ಇಂದಿರಾ ಕ್ಯಾಂಟೀನ್‌ಗೆ ಒಂದು ವರ್ಷದ ಸಂಭ್ರಮ


Team Udayavani, Aug 16, 2018, 12:58 PM IST

indira-can.jpg

ಬೆಂಗಳೂರು: ನಗರದ ಜನರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುತ್ತಿರುವ ಇಂದಿರಾ ಕ್ಯಾಂಟೀನ್‌ ಯೋಜನೆ ಅನುಷ್ಠಾನಗೊಂಡು ವರ್ಷ ಕಳೆದಿದ್ದು, ಒಂದು ವರ್ಷದಲ್ಲಿ ಆರು ಕೋಟಿ ಜನರಿಗೆ ಆಹಾರ ಪೂರಕೆ ಮಾಡಿದ ಕೀರ್ತಿಗೆ ಕ್ಯಾಂಟೀನ್‌ಗಳಿಗೆ ಸೇರಿದೆ.

ರಾಜ್ಯ ಸರ್ಕಾರದ 2017-18ನೇ ಸಾಲಿನ ಬಜೆಟ್‌ನಲ್ಲಿ ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್‌ ಯೋಜನೆಯನ್ನು ಘೋಷಣೆ ಮಾಡಲಾಗಿತ್ತು. ಅದರಂತೆ ಪಾಲಿಕೆಯ ವ್ಯಾಪ್ತಿಯಲ್ಲಿ ಸದ್ಯ ಒಟ್ಟು 171 ಇಂದಿರಾ ಕ್ಯಾಂಟೀನಗಳು ಹಾಗೂ 17 ಸಂಚಾರಿ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿದ್ದು, ನಿತ್ಯ ಸುಮಾರು 2 ಲಕ್ಷ ಮಂದಿಗೆ ಆಹಾರ ಪೂರೈಸುತ್ತಿವೆ. 

ಇದರೊಂದಿಗೆ ಜನರನ್ನು ತನ್ನತ್ತ ಸೆಳೆಯುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್‌ಗಳ ಮೆನು ಸಹ ಬದಲಾವಣೆ ಮಾಡಲಾಗಿದೆ. ಜತೆಗೆ ಕೆಲವು ಕ್ಯಾಂಟೀನ್‌ಗಳಲ್ಲಿ ಪ್ರಾಯೋಗಿಕವಾಗಿ ಮುದ್ದೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಕಾಫಿ-ಟೀ ಸಹ ನೀಡಲು ಯೋಜನೆ ರೂಪಿಸಲಾಗಿದೆ. 

ಇಂದಿರಾ ಕ್ಯಾಂಟೀನ್‌ ಸಾಗಿ ಬಂದ ಹಾದಿ: ಮುಖ್ಯಮಂತ್ರಿಗಳು 2017-18ನೇ ಬಜೆಟ್‌ನಲ್ಲಿ ಇಂದಿರಾ ಕ್ಯಾಂಟೀನ್‌ ಘೋಷಿಸಿದ್ದರು. ಅದರಂತೆ 2018ರ ಆ.16ರಂದು 101 ಕ್ಯಾಂಟೀನ್‌ಗಳಿಗೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಚಾಲನೆ ನೀಡಿದ್ದರು. ಆ ನಂತರದಲ್ಲಿ ಗಾಂಧಿ ಜಯಂತಿ 50 ಕ್ಯಾಂಟೀನ್‌ಗಳು ಹಾಗೂ ಜನವರಿ ವೇಳೆ 23 ಕ್ಯಾಂಟೀನ್‌ಗಳು ಸಾರ್ವಜನಿಕರಿಗೆ ಲಭ್ಯವಾಗಿದ್ದವು. 

ಆದರೆ, ಪಾಲಿಕೆಯ 17 ವಾರ್ಡ್‌ಗಳಲ್ಲಿ ಕ್ಯಾಂಟೀನ್‌ಗಳನ್ನು ನಿರ್ಮಿಸಲು ಜಾಗ ದೊರೆಯದ ಹಿನ್ನೆಲೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾದನ ಸಂಚಾರಿ ಮೊಬೈಲ್‌ ಕ್ಯಾಂಟೀನ್‌ಗಳನ್ನು ಪಾಲಿಕೆಯಿಂದ ಪರಿಚಯಿಸಲಾಗಿತ್ತು. ಅದರಂತೆ ಜನವರಿ 26ರಂದು 24 ಮೊಬೈಲ್‌ ಇಂದಿರಾ ಕ್ಯಾಂಟೀನ್‌ಗಳಿಗೆ ಚಾಲನೆ ನೀಡಲಾಗಿತ್ತಾದರೂ, ಸದ್ಯ 17 ಸಂಚಾರಿ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿವೆ. 

ಸೈನಿಕರಿಂದ ಕ್ಯಾಂಟೀನ್‌ಗಳಲ್ಲಿ ಶಿಸ್ತು: ಇಂದಿರಾ ಕ್ಯಾಂಟೀನ್‌ ಯೋಜನೆಗಳು ಜಾರಿಗೊಳಿಸಿದ ಬಳಿಕ ಕೆಲವೊಂದು ವಾರ್ಡ್‌ಗಳಲ್ಲಿ ಕ್ಯಾಂಟೀನ್‌ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಗಳು ನಡೆದಿದ್ದವು. ಜತೆಗೆ ಕ್ಯಾಂಟೀನ್‌ ಸಿಬ್ಬಂದಿ ಆಹಾರ ಸಮರ್ಪಕವಾಗಿ ಪೂರೈಕೆ ಮಾಡುತ್ತಿಲ್ಲವೆಂಬ ದೂರುಗಳು ಕೇಳಿಬಂದಿದ್ದವು. ಆ ಹಿನ್ನೆಲೆಯಲ್ಲಿ ಪಾಲಿಕೆಯ ಪ್ರತಿಯೊಂದು ಕ್ಯಾಂಟೀನ್‌ಗೂ ಮಾರ್ಷಲ್‌ ನೇಮಿಸುವ ಮೂಲಕ ಶಿಸ್ತು ತರಲಾಗಿತ್ತು. 

ಯಾವುದೇ ಆಹಾರ ಸರಬರಾಜು ಹಾಗೂ ವಿತರಣೆ ಅನುಭವವಿಲ್ಲದಿದ್ದರೂ ಯಶಸ್ವಿಯಾಗಿ ಒಂದು ವರ್ಷ ಕ್ಯಾಂಟೀನ್‌ಗಳನ್ನು ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣೆಗಳನ್ನು ತರಲಾಗುವುದು. 
-ಎನ್‌.ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತರು

2017ರ ಆ.16 ರಿಂದ ಇಲ್ಲಿವರೆಗೆ
-6 ಕೋಟಿ ಮಂದಿ ಊಟ, ತಿಂಡಿ ಸೇವಿಸಿದವರು 
-2.15 ಲಕ್ಷ ಮಂದಿ  ಪ್ರತಿ ದಿನ ಊಟ, ತಿಂಡಿ ಸೇವಿಸಿದವರು-  
-1,200 ಸರಾಸರಿ ಜನ ಒಂದು ಕ್ಯಾಂಟೀನ್‌ನಲ್ಲಿ ಊಟ, ತಿಂಡಿ ಮಾಡಿದವರು- 
-20 ಕೇಂದ್ರೀಕೃತ ಅಡುಗೆ ಮನೆಗಳು
-24 ಮೊಬೈಲ್‌ ಕ್ಯಾಂಟೀನ್‌ಗಳು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.