ದಂಡದ ಹಣ ಪ್ರವಾಹ ಸಂತ್ರಸ್ತರಿಗೆ
Team Udayavani, Aug 24, 2018, 10:17 AM IST
ಬೆಂಗಳೂರು: ಮುಂಬೈನ ತಾಜ್ ಹೋಟೆಲ್ನಲ್ಲಿ ನಡೆದ ಭಯೋತ್ಪಾದಕ ಕೃತ್ಯ ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸುವಂತೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ಇದೇ ವೇಳೆ ಅರ್ಜಿದಾರ ಟಿಡಿಆರ್ ಹರಿಶ್ಚಂದ್ರ ಗೌಡ ಎಂಬುವರಿಗೆ 5 ಸಾವಿರ ದಂಡ ವಿಧಿಸಿರುವ ನ್ಯಾಯಾಲಯ, ದಂಡದ ಮೊತ್ತವನ್ನು ಮುಂದಿನ 30 ದಿನಗಳ ಒಳಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವಂತೆ ಆದೇಶಿಸಿದೆ.
ಗುರುವಾರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ವಿಭಾಗೀಯ ಪೀಠ, ಈ ಅರ್ಜಿ ನೈಜ ಸಾಮಾಜಿಕ ಕಾಳಜಿ ಹೊಂದಿಲ್ಲ ಎಂದು ಅಭಿಪ್ರಾಯಪಟ್ಟಿತು. ಅರ್ಜಿದಾರರು ಈ ಹಿಂದೆ ಕೂಡ ಅನಗತ್ಯ ಹಾಗೂ ಸಾಮಾಜಿಕ ಕಾಳಜಿ ಇಲ್ಲದ ಪಿಐಎಲ್ ಗಳನ್ನು ಸಲ್ಲಿಸಿದ್ದ ಅಂಶವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಪೀಠ, ಇಂತಹ ಪಿಐಎಲ್ ಸಲ್ಲಿಸುವುದಿಲ್ಲ ಎಂದು ಹರಿಶ್ಚಂದ್ರಗೌಡ ಅವರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡಿತು.
ಪೂಜೆ ಮಾಡಿದರೆ ಸ್ಫೋಟವಿಲ್ಲ!: ವಿಚಾರಣೆ ವೇಳೆ ಸ್ವತಃ ವಾದಿಸಿದ ಹರಿಶ್ಚಂದ್ರಗೌಡ, “ಮುಂಬೈನಲ್ಲಿ ಅಂತಾರಾಷ್ಟ್ರೀಯ ಭಯೋತ್ಪಾದಕರು ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆಯಿದೆ. ಮಹರಾಷ್ಟ್ರದ ಅಂದಿನ ಮುಖ್ಯಮಂತ್ರಿ ವಿಲಾಸ್ ರಾವ್ ದೇಶ್ಮುಖ್, ಶಿವಮೊಗ್ಗ ಜಿಲ್ಲೆಯ ತುಡೂರಿನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದರೆ ಯಾವುದೇ ಸ್ಫೋಟ ಸಂಭವಿಸುವುದಿಲ್ಲ ಎಂದು ಅಂದಿನ ಕೇಂದ್ರ ರಕ್ಷಣಾ ಸಚಿವರು ಹಾಗೂ ಇತರರಿಗೆ 2005ರ ನ.26ರಂದು ಪತ್ರ ಬರೆದಿದ್ದೆ. ಆದರೆ. ಈ ಪತ್ರವನ್ನು ಆಡಳಿತ ವರ್ಗ ಗಂಭೀರವಾಗಿ ಪರಿಗಣಿಸಲಿಲ್ಲ. ನಂತರ 2008ರಲ್ಲಿ ಉಗ್ರರ ದಾಳಿ ನಡೆದು ಹಲವರು ಪ್ರಾಣ ಕಳೆದುಕೊಂಡರು. ಹೀಗಾಗಿ ಅಧಿಕಾರಿ ವರ್ಗದ ವಿರುದ್ಧ ತನಿಖೆಗೆ ಆದೇಶಿಸಬೇಕು’ ಎಂದು ಕೋರಿದರು.
ಈ ವಾದ ಆಲಿಸಿದ ನ್ಯಾಯಪಿಠ, ಈ ಪ್ರಕರಣ ಸಂಭವಿಸಿ ಹತ್ತು ವರ್ಷಗಳೇ ಕಳೆದಿವೆ. ಅಲ್ಲದೆ ಅರ್ಜಿಯೂ ಸಾರ್ವಜನಿಕ ಹಿತಾಸಕಿತ್ಯ ಅಂಶಗಳಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು