ಎಸ್‌ಬಿಐ ಗೃಹಸಾಲ ಉತ್ಸವಕ್ಕೆ ಚಾಲನೆ


Team Udayavani, Aug 19, 2018, 11:59 AM IST

sbi.jpg

ಬೆಂಗಳೂರು: ಸಾರ್ವಜನಿಕ ಕ್ಷೇತ್ರದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಸೇಂಟ್‌ ಮಾರ್ಕ್ಸ್ ರಸ್ತೆಯ ಸ್ಥಳೀಯ ಕೇಂದ್ರ ಕಚೇರಿ (ಎಲ್‌ಎಚ್‌ಒ) ಆವರಣದಲ್ಲಿ ಎರಡು ದಿನಗಳ (ಆ.18 ಮತ್ತು 19ರಂದು) ಗೃಹಸಾಲ ಉತ್ಸವ ಹಮ್ಮಿಕೊಂಡಿದೆ.

ಬ್ಯಾಂಕಿನ ಮುಖ್ಯ ಮಹಾಪ್ರಬಂಧಕ ಅಭಿಜಿತ್‌ ಮಜುಂದಾರ್‌ ಅವರು ಗೃಹಸಾಲ ಉತ್ಸವಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಎರಡು ದಿನಗಳ ಈ ಉತ್ಸವದಲ್ಲಿ ಗೃಹ ಸಾಲ ಮಾತ್ರವಲ್ಲದೆ, ವಾಹನ ಹಾಗೂ ಇತರ ಸಾಲಗಳನ್ನು ಸಹ ನೀಡಲಾಗುತ್ತದೆ.

ಅತ್ಯಲ್ಪ ಸಮಯದಲ್ಲಿ ಸ್ಥಳದಲ್ಲೇ ಸಾಲ ಮಂಜೂರು ಮಾಡುವುದು ಉತ್ಸವ ವಿಶೇಷವಾಗಿದೆ. ಹಾಗೇ ಗ್ರಾಹಕರು ಬಡ್ಡಿ ದರದ ಸಹಾಯಧನ ಕೂಡ ಪಡೆಯಲಿದ್ದಾರೆ ಎಂದರು. ಈ ಸಾಲ ಉತ್ಸವ ಎಸ್‌ಬಿಐ ಬೆಂಗಳೂರು ವೃತ್ತದ ಅತಿ ದೊಡ್ಡ ವಹಿವಾಟು ಪ್ರಕ್ರಿಯೆಯಾಗಿದ್ದು, ಒಂದು ರೀತಿಯಲ್ಲಿ ನಗರದ ರಿಯಲ್‌ ಎಸ್ಟೇಟ್‌ ಉದ್ಯಮಕ್ಕೆ ಸ್ಫೂರ್ತಿಯೂ ಆಗಿದೆ.

ನೋಟು ಅಮಾನ್ಯ, ಜಿಎಸ್‌ಟಿ ಮತ್ತು ರೆರಾ ಜಾರಿ ನಂತರ ಗ್ರಾಹಕರಲ್ಲಿ ಆಸ್ತಿ ಖರೀದಿ ಬಗ್ಗೆ ನಂಬಿಕೆ ಹೆಚ್ಚಾಗಿದೆ. ಅಲ್ಲದೆ, ರಿಯಲ್‌ ಎಸ್ಟೇಟ್‌ ಕ್ಷೇತ್ರವೂ ನಿಯಂತ್ರಣಕ್ಕೆ ಬಂದಿರುವುದರಿಂದ ಸ್ವಂತ ಮನೆ, ಅಪಾರ್ಟ್‌ಮೆಂಟ್‌ ಅಥವಾ ಸ್ಥಿರಾಸ್ತಿ ಮೇಲೆ ಹೂಡಿಕೆ ಮಾಡುವವರಿಗೆ ಇದು ಸೂಕ್ತ ಕಾಲವೂ ಆಗಿದೆ. ಕಳೆದ ಬಾರಿ ಆಯೋಜಿಸಿದ್ದ ಗೃಹಸಾಲ ಉತ್ಸವದಲ್ಲಿ 1800ಕ್ಕೂ ಅಧಿಕ ಗ್ರಾಹಕರು ಇದರ ಲಾಭ ಪಡೆದಿದ್ದರು.

ಉತ್ಸವದಲ್ಲಿ ಎಲ್ಲ ರೀತಿ ಮನರಂಜನೆ, ಕಾರ್‌ ಎಕ್ಸ್‌ಪೋ, ಫುಡ್‌ ಕೋರ್ಟ್‌, ಸಂಗೀತ ಸಂಜೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಗ್ರಾಹಕರ ವಾಹನಗಳಿಗೆ ಎಸ್‌ಬಿಐ ಆವರಣದ ಪಕ್ಕದಲ್ಲಿ ಪಾರ್ಕಿಂಗ್‌ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಬ್ಯಾಂಕಿನ ಜಿಎಂ (ನೆಟ್‌ವರ್ಕ್‌-3) ಮಂಜು ಎಸ್‌. ಬೊಲಕಣಿ, ಜಿಎಂ ಇನ್ಫಿನಿಟಿ ವ್ಯವಸ್ಥಾಪಕ ನಿರ್ದೇಶಕ ಗುಲಾಂ ಮುಸ್ತಫಾ, ಜಿಎಂ ನೆಟ್‌ವರ್ಕ್‌-1 ವಿನ್ಸೆಂಟ್‌ ಹಾಗೂ ಶೋಭಾ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕ ಜಗದೀಶ್‌ ಸಿಎಚ್‌ ಶರ್ಮ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.