ಪರಿಹಾರ ಸಾಮಗ್ರಿ ರವಾನೆ
Team Udayavani, Aug 19, 2018, 11:59 AM IST
ಬೆಂಗಳೂರು: ಮಳೆಯಿಂದ ತೊಂದರೆ ಗೊಳಗಾದ ಕೊಡಗು ಜಿಲ್ಲೆಯ ಜನರಿಗೆ ಅಗತ್ಯವಾದ ಆಹಾರ ಪದಾರ್ಥ, ಔಷಧ, ಬಿಸ್ಕೆಟ್, ಬ್ಲಾಂಕೆಟ್, ಅಕ್ಕಿ, ಸೀರೆ, ನೈಟಿ, ಸ್ಯಾನಿಟರಿ ಪ್ಯಾಡ್ ಸೇರಿದಂತೆ ರಾಜ್ಯ ಬಿಜೆಪಿಯಿಂದ ಸಂಗ್ರಹಿಸಿದ ಒಂದು ಲಾರಿ ಲೋಡ್ ಪರಿಹಾರ ಸಾಮಗ್ರಿಗಳನ್ನು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಖುದ್ದುಗಾಗಿ ಕೊಡಗಿಗೆ ಕೊಂಡೊಯ್ದರು.
ಕೊಡಗು ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದು ಮನೆಗಳನ್ನು ಕಳೆದುಕೊಂಡವರಿಗೆ ಬಟ್ಟೆ, ಬ್ಲಾಂಕೆಟ್ ಮತ್ತಿತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋ ಗುತ್ತಿದ್ದೇನೆ. ಮಳೆಯಿಂದ ಹಾನಿಗೊಳಗಾದ ಉಳಿದ ಜಿಲ್ಲೆಗಳಿಗೂ ಪರಿಹಾರ ಸಾಮಗ್ರಿ ಕಳುಹಿಸಲು ಬಿಜೆಪಿ ಸಿದ್ಧವಿದೆ. ಸಾರ್ವಜನಿಕರು ಉದಾರ ನೆರವು ನೀಡಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ ನಿಧಿ: ಕೆಪಿಸಿಸಿ ವತಿಯಿಂದಲೂ ಸಂತ್ರಸ್ತ್ರರಿಗೆ ಪರಿಹಾರ ನಿಧಿ ಸ್ಥಾಪಿಸಲಾಗಿದ್ದು, ರಾಜ್ಯಸಭೆ ಸದಸ್ಯ ಕೆ.ಸಿ.ರಾಮಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಸಹ ರಚಿಸಲಾಗಿದೆ. ಕೊಡಗು ಜಿಲ್ಲೆಗೆ ಆಹಾರ ಪದಾರ್ಥ, ಔಷಧ, ಉಡುಪಿ ಸೇರಿದಂತೆ ಪರಿಹಾರ ಸಾಮಗ್ರಿ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್ ತಿಳಿಸಿದ್ದಾರೆ.
ನಟ ಶಿವರಾಜ್ಕುಮಾರ್ ಅವರು ಸಾಮಾಜಿಕ ಜಾಲತಾಣದ ಮೂಲಕ ಕೊಡಗು ಮಳೆ ಸಂತ್ರಸ್ತರಿಗೆ ಉದಾರವಾಗಿ ನೆರವು ನೀಡುವಂತೆ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ