ಸಂಗೀತ, ನೃತ್ಯ ಮನೋರಂಜನೆಗೆ ಸೀಮಿತವಲ್ಲ


Team Udayavani, Aug 7, 2018, 12:03 PM IST

sangeeta.jpg

ಬೆಂಗಳೂರು: ಸಂಗೀತ ಹಾಗೂ ನೃತ್ಯ ಪ್ರಕಾರಗಳು ಕೇವಲ ಮನರಂಜನೆಗೆ ಸೀಮಿತವಾಗಿಲ್ಲ. ಬದಲಾಗಿ ಸಮಾಜಕ್ಕೆ ಸಂದೇಶ ಸಾರುವಂತಹ ವೇದಿಕೆಗಳಾಗಿವೆ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷ ಫ‌ಯಾಜ್‌ ಖಾನ್‌ ಅಭಿಪ್ರಾಯಪಟ್ಟರು.

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಸೋಮವಾರ ನಗರದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಂಗೀತ ಹಾಗೂ ನೃತ್ಯಗಳು ಸಮಾಜದ ಒಂದು ಭಾಗವಾಗಿದ್ದು, ಪ್ರತಿಯೊಬ್ಬರ ವ್ಯಕ್ತಿಯನ್ನು ತನ್ನತ್ತ ಸೆಳೆಯುವಂತಹ ಶಕ್ತಿಯನ್ನು ಹೊಂದಿವೆ. ಕಲೆ ಹಾಗೂ ಸಾಹಿತ್ಯವಿಲ್ಲದ ಸಮಾಜ ನರಕದಂತಾಗುತ್ತದೆ ಎಂದು ಹೇಳಿದರು.

ದೇಶದಲ್ಲಿ ಸಂಗೀತ, ನೃತ್ಯ ಸೇರಿದಂತೆ ಎಲ್ಲ ರೀತಿಯ ಕಲಾ ಪ್ರಕಾರಗಳು ಸಮೃದ್ಧವಾಗಿ ಬೆಳವಣಿಗೆಯಾಗಿದ್ದು, ಪ್ರತಿಯೊಬ್ಬರೂ ಕಲಾ ಪ್ರಕಾರಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಕಲಾ ಪ್ರಕಾರಗಳನ್ನು ಸವಿಯುವ ಮೂಲಕ ಅವುಗಳನ್ನು ಗೌರವಿಸಬೇಕು ಎಂದು ಹೇಳಿದರು.

ಅಕಾಡೆಮಿಯ ವತಿಯಿಂದ ಕಳೆದ ಎರಡು ವರ್ಷಗಳಿಂದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ವಿದ್ವಾಂಸರ ಮೂಲಕ ಪುಸ್ತಕಗಳನ್ನು ಹೊರತಂದಿದ್ದು, ಇವು ಕೇವಲ ಪಠ್ಯಗಳಿಗೆ ಸೀಮಿತವಾಗಿಲ್ಲ. ಬದಲಾಗಿ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡುವವರಿಗೆ ಮಾರ್ಗದರ್ಶಕ ಕೃತಿಗಳಾಗಿದ್ದು, ಕೃತಿಗಳಿಂದ ಜನರು ಸಂಗೀತದ ಕುರಿತು ಹಲವಾರು ವಿಷಯಗಳನ್ನು ತಿಳಿಯಬಹುದಾಗಿದೆ ಎಂದು ಹೇಳಿದರು.

ವಿಮರ್ಶಕ ಡಾ.ಎಂ.ಸೂರ್ಯ ಪ್ರಸಾದ್‌ ಮಾತನಾಡಿ, ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ ಹಾಗೂ ನೃತ್ಯ ಪ್ರಕಾರಗಳು ಸಮಾನವಾಗಿ ಬೆಳೆಯುತ್ತಿದ್ದು, ದೇಶ-ವಿದೇಶಗಳಲ್ಲಿ ಅಪಾರವಾದ ಗೌರವ ಮನ್ನಣೆಗೆ ಪಾತ್ರವಾಗಿವೆ. ನಮ್ಮ ಸಂಗೀತ ಗಟ್ಟಿತನದಿಂದ ಕೂಡಿದ್ದು, ಗಟ್ಟಿತನದಿಂದ ಕೂಡಿದ ಕಲೆ ಎಲ್ಲವನ್ನೂ ಮೀರಿ ಬೆಳೆಯುವ ಶಕ್ತಿಯನ್ನು ಹೊಂದಿರುತ್ತವೆ ಎಂದರು. 

ಕಾರ್ಯಕ್ರಮದಲ್ಲಿ ರಾಗವಲ್ಲಿರಸಾಲ, ಸಂಗೀತ ಶಾಸ್ತ್ರಗ್ರಂಥ ಚಂದ್ರಿಕೆ, ಸಂಗೀತ ಶಾಸ್ತ್ರ ಮಂದಾಕಿನಿ (ಭಾಗ 1 ಮತ್ತು ಭಾಗ 2), ತೌಲನಿಕ ಸಂಗೀತ ಸಮೀಕ್ಷೆ ಹಾಗೂ ಕಲಾನ್ವೇಷಣೆ ಕೃತಿಗಳು ಬಿಡುಗಡೆಗೊಂಡವು. ಈ ವೇಳೆ ಹಿರಿಯ ವಿದ್ವಾಂಸ ಡಾ.ಪಾದೇಕಲ್ಲು ವಿಷ್ಣುಭಟ್‌, ಲೇಖಕರಾದ ಡಾ.ನಾಗವಲ್ಲಿ ನಾಗರಾಜ್‌, ಶತಾವಧಾನಿ ಆರ್‌.ಗಣೇಶ್‌, ವಸಂತ ಮಾಧವಿ, ಡಾ.ಡಿ.ಎ.ಉಪಾಧ್ಯ, ಡಾ.ಎಸ್‌.ಕಾರ್ತಿಕ್‌ ಹಾಜರಿದ್ದರು. 

ಕೈಕೊಟ್ಟ ವಿದ್ಯುತ್‌ – ಸೊಳ್ಳೆ ಕಾಟ: ಕಾರ್ಯಕ್ರಮದ ಆರಂಭದಲ್ಲಿಯೇ ಸಭಾಂಗಣದಲ್ಲಿ ವಿದ್ಯುತ್‌ ಕೈಕೊಟ್ಟ ಪರಿಣಾಮ ಅತಿಥಿಗಳು ಹಾಗೂ ಸಭಿಕರು ತೊಂದರೆ ಅನುಭವಿಸುವಂತಾಯಿತು. ಸುಮಾರು ಒಂದು ಗಂಟೆ ಕಾಲ ವಿದ್ಯುತ್‌ ವ್ಯತ್ಯಯ ಉಂಟಾಗಿದ್ದರಿಂದ ಅತಿಥಿಗಳು ಮೈಕ್‌ ಇಲ್ಲದೆ ಮಾತನಾಡಬೇಕಾಯಿತು. ಆಯೋಜಕರು ಕೈಯಲ್ಲಿ ಮೊಬೈಲ್‌ ಟಾರ್ಚ್‌ ಹಿಡಿದು ಅತಿಥಿಗಳನ್ನು ತೋರಿಸಬೇಕಾಯಿತು. ಇದರ ನಡುವೆ ಸಭಾಂಗಣದಲ್ಲಿ ಸೊಳ್ಳೆಗಳ ಕಾಟ ತೀವ್ರವಾಗಿದ್ದರಿಂದ ಸಭಿಕರು ಕಾರ್ಯಕ್ರಮದಿಂದ ಎದ್ದು ಹೋಗಿದ್ದು ಕಂಡುಬಂತು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.