ಪ್ರಾಣಿ ದಯೆ ತೋರದ ಸಂಘಟನೆಗಳು


Team Udayavani, Aug 24, 2018, 11:08 AM IST

blore-9.jpg

ಬೆಂಗಳೂರು: ಪಾರಂಪರಿಕ ಹಬ್ಬಗಳು, ಉತ್ಸವಗಳ ಸಂದರ್ಭದಲ್ಲಿ ಪ್ರಾಣಿಗಳನ್ನು ಬಳಸಿಕೊಂಡಾಗ ಪ್ರಾಣಿಗಳಿಗೆ ಹಿಂಸೆಯಾಗುತ್ತದೆ ಎಂದು ಬೀದಿಗಿಳಿದು ಹೋರಾಟ ಮಾಡುವ ಪ್ರಾಣಿದಯಾ ಸಂಘಗಳಿಗೆ ಕೊಡಗಿನಲ್ಲಿ ಪ್ರವಾಹ, ಗುಡ್ಡಕುಸಿತದಿಂದ ಅನಾಥವಾಗಿರುವ ಪ್ರಾಣಿಗಳ ಮೂಕರೋದನೆ ಕೇಳಿಸದಂತಾಗಿದೆ.

ಕೊಡಗಿನಲ್ಲಿ ಸಂಭವಿಸಿರುವ ಅನಾಹುತದಿಂದ ನೂರಾರು ಮೂಕ ಜೀವಿಗಳು ಸಮಸ್ಯೆಯಲ್ಲಿ ಸಿಲುಕಿ ಸಹಾಯಕ್ಕಾಗಿ ಮೊರೆಯಿಡುತ್ತಿವೆ. ಆಹಾರ ಇಲ್ಲದೆ ನರಳುತ್ತಿವೆ. ಹೀಗಿದ್ದರೂ ಪ್ರಾಣಿಗಳ ರಕ್ಷಣೆಗೆ ಪ್ರಾಣಿದಯಾ ಸಂಘಟನೆಗಳು ಮುಂದಾಗಿರುವ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿವೆ.

ಪ್ರಾಣಿದಯಾ ಸಂಘಟನೆಗಳು ಎಂದು ಹೇಳಿಕೊಳ್ಳುವ ಹಾಗೂ ಪ್ರಾಣಿಗಳಿಗೆ ಸ್ವಲ್ಪ ಹಿಂಸೆಯಾದರೂ ಬೀದಿಗಿಳಿದು ಪ್ರತಿಭಟನೆ ನಡೆಸುವ ಸಂಘಟನೆಗಳು ಕೊಡಗಿನ ಕಡೆಗೆ ಮುಖ ಮಾಡದಿರು ವುದು ವಿಪರ್ಯಾಸದ ಸಂಗತಿಯಾಗಿದ್ದು, ಸಂಘಟನೆಗಳ ನಿಲುವು ಪ್ರಾಣಿಗಳ ರಕ್ಷಣೆಯ ಕುರಿತು ಸಂಸ್ಥೆಗಳು ಹೊಂದಿರುವ ಕಾಳಜಿಯನ್ನು ಪ್ರಶ್ನೆ ಮಾಡುವಂತಿವೆ.

ಮಳೆಯಿಂದ ಕೊಡಗು ಜಿಲ್ಲೆಯ ಬಹುತೇಕ ಭಾಗಗಳ ಸಂಪರ್ಕ ರಸ್ತೆಗಳು ಕಡಿತಗೊಂಡಿವೆ. ಪರಿಣಾಮ ಮತ್ತೂಂದು ಭಾಗದಲ್ಲಿರುವ ನಾಯಿ, ಬೆಕ್ಕು ಸೇರಿದಂತೆ ಇತರೆ ಜಾನುವಾರುಗಳು ಸಮಸ್ಯೆ ಅನುಭವಿಸುತ್ತಿವೆ. ಜತೆಗೆ ಆಹಾರಕ್ಕಾಗಿ ಕೂಗುವಂತಹ ದೃಶ್ಯಗಳು ಕಂಡುಬರುತ್ತಿದ್ದು, ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ದಳ ಸಿಬ್ಬಂದಿ ಅಂತಹ ಪ್ರಾಣಿಗಳ ರಕ್ಷಣೆಗೆ ಮುಂದಾಗುತ್ತಿದ್ದಾರೆ. ಆದರೆ, ಪ್ರಾಣಿದಯಾ ಸಂಘಗಳು ಹೆಚ್ಚಿನ ಪ್ರಮಾಣದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿಲ್ಲ.

ಈ ಕುರಿತು ಪ್ರತಿಕ್ರಿಯಿಸಿದ ಪೀಪಲ್‌ ಫಾರ್‌ ದಿ ಎಥಿಕಲ್‌ ಟ್ರೀಟ್‌ಮೆಂಟ್‌ ಆಫ್ಅ ನಿಮಲ್ಸ್‌ (ಪೇಟಾ) ಇಂಡಿಯಾ ಸಂಸ್ಥೆಯ ಸದಸ್ಯರೊಬ್ಬರು, ಕೇರಳದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪೇಟಾ ಸಂಸ್ಥೆಯ ಸ್ವಯಂ ಸೇವಕರು ಪ್ರಾಣಿಗಳ ರಕ್ಷಣೆಯಲ್ಲಿ ತೊಡಗಿಕೊಂಡಿದ್ದಾರೆ.

ಹೀಗಾಗಿ ರಾಜ್ಯದ ಕೊಡಗು ಜಿಲ್ಲೆಯಲ್ಲಿ ಪ್ರಾಣಿಗಳ ರಕ್ಷಣೆಯನ್ನು ವಿವಿಧ ಪ್ರಾಣಿದಯಾ ಸಂಘಟನೆಗಳ ಸಹಭಾಗಿತ್ವದಲ್ಲಿ ಕೈಗೊಂಡಿದ್ದು, ಸಂಸ್ಥೆಯ ಕಾಲ್‌ಸೆಂಟರ್‌ಗೆ ಕರೆ ಮಾಡಿ ಪ್ರಾಣಿಗಳು ತೊಂದರೆಯಲ್ಲಿರುವುದು ತಿಳಿಸಿದರೆ ಕೂಡಲೇ ಸಂಸ್ಥೆಗಳು ರಕ್ಷಣೆಗೆ ಮುಂದಾಗಲಿದ್ದಾರೆ ಎಂದು ಹೇಳಿದರು.

60 ಪ್ರಾಣಿಗಳ ರಕ್ಷಣೆ: ನಗರದ ಕ್ಯೂಪ ಸಂಸ್ಥೆಯ ವತಿಯಿಂದ 10 ಜನರ ತಂಡವೊಂದು ಕೊಡಗು ಜಿಲ್ಲೆಯ ಬೈಲುಕುಪ್ಪೆಯಲ್ಲಿ ಪ್ರಾಣಿಗಳ ಪುನರ್‌ವಸತಿ ಕೇಂದ್ರವನ್ನು ತೆರೆಯಲಾಗಿದ್ದು, ತಂಡದಲ್ಲಿ ಇಬ್ಬರು ಪಶು ವೈದ್ಯರಿದ್ದಾರೆ. ಕಳೆದ 3 ದಿನಗಳಿಂದ ಕಾರ್ಯಾಚರಣೆಯಲ್ಲಿ ತೊಡಗಿರುವ ಸ್ವಯಂ ಸೇವಕರು ಸ್ಥಳೀಯರ ನೆರವಿನೊಂದಿಗೆ ಸುಮಾರು 20 ಹಸುಗಳು ಹಾಗೂ 40 ನಾಯಿಗಳನ್ನು ರಕ್ಷಣೆ ಮಾಡಿ ಚಿಕಿತ್ಸೆ ನೀಡುತ್ತಿದ್ದಾರೆ.  

ಕೆಲ ಸಂಸ್ಥೆಗಳ ಸಹಾಯ ದಿಂದ ಕೊಡಗಿನಲ್ಲಿ ಪ್ರಾಣಿಗಳನ್ನು ರಕ್ಷಣೆ ಕಾರ್ಯ ಕೈಗೊಂಡಿದ್ದು, ಬೈಲುಕುಪ್ಪೆಯಲ್ಲಿ ಪ್ರಾಣಿ ಪುನರ್‌ವಸತಿ ಕಲ್ಪಿಸಲು ಮುಂದಾಗಿದ್ದು, 10 ಜನರ ತಂಡ ಈಗಾಗಲೇ 60 ಪ್ರಾಣಿಗಳನ್ನು ರಕ್ಷಿಸಿದ್ದಾರೆ.  
 ಡಾ.ಶೀಲಾರಾವ್‌, ಕ್ಯೂಪಾ ಅಧ್ಯಕೆ

ನಮ್ಮ ಸಂಘಟನೆಯ ಕಾರ್ಯಕರ್ತರು ಯಾರೂ ಹೋಗಿಲ್ಲ. ಆದರೆ, ಕೊಡಗಿನಲ್ಲೇ ಇರುವ ಕಾರ್ಯಕರ್ತರು ಕೂಡ ಘಟನೆಗಳ ಬಗ್ಗೆ ಮಾಹಿತಿ ಕೊಡುತ್ತಿಲ್ಲ. ಪ್ರಾಣಿಗಳ ಸಾವು-ನೋವಿನ ಬಗ್ಗೆ ಮಾಹಿತಿ ಸಿಗುತ್ತಿಲ್ಲ.
 ಪುಷ್ಪವತಿ, ಕಾರ್ಯದರ್ಶಿ ಪ್ರಾಣಿದಯಾ ಸಂಘ, ಹೆಬ್ಟಾಳ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.