ಅಕ್ರಮವಾಗಿ ನೆಲೆಸಿದ್ದ 107ವಿದೇಶಿ ಪ್ರಜೆಗಳ ಬಂಧನ


Team Udayavani, Jul 22, 2018, 12:04 PM IST

blroe-8.jpg

ಕೆ.ಆರ್‌.ಪುರ/ಬೆಂಗಳೂರು: ವೀಸಾ ಅವಧಿ ಮುಗಿದ ಬಳಿಕವೂ ಅಕ್ರಮವಾಗಿ ವಾಸವಿರುವ ಜತೆಗೆ ಮಾದಕ ವಸ್ತು ಮಾರಾಟ ಹಾಗೂ ಆನ್‌ಲೈನ್‌ ವಂಚನೆಯಲ್ಲಿ ತೊಡಗಿದ್ದ 107 ಮಂದಿ ವಿದೇಶಿ ಪ್ರಜೆಗಳನ್ನು ನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ವೀಸಾ, ಪಾಸ್‌ಪೋರ್ಟ್‌ ಅವಧಿ ಮುಗಿದಿದ್ದರೂ ದೇಶದಲ್ಲಿ ಅಕ್ರಮವಾಗಿ ವಾಸವಾಗಿರುವ ಪ್ರಾದೇಶಿಕ ವಿದೇಶಿ ನೋಂದಣಾಧಿಕಾರಿ ಕಚೇರಿ (ಎಫ್ಆರ್‌ಆರ್‌ಒ) ಅಧಿಕಾರಿಗಳ ದೂರಿನ ಮೇರೆಗೆ ವೈಟ್‌ಫೀಲ್ಡ್‌, ಈಶಾನ್ಯ ಹಾಗೂ ಪೂರ್ವ ವಿಭಾಗದ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ 6 ಗಂಟೆಯಿಂದ ನಡೆದ ವಿಶೇಷ ಕಾರ್ಯಾಚರಣೆ ವೇಳೆ 107 ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ.

ಸುಮಾರು 150ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡಗಳು ಕಾರ್ಯಾಚರಣೆ ನಡೆಸಿ ನೈಜೀರಿಯಾ ಹಾಗೂ ಉಗಾಂಡಾ ಪ್ರಜೆಗಳನ್ನು ಬಂಧಿಸಿವೆ. ಬಂಧಿತ ವಿದೇಶಿಗರು ಕೆ.ಆರ್‌.ಪುರ, ಟಿ.ಸಿ.ಪಾಳ್ಯ, ಬೃಂದಾವನ ಬಡಾವಣೆ, ಪ್ರಿಯಾಂಕ ನಗರ, ಸೀಗೇಹಳ್ಳಿ, ಆನಂದಪುರ, ಮಾರ್ಗೊಂಡಹಳ್ಳಿ ಹಾಗೂ ಇತರೆಡೆ ವಾಸವಿದ್ದರು. ಬಂಧಿತರ ಬಳಿ ಸೂಕ್ತ ದಾಖಲೆಗಳಿಲ್ಲ. ಜತೆಗೆ ಎಲ್ಲರ ವೀಸಾ ಅವಧಿ ಮುಕ್ತಾಯವಾಗಿದ್ದು, ಅಕ್ರಮವಾಗಿ ನೆಲೆಸಿದ್ದರು ಎಂದು ವೈಟ್‌μàಲ್ಡ್‌ ವಲಯದ ಡಿಸಿಪಿ ಅಬ್ದುಲ್‌ ಅಹದ್‌ ತಿಳಿಸಿದರು.

ಎಫ್ಆರ್‌ಆರ್‌ಒ ಅಧಿಕಾರಿಗಳಿಂದ ಆರೋಪಿಗಳ ವೀಸಾ, ಪಾಸ್‌ಪೋರ್ಟ್‌, ರಹವಾಸಿ ಪ್ರಮಾಣಪತ್ರ (ರೆಸಿಡೆನ್ಸಿಯಲ್‌ ಪರ್ಮಿಟ್‌) ಕುರಿತು ಪರಿಶೀಲನೆಗೆ ಒಳಪಡಿಸಲಾಗಿದೆ. ಬಂಧಿತರ ವಿರುದ್ಧ ಪಾಸ್‌ಪೋರ್ಟ್‌ ಕಾಯ್ದೆ, ವಿದೇಶಿ ಕಾಯ್ದೆ, ಫಾರಿನರ್ಸ್‌ ಆರ್ಡರ್ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗುವುದು. ಹಾಗೇ ಅನಧಿಕೃತ ದಾಖಲೆಗಳನ್ನು ಪಡೆದು ಮನೆಗಳನ್ನು ಬಾಡಿಗೆ ನೀಡಿದ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಗಡಿಪಾರು ಮಾಡುವ ಕುರಿತು ಹಿರಿಯ ಅಧಿಕಾರಿಗಳ ಜತೆ ಚರ್ಚಿಸಲಾಗಿದ್ದು, ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಕಾರ್ಯಾಚರಣೆ ವೇಳೆ ಟಿ.ಸಿ.ಪಾಳ್ಯ ಬಳಿಯ ಮಂಜುನಾಥ ಬಡಾವಣೆಯಲ್ಲಿ ವಾಸವಾಗಿದ್ದ ಸ್ಟಾನ್ಲಿ ಎಂಬ ಆಫ್ರೀಕನ್‌ ಪ್ರಜೆ ಬಳಿ 150 ಗ್ರಾಂ. ಗಾಂಜಾ ಹಾಗೂ ಪ್ರೋಸ್ಪಾ ಎಂಬಾತನಿಂದ 50 ಗ್ರಾಂ ಕೊಕೇನ್‌ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ವಿದೇಶಗಳಿಂದ ದೆಹಲಿ ಹಾಗೂ ಮುಂಬೈ ಮಾರ್ಗವಾಗಿ ನಗರಕ್ಕೆ ಮಾದಕ ವಸ್ತುಗಳನ್ನು ತರುತ್ತಿದ್ದರು. ನಂತರ ಸಣ್ಣ ಪ್ಯಾಕೆಟ್‌ಗಳನ್ನಾಗಿ ಮಾಡಿ ವಿದ್ಯಾರ್ಥಿಗಳು ಹಾಗೂ ಬೆಳ್ಳಂದೂರು, ಕೆ.ಆರ್‌.ಪುರ ವ್ಯಾಪ್ತಿಯಲ್ಲಿ ಟೆಕ್ಕಿಗಳಿಗೆ ಮಾರುತ್ತಿದ್ದರು. ಈಗಾಗಲೇ ಗಲಾಟೆ, ಡ್ರಗ್ಸ್‌ ಮಾರಾಟ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಮತ್ತೂಬ್ಬ ವ್ಯಕ್ತಿಯನ್ನು ಬಂಧಿಸಿದ್ದು, ಜಾಮೀನು ಪಡೆದು ಬಿಡುಗಡೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂರು ವಲಯ ವ್ಯಾಪ್ತಿಯಲ್ಲಿ ಶನಿವಾರ ನಡೆದ ಇಡೀ ದಿನದ ಕಾರ್ಯಾಚರಣೆಯಲ್ಲಿ ಒಟ್ಟು 650 ಗ್ರಾಂ. ಗಾಂಜಾ, 60 ಗ್ರಾಂ. ಕೊಕೇನ್‌, 10 ಗ್ರಾಂ ಎಲ್‌ಎಸ್‌ಡಿ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದ್ದು, ಇವರ ವಿರುದ್ಧ ಅಕ್ರಮ ವಾಸದ ಜತೆಗೆ ಮಾದಕ ವಸ್ತು ಮಾರಾಟ ಆರೋಪ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. 

ಆನ್‌ಲೈನ್‌ ವಂಚನೆ
ಬಂಧಿತರ ಪೈಕಿ ಬಹುತೇಕರು ಜೀವನ ನಿರ್ವಹಣೆಗಾಗಿ ರಸ್ತೆಬದಿ ಬಟ್ಟೆ ವ್ಯಾಪಾರ, ಮಾದಕ ವಸ್ತು ಮಾರಾಟ, ಆನ್‌ಲೈನ್‌ ವಂಚನೆಯಲ್ಲಿ ತೊಡಗಿದ್ದರು. ಇನ್ನು ಕೆಲವರು ಇತರೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ಆದರೆ, ಆರೋಪಿಗಳು ವಿಚಾರಣೆಗೆ ಸಹಕರಿಸುತ್ತಿಲ್ಲ. ಭಾಷೆ ಸಮಸ್ಯೆಯಿಂದ ಸಂವಹನ ನಡೆಸುವುದು ಕಷ್ಟವಾಗಿದೆ. ಹೀಗಾಗಿ ಎಫ್ಆರ್‌ಆರ್‌ಒ ಅಧಿಕಾರಿಗಳು ಆರೋಪಿಗಳ ಪೂರ್ವಾಪರ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.