದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮ ಪ್ರಯುಕ್ತ ಧಾರವಾಡ ಜಿಲ್ಲೆಯ ದೇವರ ಹುಬ್ಬಳ್ಳಿಯ ರಂಗ ಗಂಗಾ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, ನಂತರ ರಂಗಗಂಗಾ ಕಲಾವಿದರಿಂದ ಸಹಿಪ್ರಾಶ 1990 ಎಂಬ ಹಾಸ್ಯ ನಾಟಕ ಪ್ರದರ್ಶನಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ