ಮಳೆಯಲ್ಲೂ ಮುಂದುವರಿದ ಧರಣಿ
Team Udayavani, Aug 1, 2018, 2:50 PM IST
ಬೆಂಗಳೂರು: ಅನುದಾನಕ್ಕೆ ಒಳಪಡಿಸಬೇಕು ಎಂದು ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶಾಲಾ ಶಿಕ್ಷಕರು ನಡೆಸುತ್ತಿರುವ ಪ್ರತಿಭಟನೆ ಹದಿನೈದು ದಿನ ಪೂರೈಸಿದ್ದರೂ, ಸರ್ಕಾರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ.
ಮಂಗಳವಾರ ಸಂಜೆ ಮಳೆಯ ನಡುವೆಯೂ ಶಿಕ್ಷಕರು ಪ್ರತಿಭಟನೆ ನಡೆಸಿದ್ದು, ಸರ್ಕಾರದಿಂದ ಸೂಕ್ತ ಉತ್ತರ ಬರುವವರೆಗೂ ಹೋರಾಟ ನಿರಂತರವಾಗಿರುತ್ತದೆ ಎಂದು ಎಚ್ಚರಿಕೆ ನೀಡಿದರು. 1987ರಿಂದ 1994-95ರ ಅವಧಿಯಲ್ಲಿ ಆರಂಭವಾಗಿರುವ ಸಾವಿರಾರು ಶಾಲೆಗಳಿಗೆ ಸರ್ಕಾರ ವೇತನಾನುದಾನ ನೀಡಿದೆ. ಇದೇ ಅವಧಿಯಲ್ಲಿ ಆರಂಭವಾದ ಸುಮಾರು 87 ಶಾಲೆಗಳನ್ನು ಸರ್ಕಾರ ವೇತನಾನುದಾನಕ್ಕೆ ಒಳಪಡಿಸಿಲ್ಲ.
ಈ ಶಾಲೆಗಳ ಕಡತ ಆರ್ಥಿಕ ಇಲಾಖೆಯಿಂದ ವಾಪಾಸ್ ಬಂದಿದೆ. ಇದರಿಂದ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ಶಿಕ್ಷಕರ ಕುಟುಂಬ ಬೀದಿಗೆ ಬಂದಿದೆ. ವೇತನಾನುದಾನಕ್ಕೆ ಆಗ್ರಹಿಸಿ 15 ದಿನದಿಂದ ಸ್ವಾತಂತ್ರ
ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೂ, ಸರ್ಕಾರ ದಿಂದ ಯಾವುದೇ ಉತ್ತರ ಸಿಕ್ಕಿಲ್ಲ ಎಂದು ರಾಜ್ಯ ಅನುದಾನಕ್ಕೆ ಒಳಪಡುತ್ತಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಒಕ್ಕೂಟದ ಅಧ್ಯಕ್ಷ ವರದರಾಜ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ