ಜಲಮಂಡಳಿ ಹುದ್ದೆಗಳ ಭರ್ತಿ ಶೀಘ್ರ


Team Udayavani, Aug 9, 2018, 12:55 PM IST

blore-3.jpg

ಬೆಂಗಳೂರು: ನಗರದಲ್ಲಿ ಸರಿಸುಮಾರು ಹತ್ತು ಲಕ್ಷ ಕುಟುಂಬಗಳಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಕೆಲಸದಲ್ಲಿ ನಿರತವಾಗಿರುವ ಜಲಮಂಡಳಿಯಲ್ಲಿ ಖಾಲಿ ಹುದ್ದೆಗಳ ಭರ್ತಿಯ ನೇಮಕಾತಿ ಪ್ರಕ್ರಿಯೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ.

ಎಂಜಿನಿಯರಿಂಗ್‌, ಮೀಟರ್‌ ರೀಡಿಂಗ್‌, ಕಚೇರಿ ನಿರ್ವಹಣೆ ವಿಭಾಗಗಳಲ್ಲಿ ಹಲವಾರು ವರ್ಷಗಳಿಂದ ಸಿಬ್ಬಂದಿ ಕೊರತೆಯಿಂದಾಗಿ ದೈನಂದಿನ ಕೆಲಸ-ಕಾರ್ಯಗಳಿಗೆ ತೊಂದರೆಯಾಗುತ್ತಿದ್ದ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು
ದೂರುಗಳು ಬಂದಿದ್ದವು. 

ಜತೆಗೆ, ಕಳೆದ ಮೇ ತಿಂಗಳಲ್ಲಿ ಕಾವೇರಿ ವಿಭಾಗ, ತ್ಯಾಜ್ಯ ನೀರು , ನಿರ್ವಹಣಾ ವಿಭಾಗಗಳ ಮುಖ್ಯ ಅಭಿಯಂತರ ಹಾಗೂ ಸಹಾಯಕ ಅಭಿಯಂತರರು ಸೇರಿ 21 ಅಧಿಕಾರಿಗಳು ನಿವೃತ್ತಿ ಹೊಂದಿದ್ದಾರೆ. ಈ ಪರಿಣಾಮ ಹಾಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯ ಮೇಲೆ ಒತ್ತಡ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ 270 ಹುದ್ದೆಗಳ ಭರ್ತಿಗೆ ಈ ಮಾಸಾಂತ್ಯದ ವೇಳೆಗೆ ಅಧಿಸೂಚನೆ ಹೊರಡಿಸಲು ಸಿದ್ಧತೆ ನಡೆಸಲಾಗುತ್ತಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿಯೇ ಖಾಲಿಯಿರುವ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಹಾಗೂ ಹಣಕಾಸು ಇಲಾಖೆಯಿಂದ ಜಲಮಂಡಳಿ ಅನುಮೋದನೆ ಪಡೆದಿತ್ತು. ಈ ಸಂಬಂಧ ನೇಮಕಾತಿ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ)ನಾಲ್ಕು ತಿಂಗಳ ಹಿಂದೆ ಜಲಮಂಡಳಿ ಮನವಿ ಮಾಡಿತ್ತು. ಈ ತಿಂಗಳು ಜಲಮಂಡಳಿ ಪ್ರಸ್ತಾವನೆಗೆ ಕೆಇಎ ಒಪ್ಪಿಗೆ ಸೂಚಿಸಿದೆ. 

ಮೊದಲ ಹಂತದಲ್ಲಿ ತಾಂತ್ರಿಕ ಹಾಗೂ ತಾಂತ್ರಿಕೇತರ ಸೇರಿ ಒಟ್ಟು 270 ಹುದ್ದೆಗಳ ನೇಮಕಕ್ಕೆ ಜಲಮಂಡಳಿ ಮುಂದಾಗಿದ್ದು, ನೇಮಕಾತಿಯಲ್ಲಿ 100 ಮೀಟರ್‌ ಮಾಪಕ ಹುದ್ದೆಗಳ ಭರ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈ ಹುದ್ದೆಗಳ ಭರ್ತಿಗೆ ಪಿಯುಸಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ.

ಹೆಚ್ಚಿದ ಒತ್ತಡ: ಜಲಮಂಡಳಿಗೆ ಒಟ್ಟು 3,500 ಹುದ್ದೆಗಳು ಮಂಜೂರಾಗಿದ್ದು, ಆ ಪೈಕಿ 1,297 ಹುದ್ದೆಗಳು ಖಾಲಿ ಉಳಿದಿವೆ. ಕಾಯಂ ನೇಮಕಾತಿ ಪ್ರಕ್ರಿಯೆ ತಡವಾದ ಕಾರಣ ಅನಿವಾರ್ಯವಾಗಿ ಸಿ ಹಾಗೂ ಡಿ ದರ್ಜೆಯ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಲಾಗಿದೆ.

ಮುಖ್ಯವಾಗಿ ನೀರು ಸೋರಿಕೆ ತಡೆಗಟ್ಟುವ ಕಾಮಗಾರಿ, ಕಾವೇರಿ ಐದನೇ ಹಂತದ ವಿಸ್ತರಣೆ, ಎಸ್‌ಟಿಪಿಗಳ ನಿರ್ಮಾಣ, 110 ಹಳ್ಳಿಗಳಿಗೆ ಕಾವೇರಿ ನೀರು ಒದಗಿಸುತ್ತಿರುವ ಯೋಜನೆಯಲ್ಲಿಯೂ ಅಧಿಕಾರಿಗಳಿಗೆ ಕಾರ್ಯಭಾರವಿದ್ದು, ಅದರ ಜತೆಗೆ ಎರಡು ವಿಭಾಗ, ಉಪವಿಭಾಗಗಳ ಹೊಣೆಯನ್ನು ಒಬ್ಬರೇ ಅಧಿಕಾರಿ ನಿಭಾಯಿಸುವಂತಾಗಿದೆ.

ಮೊದಲ ಹಂತದಲ್ಲಿ ಮಂಡಳಿಗೆ ಅಗತ್ಯವಾಗಿ ಬೇಕಿರುವ ಮೀಟರ್‌ ಮಾಪಕರು ಹಾಗೂ ಸಹಾಯಕ ಇಂಜಿನಿಯರ್‌ಗಳ ನೇಮಕಕ್ಕೆ ಆದ್ಯತೆ ನೀಡಿದ್ದೇವೆ. ಉಳಿದ ಹುದ್ದೆಗಳನ್ನು ಏಜೆನ್ಸಿ ಮೂಲಕ ಪಡೆಯಲಾಗುವುದು. ಮುಂದಿನ ದಿನಗಳಲ್ಲಿ ಮಂಡಳಿಯ ಗ್ರಾಹಕರು ಅಥವಾ ಸಂಪರ್ಕ ಸಂಖ್ಯೆಗೆ ಅನುಗುಣವಾಗಿ ಶೀಘ್ರವಾಗಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇವೆ.
 ತುಷಾರ್‌ ಗಿರಿನಾಥ್‌, ಅಧ್ಯಕ್ಷರು ಜಲಮಂಡಳಿ

ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.