ಮಾಲಿನ್ಯ ತಡೆಗೆ ಏಕೀಕೃತ ಭೂಸಾರಿಗೆ ಪ್ರಾಧಿಕಾರ


Team Udayavani, Aug 16, 2018, 12:58 PM IST

maalinya.jpg

ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆ, ವಾಯುಮಾಲಿನ್ಯ ಹಾಗೂ ಶಬ್ದ ಮಾಲಿನ್ಯಕ್ಕೆ ತುರ್ತು ಪರಿಹಾರ ಕೈಗೊಳ್ಳುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ನನ್ನ ಅಧ್ಯಕ್ಷತೆಯಲ್ಲಿ “ಏಕೀಕೃತ ಭೂಸಾರಿಗೆ ಪ್ರಾಧಿಕಾರ’ ರಚಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. 

ಫೀಲ್ಡ್‌ ಮಾರ್ಷಲ್‌ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ಹಮ್ಮಿಕೊಂಡಿದ್ದ 72ನೇ ಸ್ವಾತಂತ್ರೋತ್ಸವ ದಿನಾಚರಣೆಯ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಯನ್ನುದ್ದೇಶಿಸಿ ಮುಖ್ಯಮಂತ್ರಿಗಳು ಮಾಡಿದ ಭಾಷಣದಲ್ಲಿ ಏಕೀಕೃತ ಭೂಸಾರಿಗೆ ಪ್ರಾಧಿಕಾರ ರಚನೆಯ ಬಗ್ಗೆ ಪ್ರಸ್ತಾಪಿಸಿದರು.

ಪರಿಸರ ಮಾಲಿನ್ಯ ಸಮಸ್ಯೆ ನಿವಾರಣೆಗೆ ನಾವೆಲ್ಲರೂ ಕೈಜೋಡಿಸಬೇಕಾಗಿದೆ. ಸಾರ್ವಜನಿಕ ಸಾರಿಗೆ ಬಳಕೆ-ಪರಿಸರ ಸಂರಕ್ಷಣೆಗೆ ನಾವು ನೀಡಬಹುದಾದ ಬಹುದೊಡ್ಡ ಕಾಣಿಕೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆ ಉತ್ತಮಪಡಿಸಲು ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ.

ವಿಶೇಷವಾಗಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ, ವಾಯುಮಾಲಿನ್ಯ ಹಾಗೂ ಶಬ್ದ ಮಾಲಿನ್ಯಕ್ಕೆ ತುರ್ತು ಪರಿಹಾರ ಕೈಗೊಳ್ಳುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ನನ್ನ ಅಧ್ಯಕ್ಷತೆಯಲ್ಲಿ “ಏಕೀಕೃತ ಭೂಸಾರಿಗೆ ಪ್ರಾಧಿಕಾರ’ ಸ್ಥಾಪಿಸಲು ಕ್ರಮವಹಿಸಲಾಗುತ್ತಿದೆ. ಬಿಎಂಸಿಟಿಯಲ್ಲಿ ಎಲೆಕ್ಟ್ರಿಕ್‌ ಬಸ್‌ಗಳ ಬಳಕೆ ಒಂದು ಹೊಸ ಹೆಜ್ಜೆಯಾಗಿದೆ ಎಂದರು.

ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಮೆಟ್ರೋ 2ನೇ ಹಂತ, ಫೆರಿಫೆರಲ್‌ ರಿಂಗ್‌ ರೋಡ್‌, ಉಪ ನಗರ ರೈಲು ಯೋಜನೆಗಳನ್ನು ಶೀಘ್ರವಾಗಿ ಸಾಕಾರಗೊಳಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಬೆಂಗಳೂರಿನ ಕೆರೆಗಳ ಸಂರಕ್ಷಣೆ, ವೈಜ್ಞಾನಿಕ ಕಸ ವಿಲೇವಾರಿ ಕುರಿತೂ ಸಹ ದೂರದೃಷ್ಟಿಯ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಬೆಂಗಳೂರಿಗೆ ವಿಶ್ವದರ್ಜೆಯ ಮೂಲಸೌಲಭ್ಯಗಳನ್ನು ಕಲ್ಪಿಸಬೇಕಾದದ್ದು ಸರ್ಕಾರದ ಮುಂದಿರುವ ದೊಡ್ಡ ಸವಾಲು. ಈ ನಿಟ್ಟಿನಲ್ಲಿ ಇರುವ ತೊಡಕುಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಲಾಗುತ್ತಿದೆ ಎಂದರು.

ಕ್ರೀಡಾಸಾಧಕರಿಗೆ ಸನ್ಮಾನ: ಮೌಂಟ್‌ಎವರೆಸ್ಟ್‌ ಏರಿಸಿದ ಸಾಹಸಿ ಅರಣ್ಯ ರಕ್ಷಕ ಸಿ.ವಿಕ್ರಮ್‌, ಕಾಮನ್‌ವೆಲ್ತ್‌ ಗೇಮ್‌ನಲ್ಲಿ ಬೆಳ್ಳಿ ಪದಕ ಪಡೆದ ಪಿ.ಗುರುರಾಜ್‌ ಹಾಗೂ ಬ್ಯಾಡ್ಮಿಂಟನ್‌ ತಾರೆ ಅಶ್ವಿ‌ನಿ ಪೊನ್ನಪ್ಪ ಅವರನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಸನ್ಮಾನಿಸಿದರು.

ಹಸಿರು ಕರ್ನಾಟಕ ಯೋಜನೆಗೆ ಚಾಲನೆ: ಮನೆಗೊಂದು ಮರ, ಊರಿಗೊಂದು ವನ ನಿರ್ಮಿಸುವ ಕಾರ್ಯಕ್ರಮವಾದ ಹಸಿರು ಕರ್ನಾಟಕ ಯೋಜನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಲನೆ ನೀಡಿ, ಎಲ್ಲರಿಗೂ ಪ್ರತಿಜ್ಞಾ ವಿಧಿ ಬೋಧಿಸಿದರು. ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್‌, ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ಎನ್‌. ರಾಜು, ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್‌ ಮೊದಲಾದ ಅಧಿಕಾರಿಗಳಿಗೆ ಮತ್ತು ಶಾಲಾ ಮಕ್ಕಳಿಗೆ ಸಸಿ ವಿತರಿಸಿದರು.

“ಪ್ರತಿ ಎರಡು ವರ್ಷಕ್ಕೊಮ್ಮೆ ಬೆಂಗಳೂರಿನಲ್ಲಿ ನಡೆಯುವ “ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನ ಈಗಾಗಲೇ ವಿಶ್ವದ ಗಮನ ಸೆಳೆದಿದೆ. ಈ ಪ್ರತಿಷ್ಠಿತ ಪ್ರದರ್ಶನದ ಸ್ಥಳಾಂತರದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪ್ರತಿರೋಧ ವ್ಯಕ್ತವಾಗುತ್ತಿದೆ. ಈ ಬಗ್ಗೆ ಪ್ರಧಾನಮಂತ್ರಿ ಹಾಗೂ ಕೇಂದ್ರ ರಕ್ಷಣಾ ಸಚಿವರಿಗೆ ನಾನು ಪತ್ರ ಬರೆದಿದ್ದೇನೆ. ಸಾರ್ವಜನಿಕ ಅಭಿಪ್ರಾಯಕ್ಕೆ ಕೇಂದ್ರ ಸ್ಪಂದಿಸುವ ನಿರೀಕ್ಷೆ ನನ್ನದು’.
-ಎಚ್‌.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ. 

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.