ಚಾಲಕ, ನಿರ್ವಾಹಕರ ದಿಢೀರ್‌ ಪ್ರತಿಭಟನೆ


Team Udayavani, Sep 4, 2018, 12:19 PM IST

chalaka.jpg

ಬೆಂಗಳೂರು: ಮೇಲಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಘಟಕ 34ರಲ್ಲಿ ಚಾಲಕರು ಮತ್ತು ನಿರ್ವಾಹಕರು ಸೋಮವಾರ ಕರ್ತವ್ಯಕ್ಕೆ ಹಾಜರಾಗದೆ ದಿಢೀರ್‌ ಪ್ರತಿಭಟನೆ ನಡೆಸಿದರು. ಇದರಿಂದ ಸುಮಾರು ಮೂರು ತಾಸು ಉದ್ದೇಶಿತ ಘಟಕದ ಬಸ್‌ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಯಿತು.

ಬೆಳಿಗ್ಗೆ 6 ಗಂಟೆಯಿಂದಲೇ ಘಟಕದ ಆವರಣದಲ್ಲಿ ಸೇರಿದ ನೂರಕ್ಕೂ ಅಧಿಕ ಸಿಬ್ಬಂದಿ ಕರ್ತವ್ಯಕ್ಕೆ ಗೈರುಹಾಜರಾದರು. ಇದರಿಂದ 120ಕ್ಕೂ ಹೆಚ್ಚು ಬಸ್‌ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಯಿತು. ಇದರ ಬಿಸಿ ಪ್ರಯಾಣಿಕರಿಗೂ ತಟ್ಟಿತು. ಉದ್ದೇಶಿತ ಘಟಕದಿಂದ ನಿತ್ಯ ಮೆಜೆಸ್ಟಿಕ್‌, ಬನಶಂಕರಿ, ಕೆ.ಆರ್‌. ಮಾರುಕಟ್ಟೆ, ಹತ್ತಿತರ ಮೆಟ್ರೋ ನಿಲ್ದಾಣಗಳಿಗೆ ತೆರಳುತ್ತವೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಆ ಮಾರ್ಗದಲ್ಲಿ ತೆರಳುವವರು ಗಂಟೆಗಟ್ಟಲೆ ಬಸ್‌ಗಾಗಿ ಕಾಯಬೇಕಾಯಿತು.

ರಜೆ ಮಂಜೂರು, ಸೂಚನೆ ಧಿಕ್ಕರಿಸಿ ಮಹಿಳಾ ಸಿಬ್ಬಂದಿಯನ್ನು ಎರಡನೇ ಪಾಳಿಗೆ ನಿಯೋಜಿಸುವುದು, ಅನಾರೋಗ್ಯದ ಹಿನ್ನೆಲೆ ರಜೆ ಸೇರಿದಂತೆ ಹಲವು ಸೇವೆಗಳ ವಿಚಾರದಲ್ಲಿ ವಿನಾಕಾರಣ ಘಟಕದ ವ್ಯವಸ್ಥಾಪಕರು ಕಿರುಕುಳ ನೀಡುತ್ತಿದ್ದಾರೆ. ಈ ಸಂಬಂಧ ಮೇಲಧಿಕಾರಿಗಳಿಗೆ ದೂರು ಕೂಡ ಸಲ್ಲಿಸ
ಲಾಗಿತ್ತು. ಆದರೆ, ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಬೇಕಾಯಿತು ಎಂದು ಚಾಲಕ ಮಹೇಶ್ವರ್‌ ಆಕ್ರೋಶ ವ್ಯಕ್ತಪಡಿಸಿದರು. 

ಘಟಕ 34ರಲ್ಲಿ (ಜಂಬೂಸವಾರಿ ದಿನ್ನೆ) ಕಾರ್ಯನಿರ್ವಹಿಸುತ್ತಿರುವ ವ್ಯವಸ್ಥಾಪಕರು ಈಗಾಗಲೇ ನಾಲ್ಕು ಕಡೆ ವರ್ಗಾವಣೆಗೊಂಡಿದ್ದಾರೆ. ಅಲ್ಲೆಲ್ಲಾ ಸಿಬ್ಬಂದಿ ಇದೇ ರೀತಿಯ ಕಿರುಕುಳ ಅನುಭವಿಸಿದ್ದಾರೆ. ಈ ವ್ಯವಸ್ಥಾಪಕರನ್ನು ಕೂಡಲೇ ಎತ್ತಂಗಡಿ ಮಾಡಬೇಕು ಎಂದು ಸಿಬ್ಬಂದಿ ಪಟ್ಟುಹಿಡಿದರು. ಆಗ, ಎಐಟಿಯುಸಿ  ಪ್ರಧಾನ ಕಾರ್ಯದರ್ಶಿ ಅನಂತ ಸುಬ್ಬರಾವ್‌ ಮತ್ತು ಬಿಎಂಟಿಸಿ ನಿರ್ದೇಶಕ (ಭದ್ರತೆ ಮತ್ತು ಜಾಗೃತಿ) ಪ್ರಕಾಶಗೌಡ ಸ್ಥಳಕ್ಕೆ ಧಾವಿಸಿದರು.

ನಂತರ ಮನವೊಲಿಕೆ ಪ್ರಯತ್ನ ನಡೆಯಿತು. ಅಧಿಕಾರಿಗಳ ಭರವಸೆ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಸಿಬ್ಬಂದಿ ಹಲವು ದೂರುಗಳನ್ನು ಹೇಳಿಕೊಂಡಿದ್ದಾರೆ. ಲಿಖೀತವಾಗಿಯೂ ನನಗೆ ಸಲ್ಲಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಸಿಬ್ಬಂದಿ ಪ್ರತಿಭಟನೆಯಿಂದ 120 ಬಸ್‌ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಪ್ರಕಾಶಗೌಡ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.